Mysore
30
few clouds

Social Media

ಸೋಮವಾರ, 02 ಫೆಬ್ರವರಿ 2026
Light
Dark

ರಾಜ್ಯದಲ್ಲಿ ಕಾಂಗ್ರೆಸ್‌ ಆಡಳಿತ ಸಂಪೂರ್ಣವಾಗಿ ಸ್ಥಗಿತಗೊಂಡಿದೆ: ಬೊಮ್ಮಾಯಿ

ಹುಬ್ಬಳ್ಳಿ: ಆಡಳಿತ ಪಕ್ಷ ಕಾಂಗ್ರೆಸ್‌ ರಾಜ್ಯದಲ್ಲಿ ಉತ್ತಮ ಆಡಳಿತ ನೀಡುವಲ್ಲಿ ವಿಫಲವಾಗಿದೆ. ಕಾಂಗ್ರೆಸ್‌ ಆಡಳಿತ ಯಂತ್ರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಟೀಕಿಸಿದ್ದಾರೆ.

ನಗರದಲ್ಲಿ ಮಾದ್ಯಮಗಳೊಂದಿಗೆ ಮಾತನಾಡಿರುವ ಅವರು, ರಾಜ್ಯದಲ್ಲಿ ಆಡಳಿತ ನಿಂತುಹೋಗಿದೆ. ರಾಜ್ಯದಲ್ಲಿ ಏನೇನು ನಡೆಯುತ್ತಿದೆ ಎಂಬುದು ಅವರವರ ಆಂತರಿಕ ವಿಚಾರ, ರಾಜ್ಯದಲ್ಲಿ ಏನು ನಡೆಯುತ್ತಿದೆ ಎಂಬುದಷ್ಟೆ ಮುಖ್ಯ. ಆಡಳಿತ ವಿಫಲ ಮುಚ್ಚಿಹಾಕಲು, ವಿರೋಧ ಪಕ್ಷಗಳ ಆರೋಪಗಳನ್ನು ನಿಭಾಯಿಸಲು ಸಿಎಂ ನಿರಂತರ ಸಭೆಗಳನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಉತ್ತಮ ಆಡಳಿತ ನೀಡಿ ಎಂದು ರಾಜ್ಯದ ಜನರು ಅಧಿಕಾರ ಕೊಟ್ಟಿದ್ದಾರೆ. ಆದರೆ ಸರ್ಕಾರದ ಖಜಾನೆ ಖಾಲಿಯಾಗಿದ್ದು, ಈವರೆಗೆ ಬರಗಾಲ, ಪ್ರವಾಹ ಸೇರಿದಂತೆ ಯಾವುದೇ ಪರಿಹಾರ ಈವರೆಗೂ ನೀಡಲಾಗಿಲ್ಲ. ಜನರ ಕಷ್ಟಗಳಿಗೆ ಈವರೆಗೆ ಸ್ಪಂದಿಸದ ಸರ್ಕಾರ, ವಿಡಿಯೋ ಕಾಲ್‌ ಬಿಟ್ಟರೇ ಈವರೆಗೆ ಏನನ್ನು ಮಾಡಿಲ್ಲ ಎಂದು ದೂರಿದರು.

Tags:
error: Content is protected !!