ಬೆಂಗಳೂರು: ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದಿಂದ ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆಸಲಾಗಿದೆ. ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಹೆಚ್ಚಿನ ತನಿಖೆಗೆ ಆಗ್ರಹಿಸಬೇಕು ಎಂದು ಆಗ್ರಹಿಸಿ ಕೆಪಿಸಿಸಿ ವಕ್ತಾರ ರಮೇಶ್ ಬಾಬು ಅವರು ಬಿವೈ ವಿಜಯೇಂದ್ರ ಅವರ ಮೆನೆಗೆ ಅಗತ್ಯ ದಾಖಲೆಗಳ ಜತೆಯಲ್ಲಿ ತೆರಳಿದ್ದರು.
ಆದರೆ ಅವರನ್ನು ಅರ್ಧಕ್ಕೆ ತಡೆದ ಪೊಲೀಸರು ಅಲ್ಲಿಂದ ವಾಪಾಸ್ ಕಳುಹಿಸಿದ್ದಾರೆ. ಮುಡಾದಲ್ಲಿ 48 ಸೈಟ್ ಹಂಚಿಕೆಯಲ್ಲಿ ಜೆಡಿಎಸ್ ಅಕ್ರಮ ಎಸಗಿದ್ದು, ಇದನ್ನು ತನಿಖೆಗೆ ವಹಿಸಬೇಕೆಂದು ಆಗ್ರಹಿಸಿ 2011ರಲ್ಲಿ ಸಭಾಪತಿ ಅವರಿಗೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ದಾಖಲೆ ಸಲ್ಲಿಸಿದ್ದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಗತ್ಯ ದಾಖಲೆಗಳ ಮೂಲಕ ಬಿವೈ ವಿಜಯೇಂದ್ರ ಭೇಟಿಗೆ ಕೆಪಿಸಿಸಿ ವಕ್ತಾರ ರಮೇಶ್ ಬಾಬು ಹಾಗೂ ಕಾಂಗ್ರೆಸ್ ಮುಖಂಡ ಮನೋಹರ್ ತೆರಳಿದ್ದು, ಪೊಲೀಸರು ತಡೆದು ವಾಪಸ್ ಕಳುಹಿಸಿದ್ದಾರೆ.
ಮುಡಾ ಪ್ರಕರಣ ದಿನೇ ದಿನೇ ರೋಚಕತೆಯಲ್ಲಿ ಕಾಣುತ್ತಿರುವ ಬೆನ್ನಲ್ಲೇ ದೇವೇಗೌಡರ ಕುಟುಂಬ 48 ಸೈಟ್ ಹಂಚಿಕೆಯಲ್ಲಿ ಭಾರೀ ಅಕ್ರಮ ಎಸಗಿದ್ದು, ಈ ಪ್ರಕರಣವನ್ನು ಸಿಬಿಐಗೆ ವಹಿಸಲು ಬಿಜೆಪಿಯ ನಿಲುವೇನು ಎಂದು ರಮೇಶ್ ಬಾಬು ಪ್ರಶ್ನಿಸಿದ್ದಾರೆ.
ಬಿಜೆಪಿ ಅಧಿಕಾರದಲ್ಲಿ ಇದ್ದಾಗಲೇ ಮುಡಾದಲ್ಲಿ ಭಾರೀ ಅಕ್ರಮವಾಗಿದ್ದು, ಬಿಜೆಪಿ ನಾಯಕರು ಎಷ್ಟು ಸೈಟ್ ಪಡೆದಿದ್ದಾರೆ ಎಂಬುದನ್ನು ಸ್ಪಷ್ಟಪಡಿಸಲಿ. ಹಾಗೂ ಬಿಎಸ್ ಯಡಿಯೂರಪ್ಪ ಅವರ ತನಿಖೆ ವಿಚಾರವಾಗಿ ಬಿಜೆಪಿಯ ನಿಲುವೇನು ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…