ರಾಜ್ಯ

ಕಾಂಗ್ರೆಸ್‌ ಸಚಿವರ ಮಗನಿಗೂ, ಬಿಜೆಪಿ ಶಾಸಕನ ಮಗಳಿಗೂ ಮದುವೆ: ವಿರೋಧಿ ಪಡೆಯ ನಾಯಕರು ಈಗ ಬೀಗರು

ಬೆಂಗಳೂರು: ಕಾಂಗ್ರೆಸ್‌ ನಾಯಕ ಹಾಗೂ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ ಹಾಗೂ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್‌ ಈಗ ಬೀಗರುಗಳಾಗುತ್ತಿದ್ದಾರೆ.

ಎಸ್.ಆರ್.ವಿಶ್ವನಾಥ್‌ ಮಗಳನ್ನು ಭೈರತಿ ಸುರೇಶ್‌ ಪುತ್ರ ಮದುವೆಯಾಗುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ವಿರೋಧಿ ಪಡೆಯ ನಾಯಕರು ಈಗ ನೆಂಟರಾಗುತ್ತಿದ್ದಾರೆ.

ಭೈರತಿ ಸುರೇಶ್‌ ಪುತ್ರ ಸಂಜಯ್‌ ಹಾಗೂ ವಿಶ್ವನಾಥ್‌ ಪುತ್ರಿ ಅಪೂರ್ವ ಇಬ್ಬರು ಕಾಲೇಜು ಸ್ನೇಹಿತರಾಗಿದ್ದರು. ಎರಡೂ ಕುಟುಂಬದ ನಡುವೆ ಇಂದು ಅಂತಿಮ ಹಂತದ ಮದುವೆ ಮಾತುಕತೆ ನಡೆದಿದೆ.
ಶಾಸಕ ವಿಶ್ವನಾಥ್‌ ಮನೆಗೆ ಸುರೇಶ್‌ ಕುಟುಂಬ ತೆರಳಿದ್ದು, ಮದುವೆ ಮಾತುಕತೆ ನಡೆಸಿದ್ದಾರೆ.

ಸಂಜಯ್‌ ಹಾಗೂ ಅಪೂರ್ವ ಇಬ್ಬರು ಮಲ್ಲೇಶ್ವರಂನ ವಿದ್ಯಾಮಂದಿರದಲ್ಲಿ ಶಿಕ್ಷಣ ಪಡೆದುಕೊಂಡಿದ್ದರು. ಇಬ್ಬರ ನಡುವೆ ಕಾಲೇಜು ದಿನಗಳ ಸಮಯದಲ್ಲೇ ಉತ್ತಮ ಸ್ನೇಹವಿತ್ತು.

ಆ ಬಳಿಕ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದು, ಅದರಂತೆ ಇದೀಗ ಇಬ್ಬರ ಪ್ರೇಮ ಮದುವೆ ಹಂತಕ್ಕೆ ಬಂದು ನಿಂತಿದೆ. ಎರಡೂ ಕುಟುಂಬಗಳು ಕುಳಿತು ಮಾತನಾಡಿ ಮದುವೆ ಮಾತುಕತೆ ನಡೆಸಿದ್ದು, ಸದ್ಯದಲ್ಲೇ ಭೈರತಿ ಸುರೇಶ್ ಹಾಗೂ ಎಸ್.ಆರ್.ವಿಶ್ವನಾಥ್‌ ಬೀಗರುಗಳಾಗಲಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

33 mins ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

37 mins ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

43 mins ago

ಸುಬ್ಬಮ್ಮ ಜೋಯಿಸ್ ಮೈಸೂರಿನಲ್ಲಿ ತ್ರಿವರ್ಣಧ್ವಜ ಹಾರಿಸಿದ್ದು

ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…

51 mins ago

ಉರಿ ಉಂಡ ಕರ್ಪೂರ ಟಿ.ಎಸ್.ಸುಬ್ಬಣ್ಣ

ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…

56 mins ago

ಬ್ಯಾರಿಸ್ಟರ್ ಏನೋ ಆದೆ ಆದರೆ ಆಮೇಲೆ?

ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…

1 hour ago