ಹಾಸನ: ಕೇವಲ ಮೂರು ರಾಜ್ಯಗಳಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್, ಕೇಂದ್ರ ಸರ್ಕಾರದ ಅಧಿಕಾರ ಹಿಡಿಯಲು ಸಾಧ್ಯವೇ ಎಂದು ಜೆಡಿಎಸ್ ವರಿಷ್ಶ ಹೆಚ್.ಡಿ ದೇವೇಗೌಡ ಪ್ರಶ್ನಿಸಿದರು.
ಅರಸೀಕೆರೆ ತಾಲೂಕಿನ ಗಂಡಸಿ ಹೋಬಳಿಯ ನಾಗರಹಳ್ಳಿ ಗ್ರಾಮಾದಲ್ಲಿ ಶನಿವಾರ (ಏ.೬) ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. ಕಾಂಗ್ರೆಸ್ ಈವರೆಗೆ ಲೋಕಸಭೆಯಲ್ಲಿ ಅಧಿಕೃತವಾಗಿ ಪ್ರತಿಪಕ್ಷದ ಸ್ಥಾನ ಕೂಡ ಸಿಕ್ಕಿಲ್ಲ. ಇಲ್ಲಸಲ್ಲದ ಸುಳ್ಳು ಭರವಸೆಗಳನ್ನು ನೀಡಿ ಜನರಿಗೆ ವಂಚನೆ ಮಾಡಲು ಕಾಂಗ್ರೆಸ್ ಮುಂದಾಗಿದೆ ಎಂದರು.
ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ 25 ಗ್ಯಾರಂಟಿ ಘೋಷಿಸಿದೆ. ತಮ್ಮ ಸರ್ಕಾರ ಬಂದರೆ ದೇಶದಲ್ಲಿ 8 ಕೋಟಿ ಮನೆಗಳನ್ನು ನಿರ್ಮಾಣ ಮಾಡಿ, ಎಲ್ಲ ರೀತಿಯ ಸಾಲಮನ್ನಾ ಮಾಡುವುದಾಗಿ ಹೇಳಿದ್ದಾರೆ. ಇವರ ಈ ಎಲ್ಲ ಭರವಸೆಗಳನ್ನು ಈಡೇರಿಸಲು ಹಣ ಎಲ್ಲಿದೆ? ಇಂತಹ ಸುಳ್ಳು ಭರವಸೆಗಳನ್ನು ಜನ ನಂಬಬಾರದು ಎಂದರು.
ಶುಕ್ರವಾರ ಬಾಬು ಜಗಜೀವನ್ರಾಂ ಜಯಂತಿಯಲ್ಲಿ ಕಾಂಗ್ರೆಸ್ನ ಯಾವೊಬ್ಬ ನಾಯಕನು ಜಗಜೀವನ್ರಾಂ ಬಗ್ಗೆ ಒಂದು ಮಾತನಾಡಿಲ್ಲ. ಇಂದಿರಗಾಂಧಿ, ನೆಹರು ಕಾಲದಲ್ಲಿ ಸಚಿವರಾಗಿದ್ದವರಿಗೆ ಸಲ್ಲಿಸುವ ಗೌರವ ಇದೇನಾ ಎಂದು ಪ್ರಶ್ನಿಸಿದರು.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…