ರಾಜ್ಯ

30ರಿಂದ 35 ಡಿಸಿಎಂಗಳನ್ನು ನೇಮಿಸುವುದು ಒಳ್ಳೆಯದು; ಕಾಂಗ್ರೆಸ್‌ ಕಾಲೆಳೆದ ಹೆಚ್‌ಡಿಕೆ

ಕಾಂಗ್ರೆಸ್‌ ಸರ್ಕಾರದಲ್ಲಿ ಮೂರು ಉಪಮುಖ್ಯಮಂತ್ರಿ ಹುದ್ದೆಗಳನ್ನು ಸೃಷ್ಟಿಸುವುದರ ಚರ್ಚೆಯ ಕುರಿತಾಗಿ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾತನಾಡಿರುವ ಅವರು ಕಾಂಗ್ರೆಸ್‌ ಸರ್ಕಾರ ಯಾರದ್ದೋ ದುಡ್ಡಲ್ಲಿ ಯಲ್ಲಮ್ಮನ ಜಾತ್ರೆ ನಡೆಸುತ್ತಿದೆ ಎಂದಿದ್ದು ಜಾತಿಗೊಂದು ಡಿಸಿಎಂ ಸ್ಥಾನ ಕೊಟ್ಟುಬಿಡಿ. 30ರಿಂದ 35 ಡಿಸಿಎಂ ಸ್ಥಾನ ಶಾಸಕರಿಗೆ ಡಿಸಿಎಂ ಸ್ಥಾನ ಕೊಡುವುದು ಒಳ್ಳೆಯದು. ಆಗ ದಿನನಿತ್ಯ ಉಪಮುಖ್ಯಮಂತ್ರಿ ಸ್ಥಾನದ ಬಗ್ಗೆ ಯಾವುದೇ ಗೊಂದಲ ಇರುವುದಿಲ್ಲ ಎಂದರು.

ಈಗ ಗ್ಯಾರಂಟಿ ಯೋಜನೆಗಳನ್ನು ನೋಡಿಕೊಳ್ಳೋಕೆ ಓರ್ವ ಅಧ್ಯಕ್ಷನನ್ನು ನೇಮಿಸುತ್ತಿದ್ದಾರೆ. ಆ ಯೋಜನೆಗಳಿಗೆ ವಾರ್ಷಿಕ 16 ಕೋಟಿ ಹಣ ಬೇಕಂತೆ. ಇದಕ್ಕೆ ಐವರು ಉಪಾಧ್ಯಕ್ಷರು ಯಾಕೆ ಬೇಕು? ಕಾಂಗ್ರೆಸ್‌ ಯಾರದ್ದೋ ದುಡ್ಡಲ್ಲಿ ಯಲ್ಲಮ್ಮನ ಜಾತ್ರೆ ಮಾಡುತ್ತಿದೆ. ಕಾಂಗ್ರೆಸ್‌ ಪರಿಸ್ಥಿತಿ ನನಗೆ ಅರ್ಥವಾಗಿದೆ. ಚುನಾವಣೆ ಬಳಿಕ ಎಲ್ಲಾ ಗೊತ್ತಾಗುತ್ತೆ ಎಂದು ಕುಮಾರಸ್ವಾಮಿ ಹೇಳಿದರು.

ಇನ್ನು ಯುವನಿಧಿ ಯೋಜನೆಯ ನೋಂದಣಿ ಕುರಿತು ಮಾತನಾಡಿದ ಕುಮಾರಸ್ವಾಮಿ ಈ ಯೋಜನೆ ಕಾರ್ಯಕ್ರಮದಲ್ಲಿ ಏನೇನಿದೆ? ಎಷ್ಟು ಜನ ನೋಂದಣಿ ಮಾಡಿಕೊಂಡಿದ್ದಾರೆ? 2023-24ನೇ ಸಾಲಿನಲ್ಲಿ ಎಷ್ಟು ಜನ ಪದವಿ ಪಡೆದುಕೊಂಡಿದ್ದಾರೆ? ಅವರ ಗೈಡ್‌ಲೈನ್ಸ್‌ನಲ್ಲಿ ಏನಿದೆ ಎಂದು ಪ್ರಶ್ನೆ ಹಾಕಿದ್ದಾರೆ.

andolana

Recent Posts

ಮೈಸೂರು | ಗುಂಡೇಟಿನಿಂದ ಚಿರತೆ ಸಾವು ; ತನಿಖೆಗೆ ಈಶ್ವರ ಖಂಡ್ರೆ ಆದೇಶ

ಮೈಸೂರು : ಹುಣಸೂರು ವಿಭಾಗದ ಪಿರಿಯಾಪಟ್ಟಣ ವ್ಯಾಪ್ತಿಯ ಗುಳ್ಳೆದಹಳ್ಳ ರಾಜ್ಯ ಅರಣ್ಯದಿಂದ 2 ಕಿ.ಮೀ ದೂರದಲ್ಲಿರುವ ಕೊಪ್ಪ ವಿಭಾಗದಲ್ಲಿ ಗುಂಡೇಟಿನಿಂದ…

4 hours ago

ಶೀಘ್ರದಲ್ಲೇ ದ್ವಿತೀಯ ಪಿಯುಸಿ ಫಲಿತಾಂಶ : ಡಿಜಿಲಾಕರ್‌ನಲ್ಲೂ ಲಭ್ಯ

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಡೆಸಿದ 2025-2026ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ…

5 hours ago

ಏ.7ರಿಂದ ಮೂರು ದಿನ ಮಳೆ, ಮೈಸೂರಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು : ಕರ್ನಾಟಕದಲ್ಲಿ ಪೂರ್ವ ಮುಂಗಾರು ಏಪ್ರಿಲ್ 2 ನೇ ವಾರದಿಂದ ಚುರುಕಾಗುತ್ತಿದ್ದು, ಏಪ್ರಿಲ್ 7ರಿಂದ ಮೂರು ದಿನಗಳು ರಾಜ್ಯದಲ್ಲಿ…

5 hours ago

ಟ್ರಂಪ್ ಅಂತಿಮ ಗಡುವು ; ಪ್ರತಿದಾಳಿ ಎಚ್ಚರಿಕೆ ನೀಡಿದ ಇರಾನ್‌

ವಾಷಿಂಗ್ಟನ್ : ಒಪ್ಪಂದಕ್ಕೆ ಬನ್ನಿ, ಇಲ್ಲವೇ ಶರಣಾಗಿ, ಇಲ್ಲದಿದ್ದರೆ ಮಂಗಳವಾರ ರಾತ್ರಿ 8 ಗಂಟೆಯ ನಂತರ ಮತ್ತಷ್ಟು ಮಾರಕ ದಾಳಿ…

5 hours ago

ಕಸ್ಟಡಿ ಸಾವು | 9 ಮಂದಿ ಪೊಲೀಸರಿಗೆ ಮರಣದಂಡನೆ ; ಮಧುರೈ ಕೋರ್ಟ್‌ ಮಹತ್ವದ ತೀರ್ಪು

ಮದುರೈ : ತಮಿಳುನಾಡಿನ ತೂತುಕುಡಿ ಜಿಲ್ಲೆಯ ಶಾಂತನ್‌ಕುಲಂ ಪೊಲೀಸ್ ಠಾಣೆ ಕಸ್ಟಡಿಯಿಂದಲೇ ತಂದೆ,ಮಗ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಸೋಮವಾರ…

6 hours ago

ಇಂಡಿಯಾ ಸ್ಕಿಲ್ಸ್ 2025-26 ರಾಷ್ಟ್ರೀಯ ಸ್ಪರ್ಧೆ : ಕರ್ನಾಟಕಕ್ಕೆ 3ನೇ ಸ್ಥಾನ

ಬೆಂಗಳೂರು : ಕೌಶಲ್ಯ ಕ್ಷೇತ್ರದಲ್ಲಿ ಕರ್ನಾಟಕ ಈಗ ಇಡೀ ದೇಶದಲ್ಲಿ ಮುಂಚೂಣಿಯತ್ತ ಸಾಗುತ್ತಿದೆ. ಇತ್ತೀಚೆಗೆ ಗ್ರೇಟರ್ ನೋಯ್ಡಾದ ಇಂಡಿಯಾ ಎಕ್ಸ್‌ಪೋ…

6 hours ago