ರಾಜ್ಯ

2023ರಂತೆ 2028ರಲ್ಲಿಯೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: 2023ರಂತೆ 2028ರಲ್ಲಿಯೂ ಜನಾರ್ಶೀವಾದದೊಂದಿಗೆ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದ್ದು, ಬಿಜೆಪಿಯವರು ಸದಾ ವಿರೋಧಪಕ್ಷದ ಸ್ಥಾನದಲ್ಲಿಯೇ ಇರಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನಸಭಾ ಕಲಾಪದಲ್ಲಿ, ವಿರೋಧಪಕ್ಷದವರ ಪ್ರಶ್ನೆಗೆ ಉತ್ತರಿಸುತ್ತಾ ಮಾತನಾಡಿದರು.

ಉರಿಯುವುದರ ಮೇಲೆ ಉಪ್ಪು ಹಾಕಬಾರದೆಂಬ ಎಂಬ ಗಾದೆ ಮಾತಿದೆ. ವಿರೋಧಪಕ್ಷದವರು ಇರುವುದೇ ಉರಿಯುವುದರ ಮೇಲೆ ಉಪ್ಪು ಸುರಿಯಲು ಎಂದರು. ವಿರೋಧಪಕ್ಷದವರು ಏನೇ ಪ್ರಚೋದನೆ ಮಾಡಿದರೂ, ನಮ್ಮ ಶಾಸಕರಾರೂ ಪ್ರಚೋದಿತರಾಗುವುದಿಲ್ಲ. ಐದು ವರ್ಷ ನಾನೇ ಮುಖ್ಯಮಂತ್ರಿಯಾಗಿರಬೇಕೆಂದು ಜನರು ಆಶೀರ್ವಾದ ಮಾಡಿ ಕಳಿಸಿದ್ದಾರೆ. 140 ಶಾಸಕರು ನಮ್ಮೊಂದಿಗಿದ್ದಾರೆ. ವಿರೋಧಪಕ್ಷದವರು ಇದರಲ್ಲಿ ಹುಳಿ ಹಿಂಡುವ ಅಗತ್ಯವಿಲ್ಲ ಎಂದರು.

ಇದನ್ನು ಓದಿ: ನ್ಯಾಷನಲ್‌ ಹೆರಾಲ್ಡ್‌ ಕೇಸ್‌ನಲ್ಲಿ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿಗೆ ಬಿಗ್‌ ರಿಲೀಫ್‌

2023ರಲ್ಲಿ ಜನರು ಆಶೀರ್ವಾದ ಮಾಡಿದಂತೆ 2028ರಲ್ಲಿಯೂ ಕಾಂಗ್ರೆಸ್ ಸರ್ಕಾರವೇ ಆಡಳಿತಕ್ಕೆ ಬರಲಿದೆ. ಜನರ ನಾಡಿಮಿಡಿತ ಸರ್ಕಾರಕ್ಕೆ ತಿಳಿದಿದೆ. ಕರ್ನಾಟಕದ ಜನ ಬಿಜೆಪಿಗೆ ಎಂದಿಗೂ ಅಧಿಕಾರಕ್ಕೆ ತರುವುದಿಲ್ಲ. ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಎರಡು ಬಾರಿ ಅಧಿಕಾರ ನಡೆಸಿದರೂ, ಒಂದು ಬಾರಿಯೂ ಜನರ ಆಶೀರ್ವಾದದಿಂದ ಅಧಿಕಾರಕ್ಕೆ ಬಂದಿಲ್ಲ. 2008, 2018ರಲ್ಲಿ ಆಪರೇಷನ್ ಕಮಲ ಮಾಡಿ, ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದಿದ್ದಾರೆ. ರಾಜ್ಯದ ಜನ ಬಿಜೆಪಿಗೆ ಆಶೀರ್ವಾದ ಮಾಡುವುದಿಲ್ಲ ಎಂಬುದು ಸ್ಪಷ್ಟವಾಗಿದೆ. 2019ರಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬಾರದೆಂಬ ಉದ್ದೇಶದಿಂದ ಜೆಡಿಎಸ್ ನೊಂದಿಗೆ ಸರ್ಕಾರ ರಚಿಸಲಾಯಿತು. ಆದರೆ ಬಿಜೆಪಿಯವರು, ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿರುವ ಉದ್ದೇಶದ ಬಗ್ಗೆ ಪ್ರಶ್ನಿಸಿದರು.

ಕಾಂಗ್ರೆಸ್ ಪಕ್ಷದಲ್ಲಿ ಹೈಕಮಾಂಡ್ ಮಾತು ಅಂತಿಮವಾಗಿರುತ್ತದೆ. ಆದರೆ ಬಿಜೆಪಿಯ ಅಧ್ಯಕ್ಷಗಿರಿ ಆಯ್ಕೆಯಲ್ಲಿ ಒಮ್ಮತ ಸಾಧಿಸಿಲ್ಲ. ಬಿಜೆಪಿಯವರಿಗೆ ಅಸೂಯೆ ಕಾಡುತ್ತಿದೆ. ಐದು ವರ್ಷ ಸುಭದ್ರ ಸರ್ಕಾರ ನೀಡುತ್ತೇವೆ ಹಾಗೂ ಮತ್ತೆ ಚುನಾವಣೆ ಎದುರಿಸಿ 2028ರಲ್ಲಿಯೂ ಕಾಂಗ್ರೆಸ್ ಸರ್ಕಾರವೇ ಅಧಿಕಾರಕ್ಕೆ ಬರಲಿದೆ. 2013ರಲ್ಲಿ 2023ರಲ್ಲಿಯೂ ಕಾಂಗ್ರೆಸ್‌ಗೆ ಜನರು ಆಶೀರ್ವಾದ ಮಾಡಿದ್ದಾರೆ, ಆದರೆ ಬಿಜೆಪಿಯವರಿಗೆ ಒಮ್ಮೆಯೂ ಜನಾದೇಶ ದೊರೆತಿಲ್ಲ ಹಾಗೂ ಭವಿಷ್ಯದಲ್ಲಿಯೂ ದೊರೆಯುವುದಿಲ್ಲ. ಬಿಜೆಪಿಯವರು ಸದಾ ವಿರೋಧಪಕ್ಷದ ಸ್ಥಾನದಲ್ಲಿಯೇ ಇರಲಿದೆ. “ನಾನು’ ಹೋದರೆ ಹೋದೇನು” ಅಂತ ಕನಕದಾಸರು ಹೇಳಿದ್ದರು. “ಇದು ನನ್ನ ಸರ್ಕಾರವಲ್ಲ, ನಮ್ಮ ಸರ್ಕಾರ”. ಈಗಲೂ ನಾನೇ ಮುಖ್ಯಮಂತ್ರಿ. ಹೈಕಮಾಂಡ್ ಹೇಳುವ ತನಕವೂ ನಾನೇ ಮುಖ್ಯಮಂತ್ರಿ ಎಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

9 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

12 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

12 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

12 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

13 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

13 hours ago