ಬೆಂಗಳೂರು: ಅಕ್ರಮ ಆನ್ಲೈನ್ ಮತ್ತು ಆಫ್ಲೈನ್ ಬೆಟ್ಟಿಂಗ್ ಆಪ್ಗಳಿಗೆ ಹಣ ಪೂರೈಕೆ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿದ್ದ ಕೈ ಶಾಸಕ ವಿರೇಂದ್ರ ಪಪ್ಪಿ ಅವರನ್ನು ಮತ್ತೆ ಆರು ದಿನಗಳ ಕಾಲ ಇಡಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.
ವಾದ-ಪ್ರತಿವಾದಗಳನ್ನು ಆಲಿಸಿದ ಬಳಿಕ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಕಸ್ಟಡಿ ವಿಸ್ತರಣೆ ಮಾಡಿ ಆದೇಶ ನೀಡಿದೆ. ಜೊತೆಗೆ 24 ಗಂಟೆಗಳಿಗೊಮ್ಮೆ ವೈದ್ಯಕೀಯ ತಪಾಸಣೆ ಮಾಡಿಸಬೇಕು ಎಂದು ಸೂಚನೆ ನೀಡಿದೆ.
ಶುದ್ಧ ಆಹಾರವನ್ನು ನೀಡಬೇಕು. ಮೆಡಿಸನ್ ನೀಡಬೇಕು. ಆರೋಪಿಗೆ ಸ್ವಲ್ಪ ವಿಶ್ರಾಂತಿ ಕೊಟ್ಟು ವಿಚಾರಣೆ ಮಾಡಬೇಕು. 30 ನಿಮಿಷ ವಕೀಲರ ಭೇಟಿಗೆ ಅವಕಾಶ ನೀಡಬೇಕು. ರಾತ್ರಿ 9 ಗಂಟೆಯ ತನಕ ವಿಚಾರಣೆ ನಡೆಸಬೇಕು ಎಂದು ಕೋರ್ಟ್ ಸೂಚನೆ ನೀಡಿದೆ.
ಚಿತ್ರದುರ್ಗ ಶಾಸಕ ವೀರೇಂದ್ರ ಪಪ್ಪಿಯವರನ್ನು ಇ.ಡಿ ಅಧಿಕಾರಿಗಳು ಅಕ್ರಮ ಆನ್ಲೈನ್ ಮತ್ತು ಆಫ್ಲೈನ್ ಬೆಟ್ಟಿಂಗ್ ಆರೋಪದ ಮೇಲೆ ಬಂಧಿಸಿದ್ದರು. ಅವರ ಮನೆಯಲ್ಲಿ ಮತ್ತು ಸಂಬಂಧಪಟ್ಟ ಕಡೆ ದಾಳಿ ನಡೆಸಿದಾಗ ಕೋಟಿ ಕೋಟಿ ಹಣ, ವಿದೇಶಿ ಕರೆನ್ಸಿ, ಚಿನ್ನಾಭರಣ, ಕಾರ್ಡ್ಗಳು ಎಲ್ಲಾ ಪತ್ತೆಯಾಗಿದ್ದವು. ಈ ಕಾರಣಕ್ಕೆ ಅವರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಕೃಪಾ ದೇವರಾಜ್, ಮಡಿಕೇರಿ ಧೋ... ಎಂದು ಸುರಿಯುವ ಮಳೆ, ಅಜ್ಜ ಕಟ್ಟಿದ ಹಳೇ ನಾಡ ಹೆಂಚಿನ ಮನೆ, ನಿರಂತರವಾಗಿ ಸುರಿಯುವ…
ಜುಲೈ ನಾಲ್ಕು ಮತ್ತು ಐದರ ಶನಿವಾರ ಮತ್ತು ಭಾನುವಾರ ಮೈಸೂರಿನ ಸದರ್ನ್ ಸ್ಟಾರ್ನಲ್ಲಿ ವಾರ್ಷಿಕ ಸಾಹಿತ್ಯ ರಸದೂಟ ಪೃಥ್ವಿ ಸುಧೀಂದ್ರ…
ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್ಬಾರ್) ನಲ್ಲಿ ಸಂಭವಿಸಿದ ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…
ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…
ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…
೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…