ರಾಜ್ಯ

ಎಚ್.ಡಿ.ದೇವೇಗೌಡರ ಜೀವ ಬಲಿ ಪಡೆಯಲು ರಾಜ್ಯ ಸರ್ಕಾರ ಸಂಚು ರೂಪಿಸಿದೆ: ಜೆಡಿಎಸ್‌ ನೇರ ಆರೋಪ

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಜೀವ ಬಲಿ ಪಡೆಯಲು ರಾಜ್ಯ ಕಾಂಗ್ರೆಸ್ ಸರಕಾರ ಸಂಚು ರೂಪಿಸಿದೆ ಎಂದು ಜೆಡಿಎಸ್ ಗಂಭೀರ ಆರೋಪ ಮಾಡಿದೆ. ಅಲ್ಲದೆ, ದೇವೆಗೌಡರ ಕುಟುಂಬವನ್ನು ಮುಗಿಸಲು ಕಾಂಗ್ರೆಸ್ ಸರ್ಕಾರ ವ್ಯವಸ್ಥಿತ ಹುನ್ನಾರ ನಡೆಸಿ ಯೋಜಿತವಾಗಿ ಟಾರ್ಗೆಟ್ ಮಾಡಿದೆ ಎಂದು ಆರೋಪಗಳನ್ನು ಮಾಡಿದೆ.

ವಕೀಲ ದೇವರಾಜೇಗೌಡರ ಜತೆ ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಮಂಡ್ಯದ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಅವರು ನಡೆಸಿರುವ ಮೊಬೈಲ್ ಸಂಭಾಷಣೆಯ ತುಣುಕುಗಳು ಮಾಧ್ಯಮಗಳಲ್ಲಿ ಬಹಿರಂಗವಾದ ಬೆನ್ನಲ್ಲಿಯೇ ಜೆಡಿಎಸ್ ಪಕ್ಷವು ತನ್ನ ಎಕ್ಸ್ ಖಾತೆಯಲ್ಲಿ ಡಿಸಿಎಂ ಡಿಕೆಶಿ ವಿರುದ್ಧ ನೇರ ವಾಗ್ದಾಳಿ ನಡೆಸಿದೆ.

ಹೊಂಚು ಹಾಕಿ ಸಂಚು ಮಾಡುವ ಕಾಂಗ್ರೆಸ್ ಪಕ್ಷದ ಅಸಲಿ ಮುಖ ಕಳಚಿ ಕೆಳಕ್ಕೆ ಬಿದ್ದಿದೆ. ಅಂಗೈ ಹುಣ್ಣಿಗೆ ಕನ್ನಡಿ ಬೇಕಿಲ್ಲ… ಹೌದಲ್ಲವೇ ಕಾಂಗ್ರೆಸ್ಸಿಗರೇ? ಸತ್ಯ ನಿಮ್ಮ ಮುಂದೆಯೇ ಇದೆ. ನಿಮ್ಮ ಅಧ್ಯಕ್ಷರೇ ಪೆನ್ ಡ್ರೈವ್ ಫ್ಯಾಕ್ಟರಿಯ ಒರಿಜಿನಲ್ ಓನರ್. CDಶಿವಕುಮಾರ್ ಗ್ಯಾಂಗ್ ನಡೆಸಿದ ಪೆನ್ ಡ್ರೈವ್ ಹಂಚಿಕೆಯ ಹೇಯ ಕೃತ್ಯದ ಸಂಚುಗಳೇ ಅವೆಲ್ಲಾ. ದೇವರಾಜೇಗೌಡರ ಹೇಳಿಕೆಯ ನಂತರ ಹೊರಬಿದ್ದಿರುವ ಆಡಿಯೋ ಟೇಪುಗಳೇ ಮಹಾಸಂಚಿನ ಮಹಾಕಥೆಯನ್ನು ಬಿಚ್ಚಿಟ್ಟಿವೆ. ಈಗ ಹೇಳಿ, ಯಾರು ಮೆಂಟಲ್? ಎಂದು ಜೆಡಿಎಸ್ ತೀಕ್ಷ್ಣವಾಗಿ ಪ್ರಶ್ನಿಸಿದೆ.

CDಶಿವಕುಮಾರ್ ಗ್ಯಾಂಗಿನ ಸಂಚುಗಳು ಹೀಗಿವೆ ಎಂದಿರುವ ಜೆಡಿಎಸ್, ಡಿ.ಕೆ.ಶಿವಕುಮಾರ್ ಹೂಡಿರುವ ಸಂಚುಗಳನ್ನು ಪಟ್ಟಿ ಮಾಡಿದೆ.

•ಸಂಚು ನಂ.1: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಪಖ್ಯಾತಿ ತರುವುದು.
•ಸಂಚು ನಂ.2: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ನಾಯಕತ್ವ ಹಾಳು ಮಾಡುವುದು.
•ಸಂಚು ನಂ.3: ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಮುರಿದು ಬೀಳುವಂತೆ ಮಾಡುವುದು.
•ಸಂಚು ನಂ.4: ಹೆಚ್.ಡಿ.ದೇವೆಗೌಡರ ಜೀವವನ್ನು ಬಲಿ ಪಡೆಯುವುದು.

ಡಿಕೆಶಿ ಸ್ಲೀಪರ್ ಸೆಲ್ ಟೂಲ್ ಕಿಟ್ ಏನು?

•ಈ ಮಹಾಸಂಚು ಸಾಕಾರಕ್ಕೆ CDಶಿವಕುಮಾರ್ ಹೂಡಲಿದ್ದ ಬಂಡವಾಳ ಬರೋಬ್ಬರಿ ₹100 ಕೋಟಿ!!
•ಹೆಚ್.ಡಿ.ಕುಮಾರಸ್ವಾಮಿ ಅವರೇ ಪೆನ್ ಡ್ರೈವ್ ಹಂಚಿದ್ದಾರೆ ಎಂದು ಹೇಳಲು ವಕೀಲ ದೇವರಾಜೇಗೌಡರಿಗೆ ₹100 ಕೋಟಿ ಆಫರ್!!
•ಅಡ್ವಾನ್ಸ್ ಆಗಿ ₹5 ಕೋಟಿ ಹಣವನ್ನು ಬೌರಿಂಗ್ ಕ್ಲಬ್ಬಿನ ಕೊಠಡಿ ಸಂಖ್ಯೆ 110ಕ್ಕೆ ರವಾನೆ.
•ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ರೆಡಿ ಮಾಡಿದ್ದೇ CDಶಿವಕುಮಾರ್.
•ಮೋದಿ, ಕುಮಾರಸ್ವಾಮಿ ಅವರುಗಳ ವಿರುದ್ಧ ಅಪಪ್ರಚಾರ ನಡೆಸಲು, ಇಡೀ ಸಂಚು ಅನುಷ್ಠಾನಕ್ಕೆ ನಾಲ್ವರು ಪ್ರಮುಖ ಸಚಿವರ ಸಮಿತಿ ರಚಿಸಿದ್ದೇ CDಶಿವಕುಮಾರ್.
•ದೇವೇಗೌಡರನ್ನು ಸಾವಿನ ದವಡೆಗೆ ನೂಕುವುದು ಈ ಸ್ಲೀಪರ್ ಸೆಲ್ ನ ಮಹಾನ್ ಟಾರ್ಗೆಟ್!!

ವಕೀಲರಾದ ದೇವೇರಾಜೇಗೌಡರೇ ಸ್ವತಃ ಬಿಚ್ಚಿಟ್ಟ ಈ ಸತ್ಯಗಳು ಹಾಗೂ ಆಡಿಯೋ ಟೇಪುಗಳು ಶತಮಾನದ ಇತಿಹಾಸ ಹೊಂದಿರುವ ಕಾಂಗ್ರೆಸ್ ಪಕ್ಷದ ಮಾನವನ್ನು ಬೀದಿ ಬೀದಿಯಲ್ಲಿ ಹರಾಜು ಹಾಕಿವೆ. ಕಂಡವರ ಮನೆಯಲ್ಲಿ ಸಾವು ಬಯಸುವ ಕಾಂಗ್ರೆಸ್ಸಿಗೆ ಧಿಕ್ಕಾರ ಎಂದು ಜೆಡಿಎಸ್ ಕಿಡಿಕಾರಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಮ್ಯಾನ್‌ಹೋಲ್ ಸರಿಪಡಿಸಿ

ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್‌ನಿಂದ ಹೊಲಸು ನೀರು…

3 hours ago

ಓದುಗರ ಪತ್ರ: ಎಚ್೧ಎನ್೧ ಮುನ್ನೆಚ್ಚರಿಕೆ ಇರಲಿ

ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…

3 hours ago

ಓದುಗರ ಪತ್ರ: ಭಲೆ ದರ್ಶನ್…ಭಲೆ ಭಲೆ…

ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…

3 hours ago

ಪೊಲೀಸ್ ಆಪ್‌ಗೆ ಖಾಸಗಿ ಸಿಸಿಟಿವಿ ಸೇರ್ಪಡೆ

ಎಚ್.ಎಸ್.ದಿನೇಶ್‌ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…

4 hours ago

ಫ್ಲೈಓವರ್ ಕಾಮಗಾರಿ ಕುಂಟುತ್ತಿದೆಯೇಕೆ?

ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…

6 hours ago

ಸಕ್ಕರೆ ಬೆಲೆ ಗಗನಮುಖಿ; ಗ್ರಾಹಕರಿಗೆ ಬರೆ

ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…

7 hours ago