ಮೈಸೂರು: ದೇಶದ ಐಕ್ಯತೆ, ಸ್ವಾತಂತ್ರ್ಯ, ಮತ್ತು ಸಮಗ್ರತೆ ಒಗ್ಗೂಡಿಸಿ ಹೋರಾಡಿದ ಕಾಂಗ್ರೆಸ್ ಪಕ್ಷವೂ ಯಾವತ್ತು ದೇಶ ಹೊಡೆಯುವ ಕೆಲಸ ಮಾಡಿಲ್ಲವೆಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ನಗರದಲ್ಲಿಂದು ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಂಸದ ಡಿ.ಕೆ. ಸುರೇಶ್ ಅವರು ಪ್ರತ್ಯೇಕ ದೇಶದ ಬಗ್ಗೆ ಮಾತನಾಡಿದ್ದು ತಪ್ಪು ಎಂದು ಕಾಂಗ್ರೆಸ್ ಪಕ್ಷದ ನಾಯಕರೆಲ್ಲರೂ ಹೇಳಿದ್ದಾರೆ. ಡಿ.ಕೆ. ಸುರೇಶ್ ಅಸಲಿಗೆ ಆ ಮಾತು ಹೇಳಿರುವುದು ಕೇಂದ್ರದ ಬಜೆಟ್ ನಲ್ಲಿ ಅನುದಾನ ಹಂಚಿಕೆಯಲ್ಲಿ ಆಗುತ್ತಿರುವ ತಾರತಮ್ಯದ ಅಸಮಾಧಾನದಿಂದ ಹೇಳಿಕೆಯನ್ನು ನೀಡಿದ್ದಾರೆ. ದೇಶ ಕಟ್ಟುವುದಕ್ಕಾಗಿ ಹೋರಾಡಿದ ಪಕ್ಷ ಕಾಂಗ್ರೆಸ್ ಎಂದು ಹೇಳಿದ್ದಾರೆ.
ಬಿಜೆಪಿಯವರ ಆಡಳಿತ ಕಾಲಾವಧಿಯಲ್ಲಿ ಅವರು ದೇಶಕ್ಕಾಗಿ ಹೋರಾಟ ನಡೆಸಿದ ನಿದರ್ಶನ ಎಂದಾದರೂ ಇದೆಯೇ? ಕಾಂಗ್ರೆಸ್ ಪಕ್ಷದೇಶ ಒಡೆಯುವ ಕೆಲಸ ಮಾಡಿರುವುದು ಯಾವಾಗ ಎಂದು ಪ್ರಶ್ನಿಸಿದ್ದಾರೆ.
ಮೋದಿ ಪ್ರಧಾನಿ ಅದಾಗಿನಿಂದ ಪ್ರಜಾಪ್ರಭುತ್ವದ ಕಗ್ಗೊಲೆ ಆಗುತ್ತಿದೆ. ಬಿಜೆಪಿ ತನಿಖಾ ಸಂಸ್ಥೆಗಳನ್ನ ದುರ್ಬಳಕೆ ಮಾಡಿಕೊಳ್ಳುತ್ತಿದೆ. ಸರ್ಕಾರ ಬೀಳಿಸುವುದು ಬಿಜೆಪಿಯ ಹುಟ್ಟುಗುಣ. ಬಿಜೆಪಿಗರಿಗೆ ಮೋದಿ ಎದುರು ಮಾತನಾಡುವ ಧೈರ್ಯವಿಲ್ಲ. ಪರಿಹಾರ ರೀಲಿಸ್ ಮಾಡಿದ್ದರೇ ಪ್ರತಿಭಟನೆ ಮಾಡುತ್ತಿರಲಿಲ್ಲ. ಬಿಜೆಪಿ ಮಾಡುವುದೆಲ್ಲಾ ಅಧರ್ಮದ ಕೆಲಸ. ನಾವು ಅನಿವಾರ್ಯವಾಗಿ ಪ್ರತಿಭಟನೆ ಮಾಡುತ್ತಿದದೇವೆ ಎಂದು ಟೀಕಿಸಿದ್ದಾರೆ.
ಹುಣಸೂರು: ರಸ್ತೆ ಮಣ್ಣಿನ ವಿಚಾರಕ್ಕೆ ಗಲಾಟೆ ನಡೆದ ಪರಿಣಾಮ ಮೂವರಿಗೆ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರಿನ…
ಹುಣಸೂರು: ಪಾಳು ಬಾವಿಗೆ ಬಿದ್ದಿದ್ದ ಕಾಡುಹಂದಿಯನ್ನು ರಕ್ಷಣೆ ಮಾಡುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಹುಣಸೂರು ತಾಲ್ಲೂಕಿನ ಹನಗೋಡು ಗ್ರಾಮದಲ್ಲಿ…
ನವದೆಹಲಿ: ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, ಮೇ.1ರಿಂದ ಜಾರಿಗೆ ಬರುವಂತೆ 993ರೂ ಹೆಚ್ಚಳ ಮಾಡಲಾಗಿದೆ. ಬೆಂಗಳೂರಿನಲ್ಲಿ 991…
ಮಂಡ್ಯ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು ಮಂಡ್ಯ:ಪತ್ನಿಯನ್ನು ಕೊಲೆಗೈದಿದ್ದ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಪತಿಗೆ ೨ನೇ ಅಪರ ಜಿಲ್ಲಾ…
ಜಾಗೃತಿ ಉಳುಮೆಗೆ ಮಳೆಯಿಲ್ಲದೆ ಕುಲುಮೆಯಾಗಿದೆ ಇಳೆ ಹೆಚ್ಚಿದ ತಾಪಮಾನ ಬದಲಾವಣೆಯ ಹವಾಮಾನಕೆ ದೇಹದ ಆಂತರಿಕ ತಂಪು ವಿಫಲ ಅದಕೆ ಹೆಚ್ಚುತ್ತಿದೆ…
ಶಾಲಾ ಕಾರ್ಯಕ್ರಮಗಳಲ್ಲಿ ಅಶ್ಲೀಲ ಹಾಡುಗಳಿಗೆ ಶಿಕ್ಷಣ ಇಲಾಖೆ ನಿಷೇಧ ಹೇರಿರುವುದು ಸ್ವಾಗತಾರ್ಹ. ಇಂದಿನ ಶೇ.೮೦ರಷ್ಟು ಸಿನಿಮಾ ಹಾಡುಗಳು ದ್ವಂದ್ವಾರ್ಥ ಹಾಗೂ…