Mallikarjun Kharge
ಹೊಸಪೇಟೆ: ಜಮ್ಮು-ಕಾಶೀರದಲ್ಲಿ ಪಹಲ್ಗಾಮ್ ದಾಳಿಗೂ ಮುನ್ನ ಮೋದಿಯವರಿಗೆ ಗುಪ್ತಚರ ಇಲಾಖೆ ಮುನ್ಸೂಚನೆ ನೀಡಿತ್ತು. ಆದರೂ ಕೇಂದ್ರ ಸರ್ಕಾರ ಸೂಕ್ತ ಕ್ರಮಗಳನ್ನು ಕೈಗೊಳ್ಳದೆ 26 ಮಂದಿ ಅಮಾಯಕ ಪ್ರವಾಸಿಗರ ಹತ್ಯೆಗೆ ಕಾರಣವಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.
ಹೊಸಪೇಟೆಯಲ್ಲಿ ನಡೆದ ಸಾಧನಾ ಸಮಾವೇಶದಲ್ಲಿ ಮಾತನಾಡಿದ ಅವರು, ಪಹಲ್ಗಾಮ್ನಲ್ಲಿ ಪೊಲೀಸರಾಗಲೀ, ಗಡಿ ಭದ್ರತೆಯ ಪಡೆಯಾಗಲೀ ಅಥವಾ ಸೇನೆಯಾಗಲೀ ಪ್ರವಾಸಿಗರಿಗೆ ರಕ್ಷಣೆ ಒದಗಿಸದೇ ಇದ್ದುದ್ದಕ್ಕಾಗಿ 26 ಜೀವಗಳ ಹತ್ಯೆಯಾಗಿದೆ ಎಂದು ಹೇಳಿದರು.
ಏ.17 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜಮ್ಮು-ಕಾಶ್ಮೀರ ಪ್ರವಾಸ ನಿಗದಿಯಾಗಿತ್ತು. ಗುಪ್ತಚರ ಇಲಾಖೆ ಅಲ್ಲಿ ಗಲಾಟೆಯಾಗುತ್ತಿದೆ, ಪ್ರವಾಸವನ್ನು ರದ್ದು ಮಾಡಿ ಎಂದು ಸಲಹೆ ನೀಡಿತ್ತು. ಹೀಗಾಗಿ ಪ್ರವಾಸ ರದ್ದುಗೊಂಡಿತ್ತು. ಇವರಿಗೆ ಮೊದಲೇ ಮುನ್ಸೂಚನೆ ಇದ್ದರೂ ಪ್ರವಾಸಿಗರಿಗೆ ಪೊಲೀಸರ ಮೂಲಕ ಏಕೆ ಎಚ್ಚರಿಕೆ ಕೊಡಲಿಲ್ಲ ಎಂದು ಖರ್ಗೆ ಪ್ರಶ್ನಿಸಿದರು.
ಇನ್ನು ದೇಶಕ್ಕೆ ಸ್ವಾತಂತ್ರ್ಯ ಮತ್ತು ಸಂವಿಧಾನ ಕೊಟ್ಟಿದ್ದು ಕಾಂಗ್ರೆಸ್. ಅದನ್ನು ಉಳಿಸಿಕೊಳ್ಳುವುದು ನಮ ಜವಾಬ್ದಾರಿ ಎಂದರು. ಬಿಜೆಪಿಯವರು ದೇಶರಕ್ಷಣೆಯನ್ನು ಗುತ್ತಿಗೆ ಪಡೆದಂತೆ ವರ್ತಿಸುತ್ತಾರೆ. ದೇಶಕ್ಕಾಗಿ ಸರ್ವಸ್ವವನ್ನೂ ಕಳೆದುಕೊಂಡ ಕಾಂಗ್ರೆಸ್ ಒಂದೆಡೆಯಾದರೆ ದೇಶಕ್ಕಾಗಿ ಏನನ್ನೂ ಮಾಡದ ಬಿಜೆಪಿ ಮತ್ತೊಂದು ಕಡೆ ಇದೆ. ಸೇನೆಯ ವಕ್ತಾರ ಸೋಫಿಯಾ ಖುರೇಷಿಗೆ ಪಾಕಿಸ್ತಾನದ ನಂಟಿದೆ ಎಂದು ಬಿಜೆಪಿಯ ಸಚಿವನೊಬ್ಬ ಹೀಯಾಳಿಸಿದ್ದಾನೆ. ಮೋದಿಯವರು ಮೊದಲು ಬಿಜೆಪಿಯಲ್ಲಿರುವ ದೇಶದ್ರೋಹಿಗಳನ್ನು ಒದ್ದು ಓಡಿಸಿ, ಸಚಿವನ ರಾಜೀನಾಮೆ ಪಡೆದುಕೊಳ್ಳಿ ಎಂದು ಆಗ್ರಹಿಸಿದರು.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…