ರಾಜ್ಯ

ನಾಲ್ಕು ರಾಜ್ಯಗಳಲ್ಲು ಕಾಂಗ್ರೆಸ್‌ ಗೆಲುವು ಖಚಿತ: ಖರ್ಗೆ

ಬೆಂಗಳೂರು: ಮಿಜೋರಾಂ ಹೊರತುಪಡಿಸಿ ಉಳಿದ ನಾಲ್ಕು ರಾಜ್ಯಗಳಲ್ಲಿ ಕಾಂಗ್ರೆಸ್​ ಗೆ ಜಯ ಸಿಕ್ಕೇ ಸಿಗುತ್ತದೆ ಎಂದು ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇಂದು ಬೆಂಗಳೂರು ಸದಾಶಿವನಗರದ ತಮ್ಮ ನಿವಾಸದಲ್ಲಿ ಪಂಚ ರಾಜ್ಯಗಳ ಚುನಾವಣೆ ವಿಚಾರವಾಗಿ ಪ್ರತಿಕ್ರಿಯಿಸಿದ ಮಲ್ಲಿಕಾರ್ಜುನ್ ಖರ್ಗೆ, ಎಲ್ಲಾ ರಾಜ್ಯಗಳಲ್ಲೂ ಚುನಾವಣೆ ಚೆನ್ನಾಗಿ ಆಗಿದೆ.

ನಮಗೆ ಬಂದಿರುವ ಫೀಡ್ ಬ್ಯಾಕ್ ಚೆನ್ನಾಗಿದೆ. ನಾಲ್ಕು ರಾಜ್ಯಗಳಲ್ಲಿ ಕಾಂಗ್ರೆಸ್ ಗೆ ಜಯ ಸಿಗುತ್ತೆ. ಮಿಜೋರಾಂನಲ್ಲಿ ಅತಂತ್ರ ಆಗಬಹುದು ಎಂದು ಹೇಳಿದ್ದಾರೆ.

ನಾವು ಊಹಿಸಿದಂತೆ ಫಲಿತಾಂಶ ಬರಲಿದೆ. ನಮಗೆ ಬಹುಮತ ದೊರೆಯುತ್ತದೆ. ಆಯಾ ರಾಜ್ಯಗಳ ನಾಯಕರ ಜೊತೆ ಮಾತನಾಡಿದ್ದೇನೆ. ಕಮಲ್ ನಾಥ್ ಜೊತೆಗೂ ಸಂಪರ್ಕದಲ್ಲಿದ್ದೇನೆ. ವಿಪಕ್ಷ ನಾಯಕರ ಜೊತೆ ಮಾತನಾಡಿದ್ದೇನೆ. ಝೂಂ ಮೀಟಿಂಗ್‌ ಗಳನ್ನು ಮಾಡಿದ್ದೇವೆ. ಎಲ್ಲ ಕಡೆಯೂ ನಮಗೆ ಬಹುಮತ ಬರುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

andolanait

Recent Posts

ವರ್ಷಕ್ಕೆ ಮೂರು ಸಿಲಿಂಡರ್ ಉಚಿತ – ತಮಿಳುನಾಡು ಜನರಿಗೆ ವಿಜಯ್‌ ಸರ್ಕಾರದ ಬಂಪರ್‌ ಆಫರ್‌!

ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್‌ ಸರ್ಕಾರದಿಂದ ಭರ್ಜರಿ ಗುಡ್‌ನ್ಯೂಸ್‌ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ವಿಚಾರದಲ್ಲಿ ಮಹತ್ವದ…

32 mins ago

ತಮಿಳುನಾಡಿಗೆ ಕಾವೇರಿ ನೀರು: ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…

36 mins ago

ಕಲಾಪಗಳೇ ನಡೆಯದ ಅಧಿವೇಶನ

ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…

2 hours ago

ಅಧಿಕಾರಿಗಳಿಗೆ ಚೆಲ್ಲಾಟ; ಅಲೆಮಾರಿಗಳ ಅಲೆದಾಟ

ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…

2 hours ago

ಬಿಜೆಪಿ-ಜಾ.ದಳ ಮನಸ್ತಾಪ; ಸಿಎಂ ಡಿಕೆಶಿ ‘ಭವಿಷ್ಯ’ಕ್ಕೆ  ವರ?

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…

6 hours ago

ಎಚ್.ಡಿ.ಕೋಟೆ ಗಡಿಯಲ್ಲಿ ಸೇತುವೆ ನಿರ್ಮಾಣಕ್ಕೆ ಎನ್‌ಒಸಿ!

ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ…

6 hours ago