ರಾಜ್ಯ

ED ದಾಳಿ : ಪರಮೇಶ್ವರ್ ಬೆನ್ನಿಗೆ ನಿಂತ ʻಕೈʼ ಪಡೆ

ಬೆಂಗಳೂರು : ಜಾರಿ ನಿರ್ದೇಶನಾಲಯವು(ಇ.ಡಿ) ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ಸೇರಿದ ಶಿಕ್ಷಣ ಸಂಸ್ಥೆಗಳ ಮೇಲೆ ನಡೆಸಿದ ದಾಳಿಯ ವಿರುದ್ಧ ಕಾಂಗ್ರೆಸ್‌ ಕಿಡಿಕಾರಿದ್ದು, ಪರಮೇಶ್ವರ್ ಮನೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ನಾಯಕರು ಭೇಟಿ ನೀಡಿ ಬೆಂಬಲ ವ್ಯಕ್ತಪಡಿಸಿದ್ದಾರೆ.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅನಾರೋಗ್ಯಕ್ಕಾಗಿ ಚಿಕಿತ್ಸೆ ಪಡೆದು ಕೈಗೆ ಸ್ಟ್ರಿಪ್ಸ್ ಅಂಟಿಸಿಕೊಂಡೇ ಪರಮೇಶ್ವರ್ ಮನೆಗೆ ಆಗಮಿಸಿದರು. ಸುದೀರ್ಘ ಕಾಲ ಚರ್ಚೆ ನಡೆಸಿದರು.
ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಆರೋಗ್ಯ ಕುಟುಂಬ ಕಲ್ಯಾಣ ಸಚಿವ ದಿನೇಶ್‍ಗುಂಡೂರಾವ್, ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ, ಕೃಷಿ ಸಚಿವ ಚಲುವರಾಯಸ್ವಾಮಿ, ಹಾಸನ ಸಂಸದ ಶ್ರೇಯಸ್ ಪಟೇಲ್, ಶಾಸಕ ಹಾಗೂ ಸರ್ಕಾರದ ಮುಖ್ಯ ಸಚೇತಕ ಪಿ.ಎಂ.ಅಶೋಕ್, ಮಾಜಿ ಸಂಸದ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಚಂದ್ರಪ್ಪ ಸೇರಿದಂತೆ ಹಲವು ಅಧಿಕಾರಿಗಳು ಗೃಹಸಚಿವರ ಮನೆಗೆ ಭೇಟಿ ನೀಡಿ ಸಮಾಲೋಚನೆ ನಡೆಸಿದರು. ‌

ಸಚಿವ ಪರಮೇಶ್ವರ್ ಅವರ ಜೊತೆ ಎಚ್.ಸಿ.ಮಹದೇವಪ್ಪ, ದಿನೇಶ್‍ಗುಂಡೂರಾವ್, ಸತೀಶ್ ಜಾರಕಿಹೊಳಿಯವರು ಒಂದೇ ಕಾರಿನಲ್ಲಿ ಮನೆಯಿಂದ ಹೊರಹೋಗಿದ್ದುದು ವಿಶೇಷವಾಗಿತ್ತು.
ನಾಲ್ಕು ಮಂದಿ ಸಚಿವರು ಒಂದೇ ಕಾರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಿವಾಸಕ್ಕೆ ತೆರಳಿದರು. ಅಲ್ಲಿ ನೂತನ ಪೊಲೀಸ್ ಮಹಾ ನಿರ್ದೇಶಕ ಎಂ.ಎ.ಸಲೀಂ ಅವರ ಅಭಿನಂದನೆ ಬಳಿಕ ಮುಖ್ಯಮಂತ್ರಿಯವರು ಸಚಿವರ ಜೊತೆ ಪ್ರತ್ಯೇಕ ಚರ್ಚೆ ನಡೆಸಿದರು.

ಆಂದೋಲನ ಡೆಸ್ಕ್

Recent Posts

ರಾಜ್ಯದಲ್ಲಿ ಮೂರು ದಿನ ಮಳೆ ಮುನ್ಸೂಚನೆ: ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು: ರಾಜ್ಯದಲ್ಲಿ ಮೂರು ದಿನಗಳ ಕಾಲ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ.1ರಂದು ರಾಯಚೂರು, ಕೊಪ್ಪಳ,…

40 mins ago

ಯಾಲಕ್ಕೂರು, ಸುತ್ತಲಿನ ಗ್ರಾಮಗಳಿಗೆ ಬಂತು ಸಾರಿಗೆ ಬಸ್ಸು!

ಚಾಮರಾಜನಗರ: ತಾಲ್ಲೂಕಿನ ಯಾಲಕ್ಕೂರು ಹಾಗೂ ಸುತ್ತಮುತ್ತಲಿನ ಆರು ಗ್ರಾಮಗಳಿಗೆ ಸಾರಿಗೆ ಬಸ್ಸೇ ಇಲ್ಲ ಎಂದು ‘ಆಂದೋಲನ ಪತ್ರಿಕೆ’ಯಲ್ಲಿ ಈಚೆಗೆ ಪ್ರಕಟವಾಗಿದ್ದ…

4 hours ago

ಓದುಗರ ಪತ್ರ: ಬಿಸಿಲಲ್ಲೋ ಅಣ್ಣಾ..!

ಬಿಸಿಲಲ್ಲೋ ಅಣ್ಣ ಇದು ಬರಿ ಬಿಸಿಲಲ್ಲೋ ! ಯಾರು ಹೆಸರಿಟ್ಟರೋ? ಇದಕ್ಕೆ ‘ನಿಲ್ಲೋ ಎಲ್ಲೋ’ ನಿಂತಲ್ಲಿ ನಿಲ್ಲಲು, ಕುಂತಲ್ಲಿ ಕೂರಲು…

4 hours ago

ಓದುಗರ ಪತ್ರ: ಸರ್ಕಾರಿ ಶಾಲೆಗಳ ಅಭಿವೃದ್ಧಿ ಸ್ವಾಗತಾರ್ಹ

ರಾಜ್ಯದ ಸರ್ಕಾರಿ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳ ಬಲವರ್ಧನೆಗೆ ಸರ್ಕಾರ ಮುಂದಾಗಿರುವುದು ಅತ್ಯಂತ ಸಂತೋಷ ಮತ್ತು ಹೆಮ್ಮೆಯ ಸಂಗತಿ. ಮೂಲಸೌಕರ್ಯದ…

4 hours ago

ಓದುಗರ ಪತ್ರ: ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕವಾಗುವ ಇಂಟರ್ನಲ್ಸ್ ಅಂಕಗಳು

ಮಕ್ಕಳು ಬೋರ್ಡ್ ಪರೀಕ್ಷೆಗಳಲ್ಲಿ ಅಂಕಗಳನ್ನು ತೆಗೆಯುವ ಅರ್ಹತೆ ಇದ್ದರೂ, ಇಂಟರ್ನಲ್ಸ್ ಮಾರ್ಕ್ಸ್(ಆಂತರಿಕ ಅಂಕ) ಎಂಬ ಭೂತದಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇತ್ತೀಚೆಗೆ…

4 hours ago

ನಾವಿಕನೇ ಇಲ್ಲದ ಕೊಡಗು ಪ್ರವಾಸೋದ್ಯಮ ಇಲಾಖೆ..!

ಪುನೀತ್ ಮಡಿಕೇರಿ ಇಲಾಖೆಯಲ್ಲಿ ಸಿಬ್ಬಂದಿ ನೇಮಕಕ್ಕೆ ಪ್ರವಾಸೋದ್ಯಮಿಗಳ ಆಗ್ರಹ  ಮಡಿಕೇರಿ: ಕೊಡಗಿನಲ್ಲಿ ಪ್ರವಾಸೋದ್ಯಮ ಇಲಾಖೆಯನ್ನು ಮುನ್ನಡೆಸಲು ನಾವಿಕನೇ ಇಲ್ಲದಾಗಿದ್ದು, ಕಳೆದ ಒಂದು ವರ್ಷದಿಂದ…

4 hours ago