ಕಾಂಗ್ರೆಸ್ ಸರ್ಕಾರದಲ್ಲಿ ಮೂರು ಉಪಮುಖ್ಯಮಂತ್ರಿ ಹುದ್ದೆಗಳನ್ನು ಸೃಷ್ಟಿಸುವುದರ ಚರ್ಚೆಯ ಕುರಿತಾಗಿ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾತನಾಡಿರುವ ಅವರು ಕಾಂಗ್ರೆಸ್ ಸರ್ಕಾರ ಯಾರದ್ದೋ ದುಡ್ಡಲ್ಲಿ ಯಲ್ಲಮ್ಮನ ಜಾತ್ರೆ ನಡೆಸುತ್ತಿದೆ ಎಂದಿದ್ದು ಜಾತಿಗೊಂದು ಡಿಸಿಎಂ ಸ್ಥಾನ ಕೊಟ್ಟುಬಿಡಿ. 30ರಿಂದ 35 ಡಿಸಿಎಂ ಸ್ಥಾನ ಶಾಸಕರಿಗೆ ಡಿಸಿಎಂ ಸ್ಥಾನ ಕೊಡುವುದು ಒಳ್ಳೆಯದು. ಆಗ ದಿನನಿತ್ಯ ಉಪಮುಖ್ಯಮಂತ್ರಿ ಸ್ಥಾನದ ಬಗ್ಗೆ ಯಾವುದೇ ಗೊಂದಲ ಇರುವುದಿಲ್ಲ ಎಂದರು.
ಈಗ ಗ್ಯಾರಂಟಿ ಯೋಜನೆಗಳನ್ನು ನೋಡಿಕೊಳ್ಳೋಕೆ ಓರ್ವ ಅಧ್ಯಕ್ಷನನ್ನು ನೇಮಿಸುತ್ತಿದ್ದಾರೆ. ಆ ಯೋಜನೆಗಳಿಗೆ ವಾರ್ಷಿಕ 16 ಕೋಟಿ ಹಣ ಬೇಕಂತೆ. ಇದಕ್ಕೆ ಐವರು ಉಪಾಧ್ಯಕ್ಷರು ಯಾಕೆ ಬೇಕು? ಕಾಂಗ್ರೆಸ್ ಯಾರದ್ದೋ ದುಡ್ಡಲ್ಲಿ ಯಲ್ಲಮ್ಮನ ಜಾತ್ರೆ ಮಾಡುತ್ತಿದೆ. ಕಾಂಗ್ರೆಸ್ ಪರಿಸ್ಥಿತಿ ನನಗೆ ಅರ್ಥವಾಗಿದೆ. ಚುನಾವಣೆ ಬಳಿಕ ಎಲ್ಲಾ ಗೊತ್ತಾಗುತ್ತೆ ಎಂದು ಕುಮಾರಸ್ವಾಮಿ ಹೇಳಿದರು.
ಇನ್ನು ಯುವನಿಧಿ ಯೋಜನೆಯ ನೋಂದಣಿ ಕುರಿತು ಮಾತನಾಡಿದ ಕುಮಾರಸ್ವಾಮಿ ಈ ಯೋಜನೆ ಕಾರ್ಯಕ್ರಮದಲ್ಲಿ ಏನೇನಿದೆ? ಎಷ್ಟು ಜನ ನೋಂದಣಿ ಮಾಡಿಕೊಂಡಿದ್ದಾರೆ? 2023-24ನೇ ಸಾಲಿನಲ್ಲಿ ಎಷ್ಟು ಜನ ಪದವಿ ಪಡೆದುಕೊಂಡಿದ್ದಾರೆ? ಅವರ ಗೈಡ್ಲೈನ್ಸ್ನಲ್ಲಿ ಏನಿದೆ ಎಂದು ಪ್ರಶ್ನೆ ಹಾಕಿದ್ದಾರೆ.
ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…
ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್ನ ರಾಹುಲ್ ಗಾಂಧಿ ಅವರನ್ನು…
ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…
ಬೆಂಗಳೂರು : ಮಾರ್ಕ್ʼ ಸಿನಿಮಾದ ಪ್ರೀ-ರಿಲೀಸ್ ಈವೆಂಟ್ನಲ್ಲಿ ಕಿಚ್ಚ ಸುದೀಪ್ ಹೇಳಿದ ಮಾತೊಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…
ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…
ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…