ಬೆಂಗಳೂರು: ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ತಡರಾತ್ರಿ ಆಟೋದಲ್ಲಿ ತೆರಳುತ್ತಿದ್ದ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ನಡೆದಿದೆ.
ಈ ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಎಕ್ಸ್ ಖಾತೆ ಮೂಲಕ ತಮ್ಮ ಆಕ್ರೋಶ ಹೊರಹಾಕಿದ್ದಾರೆ.
ಈ ಸಂಬಂಧ ತಮ್ಮ ಟ್ವೀಟ್ನಲ್ಲಿ ಬರೆದುಕೊಂಡಿರುವ ಅವರು, ರಾಜ್ಯದ ಕಾಂಗ್ರೆಸ್ ಸರ್ಕಾರದಲ್ಲಿ ಸ್ತ್ರೀ ಪೀಡಕರು, ದುರುಳರು, ಅತ್ಯಾಚಾರಿಗಳ ಅಟ್ಟಹಾಸ ವಿಪರೀತಕ್ಕೆ ಹೋಗುತ್ತಿದೆ. ಸರಣೀ ರೂಪದಲ್ಲಿ ಮಹಿಳಾ ದೌರ್ಜನ್ಯ ಪ್ರಕರಣಗಳು ವರದಿಯಾಗುತ್ತಿವೆ.
ಬೆಂಗಳೂರಿನ ಹೆಚ್ ಎಸ್ ಆರ್ ಲೇಔಟ್ ನಲ್ಲಿ ಆಟೋ ದಲ್ಲಿ ಹೋಗುತ್ತಿದ್ದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಅತ್ಯಂತ ಹೇಯ ಹಾಗೂ ರಾಕ್ಷಸೀ ಕೃತ್ಯವಾಗಿದೆ. ಮರುಕಳಿಸುತ್ತಲೇ ಇರುವ ಇಂಥಾ ಘಟನೆಗಳಿಂದ ಕರ್ನಾಟಕ ರಾಷ್ಟ್ರಮಟ್ಟದಲ್ಲಿ ತಲೆತಗ್ಗಿಸುವಂತಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಘನತೆ ಕುಗ್ಗುತ್ತಿದೆ.
ಮುಖ್ಯಮಂತ್ರಿಯಾದಿಯಾಗಿ ಸರ್ಕಾರದ ಯಾರೊಬ್ಬರೂ ಈ ಬಗ್ಗೆ ಗಂಭೀರತೆ ಪ್ರದರ್ಶಿಸದೇ ಉಡಾಫೆ ಧೋರಣೆ ಅನುಸರಿಸುತ್ತಿರುವ ಪರಿ ನೋಡಿದರೆ ‘ಸರ್ಕಾರವೇ ಸ್ತ್ರೀ ಕುಲ ಪೀಡಕರ ರಕ್ಷಣೆಗೆ’ ನಿಂತಿರುವ ಅನುಮಾನ ಮೂಡಿಸುತ್ತಿದೆ.
ತಕ್ಷಣವೇ ಯುವತಿಯ ರಕ್ಷಣೆಗೆ ಮುಂದಾಗಿ ಪೈಶಾಚಿಕ ಕೃತ್ಯ ಎಸಗಿದ ಕಿಡಿಗೇಡಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಆಗ್ರಹಿಸುತ್ತೇನೆ ಎಂದು ಅವರು ಆಗ್ರಹಿಸಿದ್ದಾರೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…