ರಾಜ್ಯ

ʻಒನ್‌ ನೇಷನ್‌ ಒನ್‌ ಎಲೆಕ್ಷನ್‌ʼ ಸ್ವಾಗತಿಸುತ್ತೇನೆ ಎಂದ ಕಾಂಗ್ರೆಸ್‌ ಸಚಿವ ಸಂತೋಷ ಲಾಡ್‌

ಬೆಳಗಾವಿ: ʻಒನ್‌ ನೇಷನ್‌ ಒನ್‌ ಎಲೆಕ್ಷನ್‌ʼ  ಶಿಫಾರಸ್ಸು ಬಗ್ಗೆ ‌ದೇಶದಾದ್ಯಂತ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸುತ್ತಿದೆ. ಈ ನಡುವೆಯೇ ಕಾಂಗ್ರೆಸ್‌ ಸಚಿವ ಸಂತೋಷ್‌ ʻಒನ್‌ ನೇಷನ್‌ ಒನ್‌ ಎಲೆಕ್ಷನ್‌ʼ ಬಗ್ಗೆ ಮಾತನಾಡಿದ್ದು, ಇದನ್ನು ವೈಯಕ್ತಿಕವಾಗಿ ಸ್ವಾಗತಿಸುತ್ತೇನೆ ಎಂದು ಹೇಳಿದ್ದಾರೆ.

ಶುಕ್ರವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ವೈಯಕ್ತಿಕವಾಗಿ ಇದನ್ನು ಸ್ವಾಗತಿಸುತ್ತೇನೆ. ಮೇಲ್ನೋಟದಲ್ಲಿ ಚನ್ನಾಗಿ ಕಾಣುತ್ತಿದೆ ಎಂದಿದ್ದಾರೆ.

ಮಾಜಿ ಪ್ರಧಾನಿ ದಿ.ಜವಹರ್‌ಲಾಲ್‌ ನೆಹರು ಅವರು 1964 ರಲ್ಲಿ ʻಒನ್‌ ನೇಷನ್‌ ಒನ್‌ ಎಲೆಕ್ಷನ್‌ʼ ಕುರಿತು ಕಲ್ಪನೆ ಮಾಡಿದ್ದರು. ಈಗ ಇದು ಯಾವ ರೀತಿ ಇದೆ ಗೊತ್ತಿಲ್ಲ ಎಂದರು.

ಡಿಜಿಟಲ್‌ ಇಂಡಿಯಾ, ಖೊಲೋ ಇಂಡಿಯಾ, ಮೆಕ್‌ ಇನ್‌ ಇಂಡಿಯಾ ಘೋಷಣೆಗಳಾಗಿವೆ. ಜಿಎಸ್‌ಟಿ ಘೋಷಣೆ ಮಾಡಿದರು. ಆದರೆ ಘೋಷಣೆಗಳ ಪರಿಣಾಮ ಏನಾಗಿದೆ? ಇದರಿಂದ ಅಭಿವೃದ್ಧಿ ಏನಾಗಿದೆ ಹೇಳಲಿ ಎಂದು ಪ್ರಶ್ನಿಸಿದ್ದಾರೆ.

ʻಒನ್‌ ನೇಷನ್‌ ಒನ್‌ ಎಲೆಕ್ಷನ್‌ʼ ಸ್ಲೋಗನ್‌ ಆಗಬಾರದು. ಇದು ಕೇವಲ ಪ್ರಚಾರ ಆಗಬಾರದು. ಕೇಂದ್ರ ಸರ್ಕಾರವು ಯೋಜನೆ ಹೆಸರಲ್ಲಿ ಅಭಿವೃದ್ಧಿಗಿಂತ ಪ್ರಚಾರ ಹೆಚ್ಚು ಮಾಡುತ್ತಿದೆ. 11 ವರ್ಷಗಳಿಂದ ಇದೆ ನಡೆಸುತ್ತಿದೆ ಎಂದು ಮೋದಿ ಸರ್ಕಾರದ ವಿರುದ್ಧ ಕಿಡಿಕಾಡಿದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

3 hours ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

3 hours ago

ಕೊಡಗಿನ ಮಲ್ಲಳ್ಳಿ ಫಾಲ್ಸ್‌ನಲ್ಲಿ ಅಭದ್ರತೆ

ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…

3 hours ago

ಮುಚ್ಚುವ ಆತಂಕದಲ್ಲಿ ಶತಮಾನ ಕಂಡ ಶಾಲೆ

ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…

3 hours ago

ಸರ್ಕಾರಿ ಕಚೇರಿ; ಮೂಲ ಸೌಕರ್ಯಗಳಿಗೆ ಗೋರಿ!

ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…

3 hours ago