Mallikarjun Kharge
ಹೊಸಪೇಟೆ: ಜಮ್ಮು-ಕಾಶೀರದಲ್ಲಿ ಪಹಲ್ಗಾಮ್ ದಾಳಿಗೂ ಮುನ್ನ ಮೋದಿಯವರಿಗೆ ಗುಪ್ತಚರ ಇಲಾಖೆ ಮುನ್ಸೂಚನೆ ನೀಡಿತ್ತು. ಆದರೂ ಕೇಂದ್ರ ಸರ್ಕಾರ ಸೂಕ್ತ ಕ್ರಮಗಳನ್ನು ಕೈಗೊಳ್ಳದೆ 26 ಮಂದಿ ಅಮಾಯಕ ಪ್ರವಾಸಿಗರ ಹತ್ಯೆಗೆ ಕಾರಣವಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.
ಹೊಸಪೇಟೆಯಲ್ಲಿ ನಡೆದ ಸಾಧನಾ ಸಮಾವೇಶದಲ್ಲಿ ಮಾತನಾಡಿದ ಅವರು, ಪಹಲ್ಗಾಮ್ನಲ್ಲಿ ಪೊಲೀಸರಾಗಲೀ, ಗಡಿ ಭದ್ರತೆಯ ಪಡೆಯಾಗಲೀ ಅಥವಾ ಸೇನೆಯಾಗಲೀ ಪ್ರವಾಸಿಗರಿಗೆ ರಕ್ಷಣೆ ಒದಗಿಸದೇ ಇದ್ದುದ್ದಕ್ಕಾಗಿ 26 ಜೀವಗಳ ಹತ್ಯೆಯಾಗಿದೆ ಎಂದು ಹೇಳಿದರು.
ಏ.17 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜಮ್ಮು-ಕಾಶ್ಮೀರ ಪ್ರವಾಸ ನಿಗದಿಯಾಗಿತ್ತು. ಗುಪ್ತಚರ ಇಲಾಖೆ ಅಲ್ಲಿ ಗಲಾಟೆಯಾಗುತ್ತಿದೆ, ಪ್ರವಾಸವನ್ನು ರದ್ದು ಮಾಡಿ ಎಂದು ಸಲಹೆ ನೀಡಿತ್ತು. ಹೀಗಾಗಿ ಪ್ರವಾಸ ರದ್ದುಗೊಂಡಿತ್ತು. ಇವರಿಗೆ ಮೊದಲೇ ಮುನ್ಸೂಚನೆ ಇದ್ದರೂ ಪ್ರವಾಸಿಗರಿಗೆ ಪೊಲೀಸರ ಮೂಲಕ ಏಕೆ ಎಚ್ಚರಿಕೆ ಕೊಡಲಿಲ್ಲ ಎಂದು ಖರ್ಗೆ ಪ್ರಶ್ನಿಸಿದರು.
ಇನ್ನು ದೇಶಕ್ಕೆ ಸ್ವಾತಂತ್ರ್ಯ ಮತ್ತು ಸಂವಿಧಾನ ಕೊಟ್ಟಿದ್ದು ಕಾಂಗ್ರೆಸ್. ಅದನ್ನು ಉಳಿಸಿಕೊಳ್ಳುವುದು ನಮ ಜವಾಬ್ದಾರಿ ಎಂದರು. ಬಿಜೆಪಿಯವರು ದೇಶರಕ್ಷಣೆಯನ್ನು ಗುತ್ತಿಗೆ ಪಡೆದಂತೆ ವರ್ತಿಸುತ್ತಾರೆ. ದೇಶಕ್ಕಾಗಿ ಸರ್ವಸ್ವವನ್ನೂ ಕಳೆದುಕೊಂಡ ಕಾಂಗ್ರೆಸ್ ಒಂದೆಡೆಯಾದರೆ ದೇಶಕ್ಕಾಗಿ ಏನನ್ನೂ ಮಾಡದ ಬಿಜೆಪಿ ಮತ್ತೊಂದು ಕಡೆ ಇದೆ. ಸೇನೆಯ ವಕ್ತಾರ ಸೋಫಿಯಾ ಖುರೇಷಿಗೆ ಪಾಕಿಸ್ತಾನದ ನಂಟಿದೆ ಎಂದು ಬಿಜೆಪಿಯ ಸಚಿವನೊಬ್ಬ ಹೀಯಾಳಿಸಿದ್ದಾನೆ. ಮೋದಿಯವರು ಮೊದಲು ಬಿಜೆಪಿಯಲ್ಲಿರುವ ದೇಶದ್ರೋಹಿಗಳನ್ನು ಒದ್ದು ಓಡಿಸಿ, ಸಚಿವನ ರಾಜೀನಾಮೆ ಪಡೆದುಕೊಳ್ಳಿ ಎಂದು ಆಗ್ರಹಿಸಿದರು.
ಬೆಂಗಳೂರು: ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಾತನಾಡಿದ…
ಚಾಮರಾಜನಗರ: ಇರಾನ್-ಇಸ್ರೇಲ್ ನಡುವಿನ ಸಂಘರ್ಷ ಮುಂದುವರಿದಿದ್ದು, ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿರುವ ಪರಿಣಾಮ ಸೋಷಿಯಲ್ ಮೀಡಿಯಾದಲ್ಲಿ ಪೆಟ್ರೋಲ್, ಡೀಸೆಲ್…
ನಂಜನಗೂಡು: ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಕರುವಿನ ಮೇಲೆ ಚಿರತೆ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ನಂಜನಗೂಡು ತಾಲ್ಲೂಕಿನ ಹನುಮನಪುರ…
ವಾಷಿಂಗ್ಟನ್: ಇರಾನ್ ಜೊತೆ ಕದನ ವಿರಾಮ್ ಮಾಡಿಕೊಳ್ಳಲು ಬಯಸಲ್ಲ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. NATO ಮಿತ್ರರಾಷ್ಟ್ರಗಳನ್ನು…
ದಣಿವರಿಯದೆ ದುಡಿದಿರಿ ಆರೋಗ್ಯ ಶಿಕ್ಷಣ ಕ್ಷೇತ್ರಗಳಲಿ ಉಸಿರಾಗಿತ್ತು ನಿಮಗೆ ಸಮಾಜಸೇವೆ! ಧಿಕ್ಕರಿಸಿದಿರಿ ಮೌಢ್ಯಕಂದಾಚಾರಗಳ ಪ್ರೀತಿಸಿದಿರಿ ಎಲ್ಲರನೂ ಸಮಭಾವದಲಿ! ಮನಮಾಗಿದ ನಗುಮೊಗದ…
ನಾರ್ತ್ ಅಟ್ಲಾಂಟಿಕ್ ಟ್ರೀಟಿ ಆರ್ಗನೈಸೇಶನ್ ( ನಾಟೋ) ದೇಶಗಳ ಗುಂಪಿಗೆ ಸೇರಿದ ಕೆನಡಾ, ಆಸ್ಟ್ರೇಲಿಯಾ, ಬ್ರಿಟನ್ ಮುಂತಾದ ದೇಶಗಳು ಇರಾನಿನ…