ಬೆಂಗಳೂರು : ಈ ತಿಂಗಳ ಅಂತ್ಯದಲ್ಲಿ ಮೂರು ದಿನ ವಿಧಾನಸೌಧ ಅಥವಾ ಫ್ರೀಡಂಪಾರ್ಕ್ನಲ್ಲಿ ಸತ್ಯಾಗ್ರಹ ಮಾಡ್ತೇನೆ. ನಾಳೆ ಸತ್ಯಾಗ್ರಹದ ದಿನಾಂಕ ನಿಗದಿ ಮಾಡುತ್ತೇನೆ ಎಂದು ಬೆಂಗಳೂರಿನಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದ್ದಾರೆ. ಮುನಿರತ್ನ ಕ್ಷೇತ್ರದಲ್ಲಿ ಸರ್ಕಾರ ಸೇಡಿನ ರಾಜಕಾರಣ ಮಾಡುತ್ತಿದೆ. ಅಭಿವೃದ್ಧಿ ಕೆಲಸಗಳಿಗೆ ಅನುದಾನ ನಿಲ್ಲಿಸಿ ಗೊಂದಲ ಮಾಡಿದ್ದಾರೆ. ರಾಜ್ಯದಲ್ಲಿ ಎಲ್ಲೂ ಕೂಡ ಗುತ್ತಿಗೆದಾರರು ಕೆಲಸ ಮಾಡುತ್ತಿಲ್ಲ. ಹಳೇ ಕೆಲಸಕ್ಕೂ 7ರಿಂದ 8 ಪರ್ಸೆಂಟ್ ಕಮಿಷನ್ ಕೇಳುತ್ತಿದ್ದಾರೆ. ಈ ರೀತಿಯ ಸೇಡಿನ ರಾಜಕಾರಣ ನಿರೀಕ್ಷೆ ಮಾಡಿರಲಿಲ್ಲ. ಬೆಳಗಾವಿ ಅಧಿವೇಶನಕ್ಕೂ ಮುನ್ನ ಸಾಂಕೇತಿಕ ಸತ್ಯಾಗ್ರಹ ಮಾಡ್ತೇವೆ. ಬೆಳಗಾವಿ ಅಧಿವೇಶನದಲ್ಲಿ ಚರ್ಚಿಸಲು ನಮ್ಮ ಶಾಸಕರಿಗೆ ಹೇಳುತ್ತೇನೆ ಎಂದು ಕಾಂಗ್ರೆಸ್ ವಿರುದ್ಧ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.
ಇಂದು ಬೆಂಗಳೂರು ನಗರ ಪ್ರದಕ್ಷಿಣೆ ಕೈಗೊಂಡಿದ್ದ ಮಾಜಿ ಸಿಎಂ ಯಡಿಯೂರಪ್ಪ ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ರೌಂಡ್ಸ್ ಹಾಕಿದರು. ಆರ್.ಆರ್.ನಗರ ಕ್ಷೇತ್ರದಲ್ಲಿ ಸ್ಥಗಿತಗೊಂಡ ಕಾಮಗಾರಿಗಳ ವೀಕ್ಷಣೆ ಮಾಡಿದರು. ಈ ವೇಳೆ ಮಾತನಾಡಿದ ಅವರು ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.
ಮುನಿರತ್ನ ಕ್ಷೇತ್ರದಲ್ಲಿ ಸೇಡಿನ ರಾಜಕಾರಣ ನಡೆಯುತ್ತಿದೆ. ಅಭಿವೃದ್ಧಿ ಕಾರ್ಯಗಳಿಗೆ ಹಣ ಮಂಜೂರು ಮಾಡಿ ಅರ್ಧಂಬರ್ಧ ಕೆಲಸ ನಿಲ್ಲಿಸಿ ಗೊಂದಲ ಮಾಡಿದ್ದಾರೆ. ಸತ್ಯಾಗ್ರಹ ಮಾಡಿ ಸರ್ಕಾರಕ್ಕೆ ಎಚ್ಚರಿಕೆ ಕೊಡುತ್ತೇನೆ. ರಾಜ್ಯದಲ್ಲಿ ಎಲ್ಲೂ ಕೂಡಾ ಗುತ್ತಿಗೆದಾರರು ಕೆಲಸ ಮಾಡುತ್ತಿಲ್ಲ. ಹಳೆಯ ಕೆಲಸಕ್ಕೂ 7-8 % ಕಮಿಷನ್ ಕೇಳುತ್ತಿದ್ದಾರೆ. ಈ ರೀತಿಯ ಸೇಡಿನ ರಾಜಕಾರಣ ನಿರೀಕ್ಷೆ ಮಾಡಿರಲಿಲ್ಲ. ರಾಜರಾಜೇಶ್ವರಿ ನಗರದಲ್ಲಿ ಕೆಲವು ರಸ್ತೆ ನೋಡಿದಾಗ ಹಳ್ಳಿಯಲ್ಲಿದ್ದೇವೋ ಎಂಬ ಅನುಮಾನ ಬರುತ್ತದೆ. ಬೆಳಗಾವಿ ಅಧಿವೇಶನಕ್ಕೂ ಮೊದಲು ಸಾಂಕೇತಿಕ ಸತ್ಯಾಗ್ರಹ ಮಾಡುತ್ತೇವೆ. ರಾಜರಾಜೇಶ್ವರಿ ನಗರದ 126 ಕೋಟಿ ಅನುದಾನ ವಾಪಸ್ ಕೊಡಿಸಲು ಸರ್ಕಾರದ ಜೊತೆ ಮಾತಾಡಲು ಇದುವರೆಗೆ ನನಗೆ ಯಾರೂ ಸಿಕ್ಕಿಲ್ಲ. ಮಾತಾಡುತ್ತೇನೆ, ಪ್ರಯತ್ನ ಮಾಡುತ್ತೇನೆ. ಮಾಡಲಿಲ್ಲ ಅಂದರೆ ಹೋರಾಟ ಅನಿವಾರ್ಯ. ಅದನ್ನು ನಮಗೆ ಹೊಸದಾಗಿ ಹೇಳಿಕೊಡಬೇಕಾಗಿಲ್ಲ. ಗುತ್ತಿಗೆದಾರರು ಕೆಲಸ ಮಾಡಲು ರೆಡಿ ಇಲ್ಲ, ಬಿಟ್ಟು ಓಡಿ ಹೋಗುತ್ತಿದ್ದಾರೆ. ಬೆಳಗಾವಿ ಅಧಿವೇಶನದಲ್ಲಿ ಚರ್ಚೆ ಮಾಡಲು ನಮ್ಮ ಶಾಸಕರಿಗೆ ಹೇಳುತ್ತೇನೆ ಎಂದರು.
ಇನ್ನು ದೀಪಾವಳಿ ಬಳಿಕ ಕಾಂಗ್ರೆಸ್ ಗೆ ಶಾಸಕರು ಹೋಗುವ ವಿಚಾರ ಸಂಬಂಧ ಪ್ರತಿಕ್ರಿಯೆ ನೀಡಿದ ಬಿಎಸ್ವೈ, ಯಾರು ಎಲ್ಲಿ ಬೇಕಾದರೂ ಹೋಗಲಿ. ಅದರ ಬಗ್ಗ ನಾನು ಚಿಂತೆ ಮಾಡುತ್ತಿಲ್ಲ. ವಿಪಕ್ಷವಾಗಿ ಕೆಲಸ ಮಾಡುವ ಬಗ್ಗೆ ನಾನು ಯೋಚನೆ ಮಾಡುತ್ತಿದ್ದೇನೆ. ಬೇರೆ ವಿಷಯದ ಬಗ್ಗೆ ಚರ್ಚೆ ಮಾಡಲು ನಾನು ಇಷ್ಟಪಡಲ್ಲ ಎಂದರು. ಇದೇ ವೇಳೆ ಅನುದಾನ ತಡೆ ಹಿಡಿಯಲು ಅಕ್ರಮ ಕಾಮಗಾರಿಗಳು ಕಾರಣ ಎಂಬ ಡಿಸಿಎಂ ಹೇಳಿಕೆ ವಿಚಾರ ಸಂಬಂಧ ಬಿಎಸ್ವೈ ಮಾತನಾಡಿದ್ದು, ಅಕ್ರಮ ಕಾಮಗಾರಿ ಆಗಿದ್ದರೆ ಅದನ್ನು ತನಿಖೆ ಮಾಡಿಸಿ ಕ್ರಮ ತೆಗೆದುಕೊಳ್ಳಲಿ. ಅದನ್ನು ಬಿಟ್ಟು ಎಲ್ಲಾ ಕಾಮಗಾರಿಗಳನ್ನು ತಡೆ ಹಿಡಿಯುವುದು ಎಷ್ಟು ಸರಿ? ಇದನ್ನು ನಾನು ಡಿ.ಕೆ. ಶಿವಕುಮಾರ್ ಅವರಿಗೆ ಕೇಳುತ್ತೇನೆ. ಇದು ಸೇಡಿನ ರಾಜಕಾರಣವಲ್ಲದೇ ಬೇರೆ ಅಲ್ಲ. ಈ ರೀತಿ ಮಾಡಬಾರದು ಎಂದು ಸರ್ಕಾರವನ್ನು ಒತ್ತಾಯಿಸುತ್ತೇನೆ ಎಂದರು.
ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…
ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…
ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್ಗೆ…
ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…
ಆರ್ಎಸ್ಎಸ್ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…
ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…