ರಾಜ್ಯ

ಉಗ್ರರ ಬಗ್ಗೆ ಕಾಂಗ್ರೆಸ್‌ನ ಸಹಾನುಭೂತಿ ಮನೋಭಾವ ಆತಂಕಕಾರಿ : ಅಶೋಕ್‌ ಆಕ್ರೋಶ

ಬೆಂಗಳೂರು : ಸಮಾಜಘಾತುಕ ಶಕ್ತಿಗಳು ಹಾಗೂ ಉಗ್ರಗಾಮಿ ಸಂಘಟನೆಗಳು ನಡೆಸುತ್ತಿರುವ ದುಷ್ಕೃತ್ಯಗಳ ಬಗ್ಗೆ ರಾಜ್ಯದ ಕಾಂಗ್ರೆಸ್‌ ಸರಕಾರ ಸಹಾನುಭೂತಿ ಮನೋಭಾವ ಪ್ರದರ್ಶಿಸುತ್ತಿರುವುದು ಆಘಾತಕಾರಿ ಬೆಳವಣಿಗೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌. ಅಶೋಕ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಲೋಕಸಭೆ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು, ವೋಟ್‌ ಬ್ಯಾಂಕ್‌ ರಾಜಕಾರಣಕ್ಕಾಗಿ ದೇಶದ್ರೋಹ ಕೆಲಸ ಮಾಡುತ್ತಿರುವ ರಾಜ್ಯ ಸರಕಾರವನ್ನು ವಜಾ ಮಾಡುವಂತೆ ರಾಜ್ಯಪಾಲರಿಗೂ ಮನವಿ ಸಲ್ಲಿಸಲಾಗಿದೆ.

ಜನವಿರೋಧಿ ಧೋರಣೆಯ ಈ ಸರಕಾರಕ್ಕೆ ಒಂದು ಕ್ಷಣವೂ ಅಧಿಕಾರದಲ್ಲಿ ಮುಂದುವರಿಯುವ ನೈತಿಕತೆ ಇಲ್ಲ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಪ್ರಣಾಳಿಕೆ ಸಿದ್ಧಪಡಿಸುವುದಕ್ಕೆ ಪೂರ್ವಭಾವಿಯಾಗಿ ಜನತೆಯಿಂದ ಅಭಿಪ್ರಾಯ ಸಂಗ್ರಹಿಸುವ “ಸಂಕಲ್ಪ ಅಭಿಯಾನ” ಕಾರ್ಯಕ್ರಮಕ್ಕೆ ಪಕ್ಷದ ಕಚೇರಿಯಲ್ಲಿ ಭಾನುವಾರ ಚಾಲನೆ ನೀಡಿದ ಬಳಿಕ ಸುದ್ದಿಗಾರರಿಗೆ ಅವರು ಪ್ರತಿಕ್ರಿಯೆ ನೀಡಿದರು.

ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಮತ್ತು ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ ಪ್ರಕರಣಗಳಲ್ಲಿ ಸರಕಾರ ನಡೆದುಕೊಳ್ಳುತ್ತಿರುವ ರೀತಿ ಕಳವಳಕಾರಿಯಾಗಿದೆ.

ದೇಶ ವಿದ್ರೋಹಿ ಶಕ್ತಿಗಳನ್ನೇ ಸಮರ್ಥನೆ ಮಾಡುವ, ದುಷ್ಕೃತ್ಯಗಳನ್ನು ಮುಚ್ಚಿಹಾಕುವ ಷಡ್ಯಂತ್ರ ನಡೆಸಲಾಗಿದೆ. ಅಲ್ಪಸಂಖ್ಯಾತರ ಓಲೈಕೆ ರಾಜಕಾರಣದಲ್ಲಿ ನಿರತವಾಗಿರುವ ಕಾಂಗ್ರೆಸ್‌ ಸರಕಾರ ಇಂತಹ ಕೃತ್ಯಗಳಲ್ಲೂ ಕೀಳು ಮನೋಭಾವ ಪ್ರದರ್ಶಿಸುತ್ತಿರುವುದು ರಾಜ್ಯದ ಜನತೆಯಲ್ಲಿ ಆಘಾತವುಂಟು ಮಾಡಿದೆ ಎಂದು ಕಿಡಿಕಾರಿದರು.

andolana

Recent Posts

ಆಂಧ್ರದಲ್ಲಿ ಮತ್ತೆ ಕೋವಿಡ್‌ ಆತಂಕ: ಇಬ್ಬರು ಬಲಿ

ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್‌ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್‌ಆರ್‌ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್‌…

55 mins ago

ಪಂಚಭೂತಗಳಲ್ಲಿ ಲೀನರಾದ ಗಾನಕೋಗಿಲೆ ಎಸ್.ಜಾನಕಿ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…

2 hours ago

ಹೇಮಾವತಿ ನದಿ ಹಿನ್ನೀರಿನಲ್ಲಿ ಕಣ್ಮರೆಯಾಗಿದ್ದ ಇಬ್ಬರ ಮೃತದೇಹ ಪತ್ತೆ

ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…

3 hours ago

ಮಧ್ಯಪ್ರಾಚ್ಯ ಮತ್ತೆ ಉದ್ವಿಗ್ನ: ಹಾರ್ಮುಜ್‌ ಜಲಸಂಧಿ ಮುಚ್ಚಿದ ಇರಾನ್‌

ಟೆಹರಾನ್:‌ ಹಾರ್ಮುಜ್‌ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್‌ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…

3 hours ago

ರಾಜ್ಯದಲ್ಲಿ ನೈರುತ್ಯ ಮುಂಗಾರು ಮತ್ತೆ ದುರ್ಬಲ: ತೀವ್ರಗೊಂಡ ಬರದ ಛಾಯೆ

ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…

3 hours ago

ಕಣಿಯನಹುಂಡಿ ತೋಟದ ಮನೆಯಲ್ಲಿ ನೆರವೇರಲಿದೆ ಎಸ್‌.ಜಾನಕಿ ಅವರ ಅಂತ್ಯಕ್ರಿಯೆ

ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…

4 hours ago