ಬೆಳಗಾವಿ: 2023ರಂತೆ 2028ರಲ್ಲಿಯೂ ಜನಾರ್ಶೀವಾದದೊಂದಿಗೆ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದ್ದು, ಬಿಜೆಪಿಯವರು ಸದಾ ವಿರೋಧಪಕ್ಷದ ಸ್ಥಾನದಲ್ಲಿಯೇ ಇರಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನಸಭಾ ಕಲಾಪದಲ್ಲಿ, ವಿರೋಧಪಕ್ಷದವರ ಪ್ರಶ್ನೆಗೆ ಉತ್ತರಿಸುತ್ತಾ ಮಾತನಾಡಿದರು.
ಉರಿಯುವುದರ ಮೇಲೆ ಉಪ್ಪು ಹಾಕಬಾರದೆಂಬ ಎಂಬ ಗಾದೆ ಮಾತಿದೆ. ವಿರೋಧಪಕ್ಷದವರು ಇರುವುದೇ ಉರಿಯುವುದರ ಮೇಲೆ ಉಪ್ಪು ಸುರಿಯಲು ಎಂದರು. ವಿರೋಧಪಕ್ಷದವರು ಏನೇ ಪ್ರಚೋದನೆ ಮಾಡಿದರೂ, ನಮ್ಮ ಶಾಸಕರಾರೂ ಪ್ರಚೋದಿತರಾಗುವುದಿಲ್ಲ. ಐದು ವರ್ಷ ನಾನೇ ಮುಖ್ಯಮಂತ್ರಿಯಾಗಿರಬೇಕೆಂದು ಜನರು ಆಶೀರ್ವಾದ ಮಾಡಿ ಕಳಿಸಿದ್ದಾರೆ. 140 ಶಾಸಕರು ನಮ್ಮೊಂದಿಗಿದ್ದಾರೆ. ವಿರೋಧಪಕ್ಷದವರು ಇದರಲ್ಲಿ ಹುಳಿ ಹಿಂಡುವ ಅಗತ್ಯವಿಲ್ಲ ಎಂದರು.
ಇದನ್ನು ಓದಿ: ನ್ಯಾಷನಲ್ ಹೆರಾಲ್ಡ್ ಕೇಸ್ನಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೆ ಬಿಗ್ ರಿಲೀಫ್
2023ರಲ್ಲಿ ಜನರು ಆಶೀರ್ವಾದ ಮಾಡಿದಂತೆ 2028ರಲ್ಲಿಯೂ ಕಾಂಗ್ರೆಸ್ ಸರ್ಕಾರವೇ ಆಡಳಿತಕ್ಕೆ ಬರಲಿದೆ. ಜನರ ನಾಡಿಮಿಡಿತ ಸರ್ಕಾರಕ್ಕೆ ತಿಳಿದಿದೆ. ಕರ್ನಾಟಕದ ಜನ ಬಿಜೆಪಿಗೆ ಎಂದಿಗೂ ಅಧಿಕಾರಕ್ಕೆ ತರುವುದಿಲ್ಲ. ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಎರಡು ಬಾರಿ ಅಧಿಕಾರ ನಡೆಸಿದರೂ, ಒಂದು ಬಾರಿಯೂ ಜನರ ಆಶೀರ್ವಾದದಿಂದ ಅಧಿಕಾರಕ್ಕೆ ಬಂದಿಲ್ಲ. 2008, 2018ರಲ್ಲಿ ಆಪರೇಷನ್ ಕಮಲ ಮಾಡಿ, ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದಿದ್ದಾರೆ. ರಾಜ್ಯದ ಜನ ಬಿಜೆಪಿಗೆ ಆಶೀರ್ವಾದ ಮಾಡುವುದಿಲ್ಲ ಎಂಬುದು ಸ್ಪಷ್ಟವಾಗಿದೆ. 2019ರಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬಾರದೆಂಬ ಉದ್ದೇಶದಿಂದ ಜೆಡಿಎಸ್ ನೊಂದಿಗೆ ಸರ್ಕಾರ ರಚಿಸಲಾಯಿತು. ಆದರೆ ಬಿಜೆಪಿಯವರು, ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿರುವ ಉದ್ದೇಶದ ಬಗ್ಗೆ ಪ್ರಶ್ನಿಸಿದರು.
ಕಾಂಗ್ರೆಸ್ ಪಕ್ಷದಲ್ಲಿ ಹೈಕಮಾಂಡ್ ಮಾತು ಅಂತಿಮವಾಗಿರುತ್ತದೆ. ಆದರೆ ಬಿಜೆಪಿಯ ಅಧ್ಯಕ್ಷಗಿರಿ ಆಯ್ಕೆಯಲ್ಲಿ ಒಮ್ಮತ ಸಾಧಿಸಿಲ್ಲ. ಬಿಜೆಪಿಯವರಿಗೆ ಅಸೂಯೆ ಕಾಡುತ್ತಿದೆ. ಐದು ವರ್ಷ ಸುಭದ್ರ ಸರ್ಕಾರ ನೀಡುತ್ತೇವೆ ಹಾಗೂ ಮತ್ತೆ ಚುನಾವಣೆ ಎದುರಿಸಿ 2028ರಲ್ಲಿಯೂ ಕಾಂಗ್ರೆಸ್ ಸರ್ಕಾರವೇ ಅಧಿಕಾರಕ್ಕೆ ಬರಲಿದೆ. 2013ರಲ್ಲಿ 2023ರಲ್ಲಿಯೂ ಕಾಂಗ್ರೆಸ್ಗೆ ಜನರು ಆಶೀರ್ವಾದ ಮಾಡಿದ್ದಾರೆ, ಆದರೆ ಬಿಜೆಪಿಯವರಿಗೆ ಒಮ್ಮೆಯೂ ಜನಾದೇಶ ದೊರೆತಿಲ್ಲ ಹಾಗೂ ಭವಿಷ್ಯದಲ್ಲಿಯೂ ದೊರೆಯುವುದಿಲ್ಲ. ಬಿಜೆಪಿಯವರು ಸದಾ ವಿರೋಧಪಕ್ಷದ ಸ್ಥಾನದಲ್ಲಿಯೇ ಇರಲಿದೆ. “ನಾನು’ ಹೋದರೆ ಹೋದೇನು” ಅಂತ ಕನಕದಾಸರು ಹೇಳಿದ್ದರು. “ಇದು ನನ್ನ ಸರ್ಕಾರವಲ್ಲ, ನಮ್ಮ ಸರ್ಕಾರ”. ಈಗಲೂ ನಾನೇ ಮುಖ್ಯಮಂತ್ರಿ. ಹೈಕಮಾಂಡ್ ಹೇಳುವ ತನಕವೂ ನಾನೇ ಮುಖ್ಯಮಂತ್ರಿ ಎಂದು ತಿಳಿಸಿದರು.
೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…
ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…
ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…
‘ಸಪೋರ್ಟ್ ಅವರ್ ಹೀರೋಸ್’ ಸರ್ಕಾರೇತರ ಸಂಸ್ಥೆ ಸ್ಥಾಪನೆ ೩೬ವರ್ಷ ಪ್ರಾಯದ ಗೌರವ್ ಶುಕ್ಲಾ(ಕುಳಿತವರಲ್ಲಿ ಎಡ ಬದಿ)ರ ತಂದೆ ೨೮ ವರ್ಷಗಳ…
ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಮಲ್ಲಳ್ಳಿ ಜಲಪಾತದಲ್ಲಿ ಬಹುನಿರೀಕ್ಷಿತ ರೋಪ್ವೇ ಯೋಜನೆಗೆ ವೇಗ ದೊರೆತಿದೆ.…
ಕೆ.ಬಿ.ರಮೇಶನಾಯಕ ಮೈಸೂರು: ಹಲವು ರೋಗಗಳಿಗೆ ರಾಮಬಾಣವಾದ ಹಾಗೂ ಆರೋಗ್ಯಕ್ಕೆ ಹಿತಕರ ಎನ್ನಲಾಗಿರುವ ಮೀನು ಆಹಾರವನ್ನು ಜನಸಾಮಾನ್ಯರಿಗೆ ಸುಲಭವಾಗಿ ದೊರೆಯುವಂತೆ ಮಾಡಲು…