ಬೆಂಗಳೂರು: ಗೆದ್ದಾಗ ವಿದ್ಯುನ್ಮಾನ ಮತಯಂತ್ರಗಳನ್ನು ದೂರದೆ, ಚುನಾವಣೆಯಲ್ಲಿ ಸೋತಾಗ ದೂರುವುದನ್ನು ನಿಲ್ಲಿಸಿ ಫಲಿತಾಂಶವನ್ನು ಸ್ವೀಕರಿಸಿ. ಮತದಾನದ ವಿಧಾನದಲ್ಲಿ ನಂಬಿಕೆ ಇಲ್ಲದೇ ಇದ್ದರೆ ಪಕ್ಷಗಳು ಚುನಾವಣೆಯಲ್ಲೇ ಸ್ಪರ್ಧಿಸಬಾರದು ಎಂದು ಇಂಡಿ ಮೈತ್ರಿಕೂಟದ ಜಮ್ಮು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಕಾಂಗ್ರೆಸ್ಗೆ ನೇರವಾಗಿ ಹೇಳಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣದ ಎಕ್ಸ್ ಖಾತೆಯಲ್ಲಿ ರಾಜ್ಯ ಬಿಜೆಪಿ ಟ್ವೀಟ್ ಮಾಡಿದ್ದು, ಕಾಂಗ್ರೆಸ್ ಇಂಡಿಯಾ ಪಕ್ಷ ಸೋಲು ಬಂದಾಗಲೆಲ್ಲ ಫಲಿತಾಂಶ ಒಪ್ಪಿಕೊಂಡ ನಿದರ್ಶನವೇ ಇಲ್ಲ. ಮೊದಲು ಬ್ಯಾಲೆಟ್ ಪೇಪರ್ ಇರುವಾಗಲೂ ಅಳುತ್ತಿದ್ದರು, ಈಗ ಇವಿಎಂ ಇರುವಾಗಲೂ ಸೋತಾಗ ಅಳುತ್ತಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದೆ.
ಇವಿಎಂ ಸುರಕ್ಷಿತ, ವಿಶ್ವಾಸಾರ್ಹ ಎಂದು ಸುಪ್ರೀಂ ಕೋರ್ಟ್ನಲ್ಲೂ ಸಾಬೀತಾಗಿದೆ. ನಕಲಿ ಗಾಂಧಿ ಕುಟುಂಬ ಸೋಲಿನ ಆತ್ಮಾವಲೋಕನ ಮಾಡಿಕೊಳ್ಳುವ ಬದಲು ಹೊಣೆಯಿಂದ ನುಣುಚಿಕೊಳ್ಳುವುದರಿಂದ ಕಾಂಗ್ರೆಸ್ ಪಕ್ಷ ಇಂದು ನೆಲಕಚ್ಚಿದೆ ಎಂದು ವ್ಯಂಗ್ಯವಾಡಿದೆ.
ದೂರ: ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ದೂರ ಗ್ರಾಮಕ್ಕೆ ಖ್ಯಾತ ನಟ, ನಿರ್ದೇಶಕ ಪ್ರಭುದೇವ ಶನಿವಾರ ಆಗಮಿಸಿದ್ದರು. ಅವರು ಮೊದಲು…
ರಿಯಾಧ್: ಸೌದಿ ಅರಾಮ್ಕೊ ತೈಲ ಕಂಪನಿಗೆ ಸೇರಿದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ. ಸೌದಿ ಅರೇಬಿಯಾದ ರಾಸ್…
ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ…
ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…
ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…
ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…