ರಾಜ್ಯ

ಕೈ ಪಡೆಯಿಂದ ರಾಜಭವನ ಚಲೋ: ರಾಜ್ಯಪಾಲರ ವಿರುದ್ಧ ಸಿಎಂ ನೇತೃತ್ವದಲ್ಲಿ ಪ್ರತಿಭಟನೆ

ಬೆಂಗಳೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರಾದ ಥಾವರ್‌ಚಂದ್‌ ಗೆಹ್ಲೋಟ್‌ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ ಹೊರಡಿಸಿದ್ದಾರೆ. ಹಾಗೆಯೇ ಉಳಿದ ನಾಯಕರ ಹಗರಣಗಳ ತನಿಖೆಗೂ ರಾಜ್ಯಪಾಲರು ಅನುಮತಿ ನೀಡಬೇಕು ಎಂದು ಆಗ್ರಹಿಸಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಅವರ ನೇತೃತ್ವದಲ್ಲಿಂದು (ಆ.31) ಪ್ರತಿಭಟನೆ ನಡೆಯಿತು.

ಪ್ರಜಾತಾಂತ್ರಿಕವಾಗಿ ಚುನಾಯಿತವಾದ ಸರ್ಕಾರಗಳನ್ನು ಅಪ್ರಜಾತಾಂತ್ರಿಕ ಮಾರ್ಗದಲ್ಲಿ ಅಸ್ಥಿರಗೊಳಿಸುವ ಕೇಂದ್ರ ಸರ್ಕಾರ ಮತ್ತು ರಾಜಭವನದ ಷಡ್ಯಂತ್ರಗಳನ್ನು ವಿರೋಧಿಸಿ ಹಾಗೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಮಾಜಿ ಸಚಿವ ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ ಹಾಗೂ ಜನಾರ್ದನ ರೆಡ್ಡಿ ಅವರ ವಿರುದ್ಧ ತನಿಖೆಗೆ, ಕ್ರಮಕ್ಕೆ ಅನುಮತಿ ನೀಡದ ರಾಜ್ಯಪಾಲರ ತಾರತಮ್ಯ ನೀತಿಯನ್ನು ಖಂಡಿಸಿ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಯಿತು.

ವಿಧಾನ ಸೌಧದ ಗಾಂಧಿ ಪ್ರತಿಮೆ ಬಳಿಯಿಂದ ರಾಜಭವನದ ಕಡೆಗೆ ಕಾಲ್ನಡಿಗೆಯಲ್ಲಿ ತೆರಳಿದ ಕೈಪಡೆ, ದಾರಿಯುದ್ದಕ್ಕೂ ರಾಜ್ಯಪಾಲರ ತಾರತಮ್ಯ ನೀತಿಯ ವಿರುದ್ಧ ಘೋಷಣೆ ಕೂಗುತ್ತಾ, ಮೈತ್ರಿ ಪಕ್ಷಗಳ ನಾಯಕ ಅಕ್ರಮ ಹಗರಣಗಳ ತನಿಖೆ ನಡೆಸುವಂತೆ ಪ್ರತಿಭಟನೆ ನಡೆಸಿದರು. ಇದರಲ್ಲಿ ಸಿಎಂ ಡಿಸಿಎಂ ಸೇರಿದಂತೆ ಹಲವು ಕಾಂಗ್ರೆಸ್‌ನ ಪ್ರಬಲ ನಾಯಕರು ಭಾಗಿಯಾಗಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಬಾ.ನಾ.ಸುಬ್ರಹ್ಮಣ್ಯ ವಾರದ ಅಂಕಣ:  ಕೆಳಗಿನ ಕೋರ್ಟಿನಲ್ಲಿ ನಟ ದಿಲೀಪ್ ಆರೋಪ ಮುಕ್ತ;  ಅವಳೊಂದಿಗೆ v/s ದಿಲೀಪ್ ಪರ

ಜನಪ್ರಿಯ ನಟರು ಜೈಲಲ್ಲಿದ್ದರೆ, ಜಾಮೀನಿನಿಂದ ಹೊರಬಂದರೆ ಅಂತಹ ಪ್ರಕರಣದ ತೀರ್ಪಿನ ಬಗ್ಗೆ ಜನರ ಕುತೂಹಲ ಹೆಚ್ಚು. ಮಲಯಾಳ ಚಿತ್ರರಂಗದ ಹೆಸರಾಂತ…

1 min ago

ರೈತರು ಬೆಳೆದ ಕಾಫಿ, ಅಡಿಕೆ, ಮೆಣಸು ಕಳ್ಳರ ಪಾಲು

ರಾತ್ರೋರಾತ್ರಿ ಬೆಳೆ ಕಳವು ಗಸ್ತು ಹೆಚ್ಚಳ ಸೇರಿದಂತೆ ಸೂಕ್ತ ಕ್ರಮಕ್ಕೆ ಬೆಳೆಗಾರರ ಒತ್ತಾಯ ಸಿದ್ದಾಪುರ: ವನ್ಯಜೀವಿಗಳ ಉಪಟಳ, ಹವಾಮಾನ ವೈಪರೀತ್ಯ,…

30 mins ago

ಸರಗೂರು ಸಾರಿಗೆ ಬಸ್‌ ನಿಲ್ದಾಣದಲ್ಲಿ ಅವ್ಯವಸ್ಥೆ

ದಾಸೇಗೌಡ  ಓವರ್‌ಹೆಡ್ ಟ್ಯಾಂಕ್‌ಗಳ ನಡುವೆ ತಪ್ಪಾದ ಸಂಪರ್ಕ; ಪೋಲಾಗುತ್ತಿರುವ ನೀರು; ಸಾರ್ವಜನಿಕರ ಆಕ್ರೋ ಸರಗೂರು : ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್…

3 hours ago

19 ಬೇಚರಾಕ್ ಹಳ್ಳಿಗಳು ಇನ್ಮುಂದೆ ಕಂದಾಯ ಗ್ರಾಮಗಳು

ಹುಣಸೂರು ತಾಲ್ಲೂಕಿನ ಜನರ ನಾಲ್ಕು ದಶಕಗಳ ಕನಸು ನನಸು; ಗ್ರಾಮಸ್ಥರು ಫುಲ್ ಖು ಹುಣಸೂರು: ತಾಲ್ಲೂಕಿನ ೧೯ ಬೇಚರಾಕ್ ಗ್ರಾಮಗಳನ್ನು…

3 hours ago

ಹೊಸ ವರ್ಷಕ್ಕೆ ಇಂದಿರಾ ಕಿಟ್

ಗಿರೀಶ್ ಹುಣಸೂರು ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಪ್ರಯೋಜನ ಮೈಸೂರು: ನ್ಯಾಯಬೆಲೆ ಅಂಗಡಿಗಳಲ್ಲಿ ಹೊಸ ವರ್ಷಾರಂಭದ ಜನವರಿ ತಿಂಗಳಿಂದ ಅನ್ನಭಾಗ್ಯ ಯೋಜನೆಯಡಿ…

3 hours ago