ರಾಜ್ಯ

ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಿರೀಕ್ಷೆ ಮೀರಿ ಜನಬೆಂಬಲ: ಸಿಎಂ ಸಿದ್ದರಾಮಯ್ಯ

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆಯುತ್ತಿದ್ದು, ಅಭಿವೃದ್ಧಿ ಮಾಡದ ಬಿಜೆಪಿಯ ಸತ್ಯವನ್ನು ಜನರು ಅರಿತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ದಾವಣಗೆರೆಯ ಎಂ.ಬಿ.ಎ ಕಾಲೇಜು ಆವರಣ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆಯುತ್ತಿದೆ. ಬಿಜೆಪಿಯವರು ನಾಲ್ಕು ವರ್ಷದಲ್ಲಿ ಯಾವ ಅಭಿವೃದ್ಧಿಯನ್ನು ಮಾಡದೇ, ರಾಜ್ಯವನ್ನು ಲೂಟಿ ಮಾಡಿದ್ದಾರೆ ಎಂಬ ಸತ್ಯವನ್ನು ಜನರು ಅರಿತಿದ್ದಾರೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ಜಾರಿಯಾಗುತ್ತಿದ್ದು, ಬಿಜೆಪಿಯವರ ಸುಳ್ಳುಗಳ ನಡುವೆಯೂ ಜನ ನಮ್ಮನ್ನು ನಂಬಿದ್ದಾರೆ. ರಾಜ್ಯದಲ್ಲಿ ಯಾವುದೇ ಚುನಾವಣೆಯ ನಂತರ ಗ್ಯಾರಂಟಿಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ಬಿಜೆಪಿಯವರು ಅಪಪ್ರಚಾರ ಮಾಡಿದರೂ, ನಮ್ಮ ಗ್ಯಾರಂಟಿಗಳು ನಿರಂತರವಾಗಿ ಮುಂದುವರಿದಿದೆ. ಇದಕ್ಕಾಗಿ 52000 ಕೋಟಿ ಮೀಸಲಿಟ್ಟಿದ್ದು, ಇದುವರೆಗೆ 1,31,000 ಕೋಟಿ ರೂಗಳನ್ನು ವೆಚ್ಚ ಮಾಡಲಾಗಿದೆ ಎಂದರು.

ಸಾಲದ ರಾಮಯ್ಯ ಎಂದು ತನ್ನನ್ನು ಟೀಕೆ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ರಾಜ್ಯ ಸರ್ಕಾರ ಮಿತಿಯೊಳಗೆ ಸಾಲ ಮಾಡಬೇಕು. ಆರ್ಥಿಕ ಹೊಣೆಗಾರಿಕೆ ಕಾಯ್ದೆಯ ಮಾನದಂಡದಂತೆ, ರಾಜ್ಯದ ಜಿಡಿಪಿಯ ಶೇ. 25 ರ ಮಿತಿಯೊಳಗೆ ಸಾಲದ ಮೊತ್ತವಿದೆ. ನಮ್ಮ ವಿತ್ತೀಯ ಕೊರತೆ 2.95 ರಷ್ಟಿದೆ. ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ನ್ಯಾಯಬದ್ಧ ಅನುದಾನಗಳು ಬರದ ಕಾರಣ, ರೆವಿನ್ಯೂ ಸರ್ಪ್ಲಸ್ ಸಾಧಿಸಲು ಸಾಧ್ಯವಾಗಲಿಲ್ಲ. ಬಿಹಾರ ಚುನಾವಣೆಯ ಸಂಬಂಧ ಜಿಎಸ್ ಟಿ ದರವನ್ನು ಕಡಿತಗೊಳಿಸಿದರು. ಇದರಿಂದಾಗಿ ರಾಜ್ಯದ ಬೊಕ್ಕಸಕ್ಕೆ 10,000 ಕೋಟಿ ನಷ್ಟವಾಗಿದೆ. ಜಿಎಸ್ ಟಿ ಕಡಿತದ ಮುಂಚೆ 10% ಇದ್ದ ಜಿಎಸ್ ಟಿ ಬೆಳವಣಿಗೆ ಈಗ ಶೇ. 4 ಕ್ಕೆ ಕುಸಿದಿದೆ. ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಬೇಕಾದ ಜಿಎಸ್ ಟಿ ಪರಿಹಾರವನ್ನು ಮತ್ತು ವಿಶೇಷ ಅನುದಾನಗಳನ್ನು ನೀಡದ ಕಾರಣ ಬಜೆಟ್ ರೆವಿನ್ಯೂ ಸರ್ಪ್ಲಸ್ ಆಗಲು ಸಾಧ್ಯವಾಗಿಲ್ಲ. ಆರ್ಥಿಕತೆಗೆ ಶ್ವೇತಪತ್ರ ಮಂಡಿಸಬೇಕು ಎಂದು ಹೇಳುವ ಬಿಜೆಪಿಯ ರಾಜ್ಯಾಧ್ಯಕ್ಷ ವಿಜಯೇಂದ್ರ ರವರು ಈ ಎಲ್ಲ ಅಂಶಗಳನ್ನು ಪರಿಶೀಲಿಸದೇ, ಕೇವಲ ಸುಳ್ಳು ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದರು.

ಒಳಮೀಸಲಾತಿ ಬಗ್ಗೆ ಸರ್ಕಾರದ ಕ್ರಮಗಳ ಬಗ್ಗೆ ಉತ್ತರಿಸಿ, ರಾಜ್ಯದಲ್ಲಿ ಒಳಮೀಸಲಾತಿಯನ್ನು ಜಾರಿಗೊಳಿಸಲು ಸರ್ಕಾರ ಬದ್ಧವಾಗಿದೆ. ಅಹಿಂದ ಮತಗಳು ಬಿಜೆಪಿಗೆ ಬರಲಿವೆ ಎಂಬ ಬಿಜೆಪಿಯವರ ಹೇಳಿಕೆಗೆ ಪ್ರತಿಕ್ರಯಿಸಿ, ಬಿಜೆಪಿಯವರಿಗೆ ಅಹಿಂದ ವರ್ಗಗಳ ಮೇಲೆ ಕಾಳಜಿಯಿಲ್ಲ.ಬಿಜೆಪಿಯವರು ಎಂದಿಗೂ ಶ್ರೀಮಂತರ ಪರ. ನಮ್ಮ ಸರ್ಕಾರ ಯೂನಿವರ್ಸಲ್ ಬೇಸಿಕ್ ಇನ್ಕಂ ತತ್ವದಂತೆ ನಡೆದು, ತಳಸಮುದಾಯದವರಿಗೆ ಅನುಕೂಲ ಕಲ್ಪಿಸುತ್ತಿದೆ. ನಮ್ಮ ಸರ್ಕಾರ ಬಿಜೆಪಿ ಬೆಂಬಲಿಗ ಮತದಾರರನ್ನು ಸೇರಿಸಿ, ಸರ್ವರಿಗೂ ಗ್ಯಾರಂಟಿ ಯೋಜನೆಗಳನ್ನು ನೀಡಲಾಗುತ್ತಿದೆ. ಬಡತನ ರೇಖೆಗಿಂತ ಕೆಳಗಿನ ಜನರನ್ನು ಸಬಲೀಕರಣಗೊಳಿಸಲು ಇವುಗಳು ನೆರವಾಗುತ್ತವೆ ಎಂದರು.

 

ಆಂದೋಲನ ಡೆಸ್ಕ್

Recent Posts

ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿ ಆರೋಪ ; ಇಬ್ಬರು ಶಿಕ್ಷಕರು ಅಮಾನತ್ತು

ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…

3 hours ago

ಹುಣಸೂರಿನ ಎಂಟು ಕೆರೆಗಳಿಗೆ ನೀರು ಪೂರೈಕೆಗೆ ಸೂಚನೆ

 ಶಾಸಕ ಜಿ.ಡಿ. ಹರೀಶ್‌ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…

4 hours ago

101 ತಾಲ್ಲೂಕುಗಳು ಬರಪೀಡಿತ ; ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಘೋಷಣೆ

89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…

4 hours ago

ಮೈಸೂರು | ಮಹಿಳಾ ಪೊಲೀಸ್‌ ಠಾಣೆಗೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…

5 hours ago

ಆಗಸ್ಟ್‌ 29 ರಂದು ಮೈಸೂರಿಗೆ ಮಾಜಿ ಸಿಎಂ ಆಗಮನ

ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್‌ನಲ್ಲಿ…

6 hours ago

ಸಚಿವ ನಾಗೇಂದ್ರ ವಿರುದ್ಧ ಆರೋಪಕ್ಕೆ ಸಾಕ್ಷ್ಯಗಳಿಲ್ಲ : ಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…

6 hours ago