ಬೆಳಗಾವಿ: ʻಒನ್ ನೇಷನ್ ಒನ್ ಎಲೆಕ್ಷನ್ʼ ಶಿಫಾರಸ್ಸು ಬಗ್ಗೆ ದೇಶದಾದ್ಯಂತ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸುತ್ತಿದೆ. ಈ ನಡುವೆಯೇ ಕಾಂಗ್ರೆಸ್ ಸಚಿವ ಸಂತೋಷ್ ʻಒನ್ ನೇಷನ್ ಒನ್ ಎಲೆಕ್ಷನ್ʼ ಬಗ್ಗೆ ಮಾತನಾಡಿದ್ದು, ಇದನ್ನು ವೈಯಕ್ತಿಕವಾಗಿ ಸ್ವಾಗತಿಸುತ್ತೇನೆ ಎಂದು ಹೇಳಿದ್ದಾರೆ.
ಶುಕ್ರವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ವೈಯಕ್ತಿಕವಾಗಿ ಇದನ್ನು ಸ್ವಾಗತಿಸುತ್ತೇನೆ. ಮೇಲ್ನೋಟದಲ್ಲಿ ಚನ್ನಾಗಿ ಕಾಣುತ್ತಿದೆ ಎಂದಿದ್ದಾರೆ.
ಮಾಜಿ ಪ್ರಧಾನಿ ದಿ.ಜವಹರ್ಲಾಲ್ ನೆಹರು ಅವರು 1964 ರಲ್ಲಿ ʻಒನ್ ನೇಷನ್ ಒನ್ ಎಲೆಕ್ಷನ್ʼ ಕುರಿತು ಕಲ್ಪನೆ ಮಾಡಿದ್ದರು. ಈಗ ಇದು ಯಾವ ರೀತಿ ಇದೆ ಗೊತ್ತಿಲ್ಲ ಎಂದರು.
ಡಿಜಿಟಲ್ ಇಂಡಿಯಾ, ಖೊಲೋ ಇಂಡಿಯಾ, ಮೆಕ್ ಇನ್ ಇಂಡಿಯಾ ಘೋಷಣೆಗಳಾಗಿವೆ. ಜಿಎಸ್ಟಿ ಘೋಷಣೆ ಮಾಡಿದರು. ಆದರೆ ಘೋಷಣೆಗಳ ಪರಿಣಾಮ ಏನಾಗಿದೆ? ಇದರಿಂದ ಅಭಿವೃದ್ಧಿ ಏನಾಗಿದೆ ಹೇಳಲಿ ಎಂದು ಪ್ರಶ್ನಿಸಿದ್ದಾರೆ.
ʻಒನ್ ನೇಷನ್ ಒನ್ ಎಲೆಕ್ಷನ್ʼ ಸ್ಲೋಗನ್ ಆಗಬಾರದು. ಇದು ಕೇವಲ ಪ್ರಚಾರ ಆಗಬಾರದು. ಕೇಂದ್ರ ಸರ್ಕಾರವು ಯೋಜನೆ ಹೆಸರಲ್ಲಿ ಅಭಿವೃದ್ಧಿಗಿಂತ ಪ್ರಚಾರ ಹೆಚ್ಚು ಮಾಡುತ್ತಿದೆ. 11 ವರ್ಷಗಳಿಂದ ಇದೆ ನಡೆಸುತ್ತಿದೆ ಎಂದು ಮೋದಿ ಸರ್ಕಾರದ ವಿರುದ್ಧ ಕಿಡಿಕಾಡಿದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…