ಬೆಂಗಳೂರು: ನಾಡಪ್ರಭು ಕೆಂಪೇಗೌಡರು ಯಾರೋ ಒಬ್ಬರ ಸ್ವತ್ತಲ್ಲ. ಅವರು ಎಲ್ಲ ಸಮುದಾಯಗಳನ್ನು ಒಟ್ಟಿಗೆ ತೆಗೆದುಕೊಂಡು ಹೋಗಿದ್ದರು. ಆದರೆ ಕಾಂಗ್ರೆಸ್ ಕೆಂಪೇಗೌಡರ ಸಮುದಾಯವನ್ನೇ ಒಂದಾಗಿರಲು ಬಿಡುತ್ತಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆರೋಪಿಸಿದರು.
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಆರ್.ಅಶೋಕ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಒಕ್ಕಲಿಗ ಸಮುದಾಯದ ಪ್ರಶ್ನಾತೀತ ನಾಯಕರು. ಕೆಂಪೇಗೌಡ ಜಯಂತಿಗೆ ಅವರನ್ನು ಗೌರವದಿಂದ ಆಹ್ವಾನಿಸಬೇಕಿತ್ತು. ಈ ಜಯಂತಿ ರಾಜಕೀಯಕ್ಕೆ ವೇದಿಕೆಯಾಗಬಾರದು. ಇದು ಕಾಂಗ್ರೆಸ್ ಸರ್ಕಾರದ ದ್ವೇಷದ ರಾಜಕಾರಣವಾಗಿದೆ. ಈ ಜಯಂತಿ ಆಚರಣೆಯನ್ನು ಜನರ ದುಡ್ಡಿನಿಂದ ಮಾಡಲಾಗುತ್ತಿದೆ. ಇಂತಹ ಕಾರ್ಯಕ್ರಮಕ್ಕೆ ಸಮುದಾಯದ ಎಲ್ಲ ಹಿರಿಯರನ್ನು ಆಹ್ವಾನಿಸಬೇಕು ಎಂದರು.
ನಾಡಪ್ರಭು ಕೆಂಪೇಗೌಡರು ಬೆಂಗಳೂರು ನಿರ್ಮಿಸಿದ ಮಹಾನ್ ನಾಯಕರು. ಕೆರೆ, ಪೇಟೆಗಳನ್ನು ನಿರ್ಮಿಸಿ ಅಭಿವೃದ್ಧಿಯಿಂದ ಜನರನ್ನು ಗೆದ್ದಿದ್ದರು. ಹಿಂದಿನ ಬಿಜೆಪಿ ಸರ್ಕಾರದಲ್ಲಿ ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ ಬೃಹತ್ ಕಂಚಿನ ಪ್ರತಿಮೆ ನಿರ್ಮಿಸಲಾಯಿತು. ವಿಧಾನಸೌಧದ ಮುಂಭಾಗ ಈವರೆಗೆ ಕೆಂಪೇಗೌಡರ ಪ್ರತಿಮೆ ಇರಲಿಲ್ಲ. ನಾನು ಸಚಿವನಾಗಿದ್ದಾಗ, ಅಂದಿನ ಸಚಿವ ಅಶ್ವತ್ಥನಾರಾಯಣ ಅವರೊಂದಿಗೆ ಅಶ್ವಾರೋಹಿ ಕೆಂಪೇಗೌಡರ ಪ್ರತಿಮೆ ಸ್ಥಾಪಿಸಿದೆ. ಪೂರ್ವಜರನ್ನು ನೆನಪಿಸುವ ಕೆಲಸ ಸದಾ ನಡೆಯಬೇಕು ಎಂದು ಹೇಳಿದರು.
ಶಾಲಾ ಪಠ್ಯಗಳಲ್ಲಿ ಹೆಚ್ಚಾಗಿ ಕೆಂಪೇಗೌಡರ ಚರಿತ್ರೆ ದಾಖಲಾದರೆ ಮಕ್ಕಳಿಗೆ ಹೆಚ್ಚು ಮಾಹಿತಿ ದೊರೆಯುತ್ತದೆ ಎಂದು ಹೇಳಿದರು.
ಬೆಂಗಳೂರು: ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಕಳೆದ 2023 ಡಿಸೆಂಬರ್.4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ, ಪಶುವೈದ್ಯರು,…
ನವದೆಹಲಿ: ದೇಶದ ಗಮನ ಸೆಳೆದಿರುವ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ನಾಳೆ ಹೊರಬೀಳಲಿದ್ದು, ಘಟಾನುಘಟಿ ರಾಜಕೀಯ ನಾಯಕರ ಭವಿಷ್ಯ…
ಹಾಸನ: ಹಳಿ ಮೇಲೆ ಕೆಲಸ ಮಾಡುತ್ತಿದ್ದ ನೌಕರನಿಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ನೌಕರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಕಲೇಶಪುರ…
ಕೆ.ಆರ್.ನಗರ: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲ್ಲೂಕಿನ ಚೀನರಹಳ್ಳಿ ಗ್ರಾಮದಲ್ಲಿ ನಡೆದಿದೆ.…
ಚುನಾವಣೋತ್ತರ.. ! ಪಂಚರಾಜ್ಯಗಳ ಚುನಾವಣೆ ಮುಗಿಯುತ್ತಿದ್ದಂತೆಯೇ.. ಪ್ರಕಟವಾದವು ಫಲಿತಾಂಶದ ಸಮೀಕ್ಷೆ ಆದರೆ ಯಾರೂ ಮಾಡಿರಲಿಲ್ಲ ಹೀಗೆ ವಾಣಿಜ್ಯ ಸಿಲಿಂಡರ್ ದರ…
ಬೇಸಿಗೆ ತೀವ್ರಗೊಳ್ಳುತ್ತಿದ್ದಂತೆ ರಾಜ್ಯದ ಹಲವೆಡೆ ನೀರಿನ ಕೊರತೆ ಗಂಭೀರವಾಗುತ್ತಿದೆ. ಕೆರೆಗಳು, ಹಳ್ಳಗಳು ಒಣಗುತ್ತಿದ್ದು, ಅಂತರ್ಜಲ ಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ.…