ರಾಜ್ಯ

ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿದ ಕಾಂಗ್ರೆಸ್‌ ಜನರ ಬಳಿ ಕ್ಷಮೆ ಕೋರಲಿ: ಆರ್‌.ಅಶೋಕ ಆಗ್ರಹ

ಬೆಂಗಳೂರು: ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿ ಸಂವಿಧಾನಕ್ಕೆ ಅಪಚಾರ ಮಾಡಿದ ಕಾಂಗ್ರೆಸ್‌ ಜನರ ಕ್ಷಮೆ ಕೇಳಬೇಕು. ರಾಹುಲ್‌ ಗಾಂಧಿ ರಾಮ್‌ಲೀಲಾ ಮೈದಾನದಲ್ಲಿ ತಲೆಬಾಗಿ ನಿಂತು ಜನರ ಕ್ಷಮೆ ಕೇಳಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು.

ಸ್ವಾತಂತ್ರ್ಯ ಉದ್ಯಾನದಲ್ಲಿ ಬಿಜೆಪಿಯಿಂದ ನಡೆದ, ತುರ್ತು ಪರಿಸ್ಥಿತಿ ಸಂಬಂಧ ರಾಹುಲ್‌ ಗಾಂಧಿ ಕ್ಷಮೆ ಕೋರಬೇಕೆಂಬ ಆಗ್ರಹದ ಪೋಸ್ಟರ್‌ ಅಭಿಯಾನದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಡಾ.ಬಿ.ಆರ್.ಅಂಬೇಡ್ಕರ್‌ ರಚಿಸಿದ ಸಂವಿಧಾನವನ್ನು ಮೂಲೆಗೆ ತಳ್ಳಿ ಸರ್ವಾಧಿಕಾರಿ ಧೋರಣೆ ತೋರಿದ ಕಾಂಗ್ರೆಸ್‌ ಪಕ್ಷ ಹಾಗೂ ಇಂದಿರಾಗಾಂಧಿ ರಾತ್ರೋರಾತ್ರಿ ತುರ್ತು ಪರಿಸ್ಥಿತಿ ಹೇರಿದ್ದರು. ನ್ಯಾಯಾಂಗ ವ್ಯವಸ್ಥೆಯನ್ನು ಕಪಿಮುಷ್ಟಿಗೆ ತೆಗೆದುಕೊಂಡು, ಪತ್ರಕರ್ತರನ್ನು ಜೈಲಿಗೆ ಹಾಕಿದ್ದರು. ಎಲ್‌.ಕೆ.ಅಡ್ವಾಣಿ, ಅಟಲ್‌ ಬಿಹಾರಿ ವಾಜಪೇಯಿ ಮೊದಲಾದ ಘಟಾನುಘಟಿ ನಾಯಕರನ್ನು ಜೈಲಿಗೆ ತಳ್ಳಿದ್ದರು ಎಂದರು.

ಆಗ ನಾನು ವಿವಿ ಪುರ ಕಾಲೇಜಿನಲ್ಲಿ ಮೊದಲ ಪಿಯುಸಿ ವಿದ್ಯಾರ್ಥಿಯಾಗಿದ್ದೆ. ಯಶವಂತಪುರ ಸರ್ಕಲ್‌ನಲ್ಲಿ ಆರ್‌ಎಸ್‌ಎಸ್‌ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಇಂದಿರಾಗಾಂಧಿ ವಿರುದ್ಧ ಎರಡು ವಾಕ್ಯ ಘೋಷಣೆ ಕೂಗಿದ್ದೆ. ಆಗ ಯಶವಂತಪುರ ಪೊಲೀಸರು ಬಂಧಿಸಿ ಚಿತ್ರಹಿಂಸೆ ನೀಡಿದ್ದರು. ನಮ್ಮ ಇಡೀ ಕುಟುಂಬದಲ್ಲಿ ಆರ್‌ಎಸ್‌ಎಸ್‌ನವರೇ ಇದ್ದರು. ಅವರು ಕೂಡ ತಲೆಮರೆಸಿಕೊಳ್ಳಬೇಕಾಯಿತು. ನಾನು ಒಂದು ತಿಂಗಳು ಸ್ವಾತಂತ್ರ್ಯ ಉದ್ಯಾನದ ಜೈಲಿನಲ್ಲಿದ್ದೆ. 200 ಜನರಿಗೆ ಒಂದು ಶೌಚಾಲಯವಿತ್ತು. ಊಟ ಕೂಡ ಕೊಡುತ್ತಿರಲಿಲ್ಲ. ಆ ಕಷ್ಟಗಳು ಈಗಲೂ ನೆನಪಿನಲ್ಲಿದೆ. ಜನರಿಗೆ ಅಷ್ಟು ಕಿರುಕುಳ ನೀಡಿದ ಕಾಂಗ್ರೆಸ್‌ ಈಗ ಅಧಿಕಾರದಲ್ಲಿದೆ ಎಂದರು.

ಸಂವಿಧಾನಕ್ಕೆ ಅಪಮಾನ ಮಾಡಿದ ಕಾಂಗ್ರೆಸ್‌ ಈಗ ಯಾವ ಮುಖ ಇಟ್ಟುಕೊಂಡು ಜನರ ಬಳಿ ಹೋಗುತ್ತಾರೆ ಎಂದು ಅರ್ಥವಾಗುತ್ತಿಲ್ಲ. ಆದ್ದರಿಂದ ರಾಹುಲ್‌ ಗಾಂಧಿ ಅವರಿಗೆ ಮಾನ, ಮರ್ಯಾದೆ ಇದ್ದರೆ ರಾಮ್‌ಲೀಲಾ ಮೈದಾನಕ್ಕೆ ಬಂದು ಇಡೀ ದೇಶದ ಜನರ ಮುಂದೆ ತಲೆಬಾಗಿ ಕ್ಷಮೆ ಕೇಳಬೇಕು. ಸಂವಿಧಾನಕ್ಕೆ ಅಪಚಾರ ಮಾಡಿದ ದೇಶ ವಿರೋಧಿ ಕಾಂಗ್ರೆಸ್‌ ಪಕ್ಷ ಕ್ಷಮೆ ಕೇಳಬೇಕು. ಸಂವಿಧಾನ ಬದಲಾವಣೆ ಮಾಡಲಿದ್ದೇವೆ ಎಂದು ಬಿಜೆಪಿಯ ಮೇಲೆ ಆರೋಪ ಮಾಡುತ್ತಾರೆ. ಆದರೆ ದ್ರೋಹ ಬಗೆದಿದ್ದು ಕಾಂಗ್ರೆಸ್‌ ಎಂದು ದೂರಿದರು.

ಸಂವಿಧಾನ ನಮಗೆ ಭಗವದ್ಗೀತೆಗೆ ಸಮಾನ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಆದರೆ ಸಂವಿಧಾನವನ್ನು ಕಾಂಗ್ರೆಸ್‌ ಬದಲಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

31 seconds ago

ಆತ್ಮಹತ್ಯೆ ತಡೆಗೆ ಇರಲಿ ಮಾನವೀಯ ಸುರಕ್ಷಾ ಜಾಲ

ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…

3 mins ago

ಕೆರೆ ನೀರಿಗಾಗಿ ಎರಡು ಗ್ರಾಮಸ್ಥರ ತಿಕ್ಕಾಟ!

ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ  ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…

9 mins ago

ಅಪಾಯಕಾರಿ ರೈಲ್ವೆ ಅಂಡರ್‌ಪಾಸ್ ಫುಟ್‌ಪಾತ್

ಹೇಮಂತ್‌ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…

14 mins ago

ಜಂಬೂಸವಾರಿಯಲ್ಲಿ ಈ ಬಾರಿ ತಾರಾ ಮೆರುಗು

ಕೆ.ಬಿ.ರಮೇಶನಾಯಕ ರವಿಚಂದ್ರನ್, ಶಿವರಾಜ್‌ಕುಮಾರ್, ಯಶ್, ರಿಷಭ್ ಶೆಟ್ಟಿ, ರಚಿತಾ ರಾಮ್, ಸಪ್ತಮಿ ಗೌಡ ಸೇರಿ ೩೦ ಕಲಾವಿದರು ಭಾಗಿ ಮೈಸೂರು:…

21 mins ago