ರಾಜ್ಯ

ದೇಶಕ್ಕೆ ಸ್ವಾತಂತ್ರ್ಯ ಮತ್ತು ಸಂವಿಧಾನ ಕೊಟ್ಟಿದ್ದು ಕಾಂಗ್ರೆಸ್: ಮಲ್ಲಿಕಾರ್ಜುನ ಖರ್ಗೆ

ಹೊಸಪೇಟೆ: ಜಮ್ಮು-ಕಾಶೀರದಲ್ಲಿ ಪಹಲ್ಗಾಮ್ ದಾಳಿಗೂ ಮುನ್ನ ಮೋದಿಯವರಿಗೆ ಗುಪ್ತಚರ ಇಲಾಖೆ ಮುನ್ಸೂಚನೆ ನೀಡಿತ್ತು. ಆದರೂ ಕೇಂದ್ರ ಸರ್ಕಾರ ಸೂಕ್ತ ಕ್ರಮಗಳನ್ನು ಕೈಗೊಳ್ಳದೆ 26 ಮಂದಿ ಅಮಾಯಕ ಪ್ರವಾಸಿಗರ ಹತ್ಯೆಗೆ ಕಾರಣವಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.

ಹೊಸಪೇಟೆಯಲ್ಲಿ ನಡೆದ ಸಾಧನಾ ಸಮಾವೇಶದಲ್ಲಿ ಮಾತನಾಡಿದ ಅವರು, ಪಹಲ್ಗಾಮ್‍ನಲ್ಲಿ ಪೊಲೀಸರಾಗಲೀ, ಗಡಿ ಭದ್ರತೆಯ ಪಡೆಯಾಗಲೀ ಅಥವಾ ಸೇನೆಯಾಗಲೀ ಪ್ರವಾಸಿಗರಿಗೆ ರಕ್ಷಣೆ ಒದಗಿಸದೇ ಇದ್ದುದ್ದಕ್ಕಾಗಿ 26 ಜೀವಗಳ ಹತ್ಯೆಯಾಗಿದೆ ಎಂದು ಹೇಳಿದರು.

ಏ.17 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜಮ್ಮು-ಕಾಶ್ಮೀರ ಪ್ರವಾಸ ನಿಗದಿಯಾಗಿತ್ತು. ಗುಪ್ತಚರ ಇಲಾಖೆ ಅಲ್ಲಿ ಗಲಾಟೆಯಾಗುತ್ತಿದೆ, ಪ್ರವಾಸವನ್ನು ರದ್ದು ಮಾಡಿ ಎಂದು ಸಲಹೆ ನೀಡಿತ್ತು. ಹೀಗಾಗಿ ಪ್ರವಾಸ ರದ್ದುಗೊಂಡಿತ್ತು. ಇವರಿಗೆ ಮೊದಲೇ ಮುನ್ಸೂಚನೆ ಇದ್ದರೂ ಪ್ರವಾಸಿಗರಿಗೆ ಪೊಲೀಸರ ಮೂಲಕ ಏಕೆ ಎಚ್ಚರಿಕೆ ಕೊಡಲಿಲ್ಲ ಎಂದು ಖರ್ಗೆ ಪ್ರಶ್ನಿಸಿದರು.

ಇನ್ನು ದೇಶಕ್ಕೆ ಸ್ವಾತಂತ್ರ್ಯ ಮತ್ತು ಸಂವಿಧಾನ ಕೊಟ್ಟಿದ್ದು ಕಾಂಗ್ರೆಸ್. ಅದನ್ನು ಉಳಿಸಿಕೊಳ್ಳುವುದು ನಮ ಜವಾಬ್ದಾರಿ ಎಂದರು. ಬಿಜೆಪಿಯವರು ದೇಶರಕ್ಷಣೆಯನ್ನು ಗುತ್ತಿಗೆ ಪಡೆದಂತೆ ವರ್ತಿಸುತ್ತಾರೆ. ದೇಶಕ್ಕಾಗಿ ಸರ್ವಸ್ವವನ್ನೂ ಕಳೆದುಕೊಂಡ ಕಾಂಗ್ರೆಸ್ ಒಂದೆಡೆಯಾದರೆ ದೇಶಕ್ಕಾಗಿ ಏನನ್ನೂ ಮಾಡದ ಬಿಜೆಪಿ ಮತ್ತೊಂದು ಕಡೆ ಇದೆ. ಸೇನೆಯ ವಕ್ತಾರ ಸೋಫಿಯಾ ಖುರೇಷಿಗೆ ಪಾಕಿಸ್ತಾನದ ನಂಟಿದೆ ಎಂದು ಬಿಜೆಪಿಯ ಸಚಿವನೊಬ್ಬ ಹೀಯಾಳಿಸಿದ್ದಾನೆ. ಮೋದಿಯವರು ಮೊದಲು ಬಿಜೆಪಿಯಲ್ಲಿರುವ ದೇಶದ್ರೋಹಿಗಳನ್ನು ಒದ್ದು ಓಡಿಸಿ, ಸಚಿವನ ರಾಜೀನಾಮೆ ಪಡೆದುಕೊಳ್ಳಿ ಎಂದು ಆಗ್ರಹಿಸಿದರು.

ಆಂದೋಲನ ಡೆಸ್ಕ್

Recent Posts

ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಅರಬ್ಬಿ ಸಮುದ್ರದ ಮೇಲೆ ತೇವಾಂಶ ಭರಿತ ಮೋಡಗಳು ಹಾದು ಹೋಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಸೋಮವಾರ ಮಳೆಯಾಗಿದೆ. ರಾಜಧಾನಿ…

2 hours ago

2028ಕ್ಕೆ ಸಿಎಂ ವಿಚಾರ: ಎಚ್‌ಡಿಕೆ ಹಗಲು ಕನಸು ಕಾಣುತ್ತಿದ್ದಾರೆ ಎಂದ ಜಮೀರ್‌ ಅಹಮ್ಮದ್‌ ಖಾನ್‌

ದಾವಣಗೆರೆ: 2028ಕ್ಕೆ ಎಚ್.ಡಿ.ಕುಮಾರಸ್ವಾಮಿ ಸಿಎಂ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ವ್ಯಂಗ್ಯವಾಡಿದ್ದಾರೆ. ಈ ಕುರಿತು…

2 hours ago

ಲಕ್ಕುಂಡಿ| ಪ್ರಜ್ವಲ್‌ ರಿತ್ತಿ ಕುಟುಂಬಕ್ಕೆ ಸರ್ಕಾರದಿಂದ ಬಿಗ್‌ ಗಿಫ್ಟ್‌

ಗದಗ: ಲಕ್ಕುಂಡಿಯಲ್ಲಿ ಮನೆ ಪಾಯ ಅಗೆಯುವ ವೇಳೆ ಚಿನ್ನದ ನಿಧಿ ಪತ್ತೆಹಚ್ಚಿ ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿದ ಪ್ರಜ್ವಲ್‌ ರಿತ್ತಿ ಕುಟುಂಬಕ್ಕೆ…

2 hours ago

ಟೂರಿಸ್ಟ್‌ ಬೋಟ್‌ ಮುಳುಗಿ ಇಬ್ಬರು ಸಾವು ಪ್ರಕರಣ: ತನಿಖೆಗೆ ಸೂಚಿಸಿದ ಲಕ್ಷ್ಮೀ ಹೆಬ್ಬಾಳ್ಕರ್‌

ಉಡುಪಿ: ಅರಬ್ಬಿ ಸಮುದ್ರದಲ್ಲಿ ಟೂರಿಸ್ಟ್‌ ಬೋಟ್‌ ಮುಳುಗಿ ಇಬ್ಬರು ಪ್ರವಾಸಿಗರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು…

2 hours ago

ವಾರಕ್ಕೆ 5 ದಿನ ಮಾತ್ರ ಕೆಲಸಕ್ಕೆ ಆಗ್ರಹಿಸಿ ಇಂದು ಬ್ಯಾಂಕ್‌ ನೌಕರರ ಮುಷ್ಕರ

ಬೆಂಗಳೂರು: ಬ್ಯಾಂಕಿಂಗ್‌ ಕ್ಷೇತ್ರದ ನೌಕರರಿಗೆ ವಾರಕ್ಕೆ ಐದು ದಿನ ಮಾತ್ರ ಕೆಲಸದ ದಿನವಾಗಿಸಬೇಕೆಂಬುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ…

2 hours ago

ಉಡುಪಿ ಮಲ್ಪೆ ಬಳಿ ದೋಣಿ ಪಲ್ಟಿ: ಮೈಸೂರಿನ ಇಬ್ಬರು ಸಾವು

ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್‌ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…

14 hours ago