ಬೆಂಗಳೂರು : ಸಮಾಜಘಾತುಕ ಶಕ್ತಿಗಳು ಹಾಗೂ ಉಗ್ರಗಾಮಿ ಸಂಘಟನೆಗಳು ನಡೆಸುತ್ತಿರುವ ದುಷ್ಕೃತ್ಯಗಳ ಬಗ್ಗೆ ರಾಜ್ಯದ ಕಾಂಗ್ರೆಸ್ ಸರಕಾರ ಸಹಾನುಭೂತಿ ಮನೋಭಾವ ಪ್ರದರ್ಶಿಸುತ್ತಿರುವುದು ಆಘಾತಕಾರಿ ಬೆಳವಣಿಗೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಲೋಕಸಭೆ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು, ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ದೇಶದ್ರೋಹ ಕೆಲಸ ಮಾಡುತ್ತಿರುವ ರಾಜ್ಯ ಸರಕಾರವನ್ನು ವಜಾ ಮಾಡುವಂತೆ ರಾಜ್ಯಪಾಲರಿಗೂ ಮನವಿ ಸಲ್ಲಿಸಲಾಗಿದೆ.
ಜನವಿರೋಧಿ ಧೋರಣೆಯ ಈ ಸರಕಾರಕ್ಕೆ ಒಂದು ಕ್ಷಣವೂ ಅಧಿಕಾರದಲ್ಲಿ ಮುಂದುವರಿಯುವ ನೈತಿಕತೆ ಇಲ್ಲ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಪ್ರಣಾಳಿಕೆ ಸಿದ್ಧಪಡಿಸುವುದಕ್ಕೆ ಪೂರ್ವಭಾವಿಯಾಗಿ ಜನತೆಯಿಂದ ಅಭಿಪ್ರಾಯ ಸಂಗ್ರಹಿಸುವ “ಸಂಕಲ್ಪ ಅಭಿಯಾನ” ಕಾರ್ಯಕ್ರಮಕ್ಕೆ ಪಕ್ಷದ ಕಚೇರಿಯಲ್ಲಿ ಭಾನುವಾರ ಚಾಲನೆ ನೀಡಿದ ಬಳಿಕ ಸುದ್ದಿಗಾರರಿಗೆ ಅವರು ಪ್ರತಿಕ್ರಿಯೆ ನೀಡಿದರು.
ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಮತ್ತು ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಗಳಲ್ಲಿ ಸರಕಾರ ನಡೆದುಕೊಳ್ಳುತ್ತಿರುವ ರೀತಿ ಕಳವಳಕಾರಿಯಾಗಿದೆ.
ದೇಶ ವಿದ್ರೋಹಿ ಶಕ್ತಿಗಳನ್ನೇ ಸಮರ್ಥನೆ ಮಾಡುವ, ದುಷ್ಕೃತ್ಯಗಳನ್ನು ಮುಚ್ಚಿಹಾಕುವ ಷಡ್ಯಂತ್ರ ನಡೆಸಲಾಗಿದೆ. ಅಲ್ಪಸಂಖ್ಯಾತರ ಓಲೈಕೆ ರಾಜಕಾರಣದಲ್ಲಿ ನಿರತವಾಗಿರುವ ಕಾಂಗ್ರೆಸ್ ಸರಕಾರ ಇಂತಹ ಕೃತ್ಯಗಳಲ್ಲೂ ಕೀಳು ಮನೋಭಾವ ಪ್ರದರ್ಶಿಸುತ್ತಿರುವುದು ರಾಜ್ಯದ ಜನತೆಯಲ್ಲಿ ಆಘಾತವುಂಟು ಮಾಡಿದೆ ಎಂದು ಕಿಡಿಕಾರಿದರು.
ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯನ್ನು ತಕ್ಷಣ ತೆರೆಯದಿದ್ದರೆ ಇರಾನ್ನ ಎಲ್ಲ ತೈಲ ಬಾವಿಗಳು ಮತ್ತು ಖಾರ್ಗ್ ದ್ವೀಪಗಳನ್ನು ಸಂಪೂರ್ಣವಾಗಿ ನಾಶಪಡಿಸುವುದಾಗಿ…
ಬೆಂಗಳೂರು : ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗೆ ಮೀಸಲಾಗಿ 450 ಹಾಸಿಗೆಗಳ ಬೃಹತ್, ಅತ್ಯಾಧುನಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಇಂದಿರಾ…
ಬೈಲಕುಪ್ಪೆ : ನಿನ್ನೆ ರಾತ್ರಿ ನಡೆದ ಹಿಟ್ ಅಂಡ್ ರನ್ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆಗೆ ಆಕ್ರೋಶ ವ್ಯಕ್ತಪಡಿಸಿದ…
ಹೈದರಬಾದ್ : ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸುವರ್ಣಲತಾ ಅವರು ನಿಧನರಾಗಿದ್ದಾರೆ. 85 ವರ್ಷದ ಸುವರ್ಣಲತಾ ಅವರು…
ಮುಂಬೈ : ‘ಧುರಂಧರ್-2’ ಚಿತ್ರದ ಯಶಸ್ವಿ ನಟಿ ಸಾರಾ ಅರ್ಜುನ್ ಅವರಿಗೆ ಸದ್ಯ ಖ್ಯಾತಿ ಹೆಚ್ಚಾಗಿದೆ. ಭಾನುವಾರ ಮುಂಬೈನ ವಾಂಖೆಡೆ…
ಚೆನ್ನೈ : ಏಪ್ರಿಲ್ 23 ರಂದು ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಮತ್ತು ಪ್ರತಿಸ್ಪರ್ಧಿ ಟಿವಿಕೆ…