ಬೆಂಗಳೂರು: 2028ಕ್ಕೆ ನಾವು ಅಧಿಕಾರಕ್ಕೆ ಬಂದು ಮತ್ತೆ ರಾಮನಗರ ಎಂದು ಹೆಸರು ಬದಲಿಸುತ್ತೇವೆ ಎಂದು ಹೇಳಿಕೆ ನೀಡಿದ್ದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಟಾಂಗ್ ಕೊಟ್ಟಿದ್ದಾರೆ.
ರಾಮನಗರ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಹೆಸರು ಬದಲಿಸಲು ಸಚಿವ ಸಂಪುಟ ಸಭೆಯಲ್ಲಿ ಅನುಮೋದಿಸಲಾಗಿದ್ದು, ವಿಪಕ್ಷಗಳಿಂದ ಭಾರೀ ವಿರೋಧ ವ್ಯಕ್ತವಾಗಿದೆ.
ಯಾವುದೇ ಕಾರಣಕ್ಕೂ ರಾಮನಗರವನ್ನು ಬೆಂಗಳೂರು ದಕ್ಷಿಣ ಎಂದು ಹೆಸರು ಬದಲಿಸೋದು ಬೇಡ ಎಂದು ವಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಆಗ್ರಹಿಸಿವೆ. ಆದರೂ ಯಾವುದಕ್ಕೂ ಜಗ್ಗದ ಆಡಳಿತ ಪಕ್ಷ ಕಾಂಗ್ರೆಸ್, ಸಚಿವ ಸಂಪುಟ ಸಭೆಯಲ್ಲಿ ಈ ವಿಷಯವನ್ನು ಅನುಮೋದಿಸಿದೆ.
ಈ ನಡುವೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, 2028ಕ್ಕೆ ನಾವು ಅಧಿಕಾರಕ್ಕೆ ಬಂದು ಮತ್ತೆ ರಾಮನಗರ ಎಂದು ಹೆಸರು ಬದಲಿಸುತ್ತೇವೆ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ಕುರಿತು ಬೆಂಗಳೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, 2028ಕ್ಕೆ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ ಬರೆದಿಟ್ಟುಕೊಳ್ಳಿ ಎಂದು ಟಾಂಗ್ ನೀಡಿದರು.
ಎಚ್ಡಿಕೆ ನನ್ನ ಸರ್ವನಾಶ ಬಯಸುತ್ತಿದ್ದಾರೆ. ಕುಮಾರಸ್ವಾಮಿಗೆ ವಿಚಾರದ ಅರಿವಿದೆ. ರಾಮನಗರ ಎಲ್ಲೂ ಹೋಗಲ್ಲ ಅಲ್ಲೇ ಇರುತ್ತದೆ. ರಾಮನಗರಕ್ಕೆ ಬಂದು ಅಕ್ರಮಕ್ಕೆ ಪ್ರಯತ್ನ ಮಾಡಲು ಯತ್ನಿಸಿದ್ದಾರೆ. ರಾಮನಗರ, ಚನ್ನಪಟ್ಟಣ, ಮಾಗಡಿ ಎಲ್ಲರೂ ನಮ್ಮವೇ. ಮುಂದಿನ ಪೀಳಿಗೆಗಾಗಿ ಈ ಹೆಸರು ಇಡಲಾಗಿದೆ ಎಂದರು.
ನವದೆಹಲಿ: ಮದರ್ ಆಫ್ ಆಲ್ ಡೀಲ್ಸ್ ಎಂದೇ ಕರೆಯಲ್ಪಡುವ ಭಾರತ-ಯುರೋಪ್ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…
ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…
ಪಿರಿಯಾಪಟ್ಟಣ: ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…
ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…
ಮಂಡ್ಯ: ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಸಮುದಾಯಗಳು ಮುಖ್ಯ ವಾಹಿನಿಗೆ ಬರಲು ಶಿಕ್ಷಣದಿಂದ ಮಾತ್ರ ಸಾಧ್ಯ…