ಬೆಂಗಳೂರು: ಗೆದ್ದಾಗ ವಿದ್ಯುನ್ಮಾನ ಮತಯಂತ್ರಗಳನ್ನು ದೂರದೆ, ಚುನಾವಣೆಯಲ್ಲಿ ಸೋತಾಗ ದೂರುವುದನ್ನು ನಿಲ್ಲಿಸಿ ಫಲಿತಾಂಶವನ್ನು ಸ್ವೀಕರಿಸಿ. ಮತದಾನದ ವಿಧಾನದಲ್ಲಿ ನಂಬಿಕೆ ಇಲ್ಲದೇ ಇದ್ದರೆ ಪಕ್ಷಗಳು ಚುನಾವಣೆಯಲ್ಲೇ ಸ್ಪರ್ಧಿಸಬಾರದು ಎಂದು ಇಂಡಿ ಮೈತ್ರಿಕೂಟದ ಜಮ್ಮು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಕಾಂಗ್ರೆಸ್ಗೆ ನೇರವಾಗಿ ಹೇಳಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣದ ಎಕ್ಸ್ ಖಾತೆಯಲ್ಲಿ ರಾಜ್ಯ ಬಿಜೆಪಿ ಟ್ವೀಟ್ ಮಾಡಿದ್ದು, ಕಾಂಗ್ರೆಸ್ ಇಂಡಿಯಾ ಪಕ್ಷ ಸೋಲು ಬಂದಾಗಲೆಲ್ಲ ಫಲಿತಾಂಶ ಒಪ್ಪಿಕೊಂಡ ನಿದರ್ಶನವೇ ಇಲ್ಲ. ಮೊದಲು ಬ್ಯಾಲೆಟ್ ಪೇಪರ್ ಇರುವಾಗಲೂ ಅಳುತ್ತಿದ್ದರು, ಈಗ ಇವಿಎಂ ಇರುವಾಗಲೂ ಸೋತಾಗ ಅಳುತ್ತಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದೆ.
ಇವಿಎಂ ಸುರಕ್ಷಿತ, ವಿಶ್ವಾಸಾರ್ಹ ಎಂದು ಸುಪ್ರೀಂ ಕೋರ್ಟ್ನಲ್ಲೂ ಸಾಬೀತಾಗಿದೆ. ನಕಲಿ ಗಾಂಧಿ ಕುಟುಂಬ ಸೋಲಿನ ಆತ್ಮಾವಲೋಕನ ಮಾಡಿಕೊಳ್ಳುವ ಬದಲು ಹೊಣೆಯಿಂದ ನುಣುಚಿಕೊಳ್ಳುವುದರಿಂದ ಕಾಂಗ್ರೆಸ್ ಪಕ್ಷ ಇಂದು ನೆಲಕಚ್ಚಿದೆ ಎಂದು ವ್ಯಂಗ್ಯವಾಡಿದೆ.
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…