ರಾಜ್ಯ

30ರಿಂದ 35 ಡಿಸಿಎಂಗಳನ್ನು ನೇಮಿಸುವುದು ಒಳ್ಳೆಯದು; ಕಾಂಗ್ರೆಸ್‌ ಕಾಲೆಳೆದ ಹೆಚ್‌ಡಿಕೆ

ಕಾಂಗ್ರೆಸ್‌ ಸರ್ಕಾರದಲ್ಲಿ ಮೂರು ಉಪಮುಖ್ಯಮಂತ್ರಿ ಹುದ್ದೆಗಳನ್ನು ಸೃಷ್ಟಿಸುವುದರ ಚರ್ಚೆಯ ಕುರಿತಾಗಿ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾತನಾಡಿರುವ ಅವರು ಕಾಂಗ್ರೆಸ್‌ ಸರ್ಕಾರ ಯಾರದ್ದೋ ದುಡ್ಡಲ್ಲಿ ಯಲ್ಲಮ್ಮನ ಜಾತ್ರೆ ನಡೆಸುತ್ತಿದೆ ಎಂದಿದ್ದು ಜಾತಿಗೊಂದು ಡಿಸಿಎಂ ಸ್ಥಾನ ಕೊಟ್ಟುಬಿಡಿ. 30ರಿಂದ 35 ಡಿಸಿಎಂ ಸ್ಥಾನ ಶಾಸಕರಿಗೆ ಡಿಸಿಎಂ ಸ್ಥಾನ ಕೊಡುವುದು ಒಳ್ಳೆಯದು. ಆಗ ದಿನನಿತ್ಯ ಉಪಮುಖ್ಯಮಂತ್ರಿ ಸ್ಥಾನದ ಬಗ್ಗೆ ಯಾವುದೇ ಗೊಂದಲ ಇರುವುದಿಲ್ಲ ಎಂದರು.

ಈಗ ಗ್ಯಾರಂಟಿ ಯೋಜನೆಗಳನ್ನು ನೋಡಿಕೊಳ್ಳೋಕೆ ಓರ್ವ ಅಧ್ಯಕ್ಷನನ್ನು ನೇಮಿಸುತ್ತಿದ್ದಾರೆ. ಆ ಯೋಜನೆಗಳಿಗೆ ವಾರ್ಷಿಕ 16 ಕೋಟಿ ಹಣ ಬೇಕಂತೆ. ಇದಕ್ಕೆ ಐವರು ಉಪಾಧ್ಯಕ್ಷರು ಯಾಕೆ ಬೇಕು? ಕಾಂಗ್ರೆಸ್‌ ಯಾರದ್ದೋ ದುಡ್ಡಲ್ಲಿ ಯಲ್ಲಮ್ಮನ ಜಾತ್ರೆ ಮಾಡುತ್ತಿದೆ. ಕಾಂಗ್ರೆಸ್‌ ಪರಿಸ್ಥಿತಿ ನನಗೆ ಅರ್ಥವಾಗಿದೆ. ಚುನಾವಣೆ ಬಳಿಕ ಎಲ್ಲಾ ಗೊತ್ತಾಗುತ್ತೆ ಎಂದು ಕುಮಾರಸ್ವಾಮಿ ಹೇಳಿದರು.

ಇನ್ನು ಯುವನಿಧಿ ಯೋಜನೆಯ ನೋಂದಣಿ ಕುರಿತು ಮಾತನಾಡಿದ ಕುಮಾರಸ್ವಾಮಿ ಈ ಯೋಜನೆ ಕಾರ್ಯಕ್ರಮದಲ್ಲಿ ಏನೇನಿದೆ? ಎಷ್ಟು ಜನ ನೋಂದಣಿ ಮಾಡಿಕೊಂಡಿದ್ದಾರೆ? 2023-24ನೇ ಸಾಲಿನಲ್ಲಿ ಎಷ್ಟು ಜನ ಪದವಿ ಪಡೆದುಕೊಂಡಿದ್ದಾರೆ? ಅವರ ಗೈಡ್‌ಲೈನ್ಸ್‌ನಲ್ಲಿ ಏನಿದೆ ಎಂದು ಪ್ರಶ್ನೆ ಹಾಕಿದ್ದಾರೆ.

andolana

Recent Posts

ಭಟ್ಕಳ ದುರಂತ | ಕಪ್ಪೆ ಚಿಪ್ಪು ಆರಿಸಲು ಹೋಗಿದ್ದ 8 ಮಂದಿ ಸಾವು!

ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…

34 mins ago

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

3 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

5 hours ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

5 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

6 hours ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

6 hours ago