ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆ ಪ್ರಾರಂಭವಾಗಿರುವ ಬೆನ್ನಲ್ಲೇ ರಾಜ್ಯ ರಾಜಕೀಯದ ವಾತಾವರಣವೂ ಸಹ ಸಂಘರ್ಷದ ಹಾದಿ ತುಳಿದಿದೆ.
ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ಬಿಜೆಪಿ ನಾಯಕರನ್ನು ಬಗ್ಗು ಬಡಿಯಲು ಸೇರಿಗೆ ಸಾವಸೇರು ಎಂಬಂತೆ ಕಾಂಗ್ರೆಸ್ ಚಿಂತನೆ ನಡೆಸುತ್ತಿದೆ. ಹೀಗಾಗಿ ಬಿಜೆಪಿ ನಾಯಕರ ವಿರುದ್ಧ ಹಳೆ ಪ್ರಕರಣಗಳನ್ನು ರೀ ಓಪನ್ ಮಾಡಲು ತಂತ್ರಗಾರಿಕೆ ರೂಪಿಸಿದ್ದು, ಈಗಾಗಲೇ ಸರ್ಕಾರದ ಕಾನೂನು ವಿಭಾಗದಲ್ಲಿ ಮೂರು ಸುತ್ತಿನ ಸಭೆಯನ್ನು ಆಯೋಜಿಸಿ, ಈ ವಿಚಾರಗಳನ್ನು ಚರ್ಚೆ ನಡೆಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಸಭೆಗಳನ್ನು ಸಿಎಂ ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ನೇತೃತ್ವದಲ್ಲಿ ನಡೆಸಲಾಗಿದೆ. ಸಭೆಯಲ್ಲಿ ಮುಖ್ಯವಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧದ ಪೋಕ್ಸೋ ಪ್ರಕರಣ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧದ ಡಿನೋಟಿಫಿಕೇಶನ್ ಪ್ರಕರಣ ಹಾಗೂ ವಿರೋಧ ಪಕ್ಷದ ನಾಯಕ ಆರ್.ಅಶೊಕ್ ಅವರ ವಿರುದ್ಧದ ಪ್ರಕರಣ ಕುರಿತು ಚರ್ಚಿಸಲಾಗಿದೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.
ಕಾನೂನು ಘಟಕದ ಸದಸ್ಯರೊಬ್ಬರ ಮಾಹಿತಿ ಆಧಾರದ ಮೇಲೆ ಬಿಜೆಪಿ ಪಕ್ಷದ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ, ಬಿಜೆಪಿಯ ಹಿರಿಯ ಮುಖಂಡ ಸೇರಿದಂತೆ ಇನ್ನುಳಿದಂತೆ ಬಿಜೆಪಿಯ 22 ಪ್ರಬಲ ನಾಯಕರುಗಳಿಗೆ ಸಂಬಂಧಿಸಿದಂತೆ ಭೂವಿವಾದ ಪ್ರಕರಣಗಳನ್ನು ಪತ್ತೆಹಚ್ಚಲಾಗುವುದು ಎಂದು ತಿಳಿಸಿದ್ದಾರೆ.
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ…
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…
ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್ಪಿಜಿಯನ್ನು ಹೊತ್ತ…