ಬೆಂಗಳೂರು: ನಾಡಪ್ರಭು ಕೆಂಪೇಗೌಡರು ಯಾರೋ ಒಬ್ಬರ ಸ್ವತ್ತಲ್ಲ. ಅವರು ಎಲ್ಲ ಸಮುದಾಯಗಳನ್ನು ಒಟ್ಟಿಗೆ ತೆಗೆದುಕೊಂಡು ಹೋಗಿದ್ದರು. ಆದರೆ ಕಾಂಗ್ರೆಸ್ ಕೆಂಪೇಗೌಡರ ಸಮುದಾಯವನ್ನೇ ಒಂದಾಗಿರಲು ಬಿಡುತ್ತಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆರೋಪಿಸಿದರು.
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಆರ್.ಅಶೋಕ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಒಕ್ಕಲಿಗ ಸಮುದಾಯದ ಪ್ರಶ್ನಾತೀತ ನಾಯಕರು. ಕೆಂಪೇಗೌಡ ಜಯಂತಿಗೆ ಅವರನ್ನು ಗೌರವದಿಂದ ಆಹ್ವಾನಿಸಬೇಕಿತ್ತು. ಈ ಜಯಂತಿ ರಾಜಕೀಯಕ್ಕೆ ವೇದಿಕೆಯಾಗಬಾರದು. ಇದು ಕಾಂಗ್ರೆಸ್ ಸರ್ಕಾರದ ದ್ವೇಷದ ರಾಜಕಾರಣವಾಗಿದೆ. ಈ ಜಯಂತಿ ಆಚರಣೆಯನ್ನು ಜನರ ದುಡ್ಡಿನಿಂದ ಮಾಡಲಾಗುತ್ತಿದೆ. ಇಂತಹ ಕಾರ್ಯಕ್ರಮಕ್ಕೆ ಸಮುದಾಯದ ಎಲ್ಲ ಹಿರಿಯರನ್ನು ಆಹ್ವಾನಿಸಬೇಕು ಎಂದರು.
ನಾಡಪ್ರಭು ಕೆಂಪೇಗೌಡರು ಬೆಂಗಳೂರು ನಿರ್ಮಿಸಿದ ಮಹಾನ್ ನಾಯಕರು. ಕೆರೆ, ಪೇಟೆಗಳನ್ನು ನಿರ್ಮಿಸಿ ಅಭಿವೃದ್ಧಿಯಿಂದ ಜನರನ್ನು ಗೆದ್ದಿದ್ದರು. ಹಿಂದಿನ ಬಿಜೆಪಿ ಸರ್ಕಾರದಲ್ಲಿ ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ ಬೃಹತ್ ಕಂಚಿನ ಪ್ರತಿಮೆ ನಿರ್ಮಿಸಲಾಯಿತು. ವಿಧಾನಸೌಧದ ಮುಂಭಾಗ ಈವರೆಗೆ ಕೆಂಪೇಗೌಡರ ಪ್ರತಿಮೆ ಇರಲಿಲ್ಲ. ನಾನು ಸಚಿವನಾಗಿದ್ದಾಗ, ಅಂದಿನ ಸಚಿವ ಅಶ್ವತ್ಥನಾರಾಯಣ ಅವರೊಂದಿಗೆ ಅಶ್ವಾರೋಹಿ ಕೆಂಪೇಗೌಡರ ಪ್ರತಿಮೆ ಸ್ಥಾಪಿಸಿದೆ. ಪೂರ್ವಜರನ್ನು ನೆನಪಿಸುವ ಕೆಲಸ ಸದಾ ನಡೆಯಬೇಕು ಎಂದು ಹೇಳಿದರು.
ಶಾಲಾ ಪಠ್ಯಗಳಲ್ಲಿ ಹೆಚ್ಚಾಗಿ ಕೆಂಪೇಗೌಡರ ಚರಿತ್ರೆ ದಾಖಲಾದರೆ ಮಕ್ಕಳಿಗೆ ಹೆಚ್ಚು ಮಾಹಿತಿ ದೊರೆಯುತ್ತದೆ ಎಂದು ಹೇಳಿದರು.
ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…
ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…
ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…
ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್ಕೌಂಟರ್ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್,…
ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…