ರಾಜ್ಯ

ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿದ ಕಾಂಗ್ರೆಸ್‌ ಜನರ ಬಳಿ ಕ್ಷಮೆ ಕೋರಲಿ: ಆರ್‌.ಅಶೋಕ ಆಗ್ರಹ

ಬೆಂಗಳೂರು: ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿ ಸಂವಿಧಾನಕ್ಕೆ ಅಪಚಾರ ಮಾಡಿದ ಕಾಂಗ್ರೆಸ್‌ ಜನರ ಕ್ಷಮೆ ಕೇಳಬೇಕು. ರಾಹುಲ್‌ ಗಾಂಧಿ ರಾಮ್‌ಲೀಲಾ ಮೈದಾನದಲ್ಲಿ ತಲೆಬಾಗಿ ನಿಂತು ಜನರ ಕ್ಷಮೆ ಕೇಳಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು.

ಸ್ವಾತಂತ್ರ್ಯ ಉದ್ಯಾನದಲ್ಲಿ ಬಿಜೆಪಿಯಿಂದ ನಡೆದ, ತುರ್ತು ಪರಿಸ್ಥಿತಿ ಸಂಬಂಧ ರಾಹುಲ್‌ ಗಾಂಧಿ ಕ್ಷಮೆ ಕೋರಬೇಕೆಂಬ ಆಗ್ರಹದ ಪೋಸ್ಟರ್‌ ಅಭಿಯಾನದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಡಾ.ಬಿ.ಆರ್.ಅಂಬೇಡ್ಕರ್‌ ರಚಿಸಿದ ಸಂವಿಧಾನವನ್ನು ಮೂಲೆಗೆ ತಳ್ಳಿ ಸರ್ವಾಧಿಕಾರಿ ಧೋರಣೆ ತೋರಿದ ಕಾಂಗ್ರೆಸ್‌ ಪಕ್ಷ ಹಾಗೂ ಇಂದಿರಾಗಾಂಧಿ ರಾತ್ರೋರಾತ್ರಿ ತುರ್ತು ಪರಿಸ್ಥಿತಿ ಹೇರಿದ್ದರು. ನ್ಯಾಯಾಂಗ ವ್ಯವಸ್ಥೆಯನ್ನು ಕಪಿಮುಷ್ಟಿಗೆ ತೆಗೆದುಕೊಂಡು, ಪತ್ರಕರ್ತರನ್ನು ಜೈಲಿಗೆ ಹಾಕಿದ್ದರು. ಎಲ್‌.ಕೆ.ಅಡ್ವಾಣಿ, ಅಟಲ್‌ ಬಿಹಾರಿ ವಾಜಪೇಯಿ ಮೊದಲಾದ ಘಟಾನುಘಟಿ ನಾಯಕರನ್ನು ಜೈಲಿಗೆ ತಳ್ಳಿದ್ದರು ಎಂದರು.

ಆಗ ನಾನು ವಿವಿ ಪುರ ಕಾಲೇಜಿನಲ್ಲಿ ಮೊದಲ ಪಿಯುಸಿ ವಿದ್ಯಾರ್ಥಿಯಾಗಿದ್ದೆ. ಯಶವಂತಪುರ ಸರ್ಕಲ್‌ನಲ್ಲಿ ಆರ್‌ಎಸ್‌ಎಸ್‌ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಇಂದಿರಾಗಾಂಧಿ ವಿರುದ್ಧ ಎರಡು ವಾಕ್ಯ ಘೋಷಣೆ ಕೂಗಿದ್ದೆ. ಆಗ ಯಶವಂತಪುರ ಪೊಲೀಸರು ಬಂಧಿಸಿ ಚಿತ್ರಹಿಂಸೆ ನೀಡಿದ್ದರು. ನಮ್ಮ ಇಡೀ ಕುಟುಂಬದಲ್ಲಿ ಆರ್‌ಎಸ್‌ಎಸ್‌ನವರೇ ಇದ್ದರು. ಅವರು ಕೂಡ ತಲೆಮರೆಸಿಕೊಳ್ಳಬೇಕಾಯಿತು. ನಾನು ಒಂದು ತಿಂಗಳು ಸ್ವಾತಂತ್ರ್ಯ ಉದ್ಯಾನದ ಜೈಲಿನಲ್ಲಿದ್ದೆ. 200 ಜನರಿಗೆ ಒಂದು ಶೌಚಾಲಯವಿತ್ತು. ಊಟ ಕೂಡ ಕೊಡುತ್ತಿರಲಿಲ್ಲ. ಆ ಕಷ್ಟಗಳು ಈಗಲೂ ನೆನಪಿನಲ್ಲಿದೆ. ಜನರಿಗೆ ಅಷ್ಟು ಕಿರುಕುಳ ನೀಡಿದ ಕಾಂಗ್ರೆಸ್‌ ಈಗ ಅಧಿಕಾರದಲ್ಲಿದೆ ಎಂದರು.

ಸಂವಿಧಾನಕ್ಕೆ ಅಪಮಾನ ಮಾಡಿದ ಕಾಂಗ್ರೆಸ್‌ ಈಗ ಯಾವ ಮುಖ ಇಟ್ಟುಕೊಂಡು ಜನರ ಬಳಿ ಹೋಗುತ್ತಾರೆ ಎಂದು ಅರ್ಥವಾಗುತ್ತಿಲ್ಲ. ಆದ್ದರಿಂದ ರಾಹುಲ್‌ ಗಾಂಧಿ ಅವರಿಗೆ ಮಾನ, ಮರ್ಯಾದೆ ಇದ್ದರೆ ರಾಮ್‌ಲೀಲಾ ಮೈದಾನಕ್ಕೆ ಬಂದು ಇಡೀ ದೇಶದ ಜನರ ಮುಂದೆ ತಲೆಬಾಗಿ ಕ್ಷಮೆ ಕೇಳಬೇಕು. ಸಂವಿಧಾನಕ್ಕೆ ಅಪಚಾರ ಮಾಡಿದ ದೇಶ ವಿರೋಧಿ ಕಾಂಗ್ರೆಸ್‌ ಪಕ್ಷ ಕ್ಷಮೆ ಕೇಳಬೇಕು. ಸಂವಿಧಾನ ಬದಲಾವಣೆ ಮಾಡಲಿದ್ದೇವೆ ಎಂದು ಬಿಜೆಪಿಯ ಮೇಲೆ ಆರೋಪ ಮಾಡುತ್ತಾರೆ. ಆದರೆ ದ್ರೋಹ ಬಗೆದಿದ್ದು ಕಾಂಗ್ರೆಸ್‌ ಎಂದು ದೂರಿದರು.

ಸಂವಿಧಾನ ನಮಗೆ ಭಗವದ್ಗೀತೆಗೆ ಸಮಾನ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಆದರೆ ಸಂವಿಧಾನವನ್ನು ಕಾಂಗ್ರೆಸ್‌ ಬದಲಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಸಿದ್ದಾಪುರ | ಕಾಡಾನೆ ದಾಳಿಗೆ ಓರ್ವ ಗಂಭೀರ

ಸಿದ್ದಾಪುರ : ಕಾಡಾನೆ ದಾಳಿಗೆ ಸಿಲುಕಿ ಬೆಳೆಗಾರರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಾಲ್ಕೂರು ತ್ಯಾಗತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭ್ಯತ್‌ಮಂಗಲ…

3 hours ago

ನೀಟ್-ಯುಜಿ ಪತ್ರಿಕೆ ಸೋರಿಕೆ ಪ್ರಕರಣ : ವೈದ್ಯ ಸೇರಿ ಇಬ್ಬರ ಬಂಧನ

ಹೊಸದಿಲ್ಲಿ : ನೀಟ್ ಯುಜಿ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಲಾತೂರ್ ಮೂಲದ ವೈದ್ಯರು ಮತ್ತು ಪುಣೆಯ ಕೋಚಿಂಗ್ ಸಂಸ್ಥೆಯ ಭೌತಶಾಸ್ತ್ರ…

3 hours ago

ನಾಳೆ ಸಿಎಂ-ಡಿಸಿಎಂ ಉಪಹಾರ ಸಭೆ!

ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆಯ ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಮಧ್ಯೆ ಗುರುವಾರ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಿಎಂ…

4 hours ago

ಎಂ.ಬಿ.ನಾಗಣ್ಣಗೌಡ ವಿರುದ್ಧ ಉಪ ಲೋಕಾಯುಕ್ತ ಸ್ವಯಂ ಪ್ರೇರಿತ ದೂರು ದಾಖಲು

ಮಂಡ್ಯ: ಕರುನಾಡ ಸೇವಕರು ಸಂಘಟನೆಯ ಮುಖಂಡ ಎಂ.ಬಿ. ನಾಗಣ್ಣಗೌಡ ವಿರುದ್ಧ ಉಪ ಲೋಕಾಯುಕ್ತ ಬಿ. ವೀರಪ್ಪ ಅವರು ಮಾನಹಾನಿಗೆ ಸಂಬಂಧಿಸಿದಂತೆ…

4 hours ago

ನಾಳೆ ಸಿಎಂ-ಡಿಸಿಎಂ ಉಪಹಾರ ಸಭೆ

ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆಯ ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಮಧ್ಯೆ ಗುರುವಾರ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಿಎಂ…

4 hours ago

ಜೂನ್ 4ರಿಂದ ಚೀತಾಗಳು ಸಾರ್ವಜನಿಕ ವೀಕ್ಷಣೆಗೆ ಲಭ್ಯ : ಈಶ್ವರ ಖಂಡ್ರೆ

ಬೆಂಗಳೂರು : ಕಳೆದ ಏಪ್ರಿಲ್ 18ರಂದು ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಬಂದ 4 ಶಿವಂಗಿಗಳ ಕ್ವಾರಂಟೈನ್ ಅವಧಿ ಮುಗಿದಿದ್ದು, ಜೂನ್…

5 hours ago