ಬೆಂಗಳೂರು: ಬಿಜೆಪಿ-ಜೆಡಿಎಸ್ ಪಕ್ಷಗಳು ಪಿತೂರಿ ನಡೆಸಿ ಸಿಎಂ ಸಿದ್ದರಾಮಯ್ಯಗೆ ಶೋಕಾಸ್ ನೀಡಲು ರಾಜಭವನ ಬಳಸಿಕೊಂಡಿದ್ದಾರೆ. ಈ ಹುನ್ನಾರದ ವಿರುದ್ಧ ಹೋರಾಡಲು ಕಾಂಗ್ರೆಸ್ ತೀರ್ಮಾನಿಸಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಹೇಳಿದ್ದಾರೆ.
ಬೆಂಗಳೂರಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದಲ್ಲಿ ಸಚಿವರೊಂದಿಗೆ ಸಭೆ ನಡೆಸಿ ಬಳಿಕ ಮಾತನಾಡಿದ ಅವರು, ನಾವು ಜನರ ಬಳಿ ಹೋಗಿ ವಾಸ್ತವಾಂಶ ವಿವರಿಸುತ್ತೇವೆ ಎಂದಿದ್ದಾರೆ.
ಭ್ರಷ್ಟಾಚಾರದ ಬಗ್ಗೆ ಬಿಜೆಪಿ ಮಾತನಾಡುವುದು ಜೋಕ್ ಆಗಿದೆ. ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧ ಎಷ್ಟು ಪ್ರಕರಣಗಳಿಲ್ಲ? ಪ್ರಜ್ವಲ್ ರೇವಣ್ಣ ವಿರುದ್ಧ ಎಷ್ಟು ಪ್ರಕರಣಗಳಿಲ್ಲ? ಇದೆಲ್ಲಾ ಬಿಟ್ಟು ಸಿದ್ದರಾಮಯ್ಯ ವಿರುದ್ದ ಎಲ್ಲರೂ ಹುನ್ನಾರ ನಡೆಸಿ, ಅವರ ವಿರುದ್ಧ ಮಾತನಾಡುತ್ತಿದ್ದಾರೆ. ಆದರೆ, ನಾವು ಭಯ ಪಡುತ್ತಿಲ್ಲ, ಎಲ್ಲವನ್ನೂ ಎದುರಿಸಲು ಸನ್ನದ್ದರಾಗಿದ್ದೇವೆ ಎಂದು ಹೇಳಿದರು.
ಇದೇ ಬಿಜೆಪಿಯ ಹುನ್ನಾರದಿಂದಲೇ ದಳ ಮತ್ತು ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಬಿದ್ದಿದ್ದು, ಇದೀಗ ಇದೇ ಮಾದರಿಯಲ್ಲಿ ಬಹುಮತದ ಕಾಂಗ್ರೆಸ್ ಸರ್ಕಾರವನ್ನು ಟಾರ್ಗೆಟ್ ಮಾಡಿದ್ದಾರೆ. ಅವರವರ ಮಕ್ಕಳನ್ನು ರಕ್ಷಣೆ ಮಾಡಿಕೊಳ್ಳು ಕಾಂಗ್ರೆಸ್ ಮೇಲೆ ಆರೋಪ ಹೊರಿಸುತ್ತಿದ್ದಾರೆ. ಪ್ರಜ್ವಲ್ ಪ್ರಕರಣದಲ್ಲಿ ಕಾಂಗ್ರೆಸ್ ವಿರುದ್ಧ ಹುನ್ನಾರ ಆಗಿದ್ದನ್ನು ನೀವು ಗಮನಿಸಬಹುದು ಎಂದರು.
ಎಲ್ಲರಿಗೂ ಸಿಎಂ ಸಿದ್ದರಾಮಯ್ಯನವರ ಪ್ರಮಾಣಿಕತೆಯ ಅರಿವಿದೆ. ಅವರು ಮುಖ್ಯಮಂತ್ರಿ ಪದವಿಗೆ ಹೊಸಬರಲ್ಲ. ಅವರ ರಾಜಕೀಯ ಬದುಕು, ತತ್ವ ಸಿದ್ಧಾಂತ, ಹಿನ್ನೆಲೆ ಅವರು ಹಿಂದೆ ಹೇಗಿದ್ದರು, ಈಗ ಹೇಗಿದ್ದಾರೆ ಎಂಬುದು ಕರ್ನಾಟಕ ಜನತೆಗೆ ಚೆನ್ನಾಗಿ ತಿಳಿದಿದೆ ಎಂದು ಹೇಳಿದರು.
ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ಕೂಡಲೇ ಗ್ಯಾರಂಟಿಯನ್ನು ಜಾರಿಗೊಳಿಸಿ ಬಡವರಿಗೆ ನೆರವಾದವು. ಇದು ಬಿಜೆಪಿ-ಜೆಡಿಎಸ್ಗೆ ಹಿನ್ನಡೆ ಆಗಬಹುದು ಎಂದು ಷಡ್ಯಂತ್ರ ಮಾಡಿ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಹೀಗೆ ಪ್ರಯತ್ನಿಸಲಾಗುತ್ತಿದೆ ಎಂದು ಕಿಡಿಕಾರಿದರು.
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…
ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…
ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…
ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…
ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…