ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಗ್ಯಾರಂಟಿಗಳಿಂದ ಕಾಂಗ್ರೆಸ್ಗೆ ಮತ ಬಂದಿಲ್ಲ. ಸರ್ಕಾರ ಪಾಪರ್ ಆಗಿ ಅಭಿವೃದ್ಧಿ ಶೂನ್ಯವಾಗಿರುವುದರಿಂದಲೇ ಕಾಂಗ್ರೆಸ್ ಸೋತಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಆರೋಪಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಮತಕ್ಕಾಗಿ ಗ್ಯಾರಂಟಿ ಜಾರಿ ಮಾಡಿದ್ದರಿಂದ ಈಗ ಸಾಲ ಮಾಡಿ ಸಂಬಳ ಕೊಡುವ ಪರಿಸ್ಥಿತಿ ಬಂದಿದೆ. ಗ್ಯಾರಂಟಿಗಳಿಂದ ಲೋಕಸಭೆ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಾಗಿಲ್ಲ. ಶಾಸಕರು ಅನುದಾನ ಯಾವಾಗ ಕೊಡುತ್ತೀರಿ ಎಂದು ಪ್ರಶ್ನಿಸುತ್ತಿದ್ದಾರೆ. ಪಾಪರ್ ಆಗಿರುವ ಸರ್ಕಾರ ಎಲ್ಲ ಕಡೆ ಬಿಲ್ ಪಾವತಿ ಬಾಕಿ ಇರಿಸಿಕೊಂಡಿದೆ ಎಂದು ದೂರಿದರು.
ಬಿಜೆಪಿ ಸರ್ಕಾರವಿದ್ದಾಗ ಶಾಸಕರು ಶಾಲೆ, ಆಸ್ಪತ್ರೆ, ನೀರಾವರಿ ಯೋಜನೆ ತಂದರು. ಕಾಂಗ್ರೆಸ್ನ ಶಾಸಕರು ಏನೂ ತಂದಿಲ್ಲವೆಂದು ಜನರೇ ಹೀಯಾಳಿಸುತ್ತಿದ್ದಾರೆ. ಅಭಿವೃದ್ಧಿ ಇಲ್ಲದೆ ಜನರು ಶಾಸಕರು ಹಾಗೂ ಸಚಿವರ ಮಾತಿಗೆ ವಿರುದ್ಧವಾಗಿ ಲೋಕಸಭೆ ಚುನಾವಣೆಯಲ್ಲಿ ಮತ ಚಲಾಯಿಸಿದ್ದಾರೆ ಎಂದು ಟೀಕಿಸಿದರು.
ಕಾಂಗ್ರೆಸ್ ಸರ್ಕಾರ ದಲಿತರ ಹಣ ಲೂಟಿ ಹೊಡೆದು, ಶೂನ್ಯ ಸಾಧನೆ ಮಾಡಿ, ಜನರ ಪಾಲಿಗೆ ಸತ್ತುಹೋಗಿದೆ. ಒಬ್ಬ ಸಚಿವರೂ ಮಳೆ ಹಾನಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿಲ್ಲ. ಲೋಕಸಭೆ ಚುನಾವಣೆಯಲ್ಲಿ ಸಚಿವರಿರುವ ಕಡೆ ಹಿನ್ನೆಡೆಯಾಗಿದ್ದು, ಸ್ಥಾನ ಕಳೆದುಕೊಳ್ಳುವ ಆತಂಕವಿದೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಹೋದರ ಡಿ.ಕೆ.ಸುರೇಶ್ ಕನಕಪುರದಲ್ಲಿ ಹೀನಾಯವಾಗಿ ಸೋತಿದ್ದಾರೆ. ರಾಜ್ಯದಲ್ಲಿ ಸರ್ಕಾರವಿದ್ದು, ಏಕೆ ಸೋತಿದ್ದೀರಿ ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ. ದಲಿತರ 187 ಕೋಟಿ ರೂ. ಲೂಟಿ ಮಾಡಿದ್ದರಿಂದಲೇ ಇವರು ಸೋತಿದ್ದಾರೆ ಎಂದು ಕಾಂಗ್ರೆಸ್ ಹೈಕಮಾಂಡ್ಗೆ ತಿಳಿದುಬಂದಿದೆ. ಲೋಕಸಭೆ ಚುನಾವಣೆಯ ಫಲಿತಾಂಶದಿಂದ ಸರ್ಕಾರ ಮೂಲೆ ಸೇರಿದೆ ಎಂದು ಹೇಳಿದರು.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…