ಬೆಂಗಳೂರು : ಬಡವರ ಬದುಕನ್ನು ಬಂಗಾರಗೊಳಿಸುತ್ತೇನೆಂದು ಸುಳ್ಳು ಹೇಳಿ ಅಧಿಕಾರಕ್ಕೇರಿದ ಕಾಂಗ್ರೆಸ್, ಬಡವರ ಬದುಕನ್ನು ಅಕ್ಷರಶಃ ಬೀದಿಗೆ ತಂದು ನಿಲ್ಲಿಸಿದ್ದೇ ಕಾಂಗ್ರೆಸ್ನ ಸಾಧನೆ ಎಂದು ಬಿಜೆಪಿ ಟೀಕಾಪ್ರಹಾರವನ್ನು ಮುಂದುವರೆಸಿದೆ.
ಈ ಕುರಿತು ಸಾಮಾಜಿ ಜಾಲತಾಣದಲ್ಲಿ ಸಾಲು ಸಾಲು ಪೋಸ್ಟ್ ಮಾಡಿರುವ ಬಿಜೆಪಿ, ದಕ್ಷಿಣ ಏಷ್ಯಾದಲ್ಲಿಯೇ ಅತ್ಯಂತ ದೊಡ್ಡ ಕೈಗಾರಿಕಾ ಪ್ರದೇಶವಾದ ಪೀಣ್ಯ ಕೈಗಾರಿಕಾ ಪ್ರದೇಶಕ್ಕೆ ಸರ್ಕಾರದ ನಾಲ್ಕು ತಿಂಗಳ ಆಡಳಿತ ಮರಣಶಾಸನವಾಗಿದೆ ಎಂದು ವಾಗ್ದಾಳಿ ನಡೆಸಿದೆ.
ಕೈ ಸರ್ಕಾರ ಹೇರುತ್ತಿರುವ ನಿರಂತರ ಲೋಡ್ ಶೆಡ್ಡಿಂಗ್ ಹಾಗೂ ಅವೈಜ್ಞಾನಿಕ ದರ ಏರಿಕೆಯಿಂದ ಪೀಣ್ಯ ಕೈಗಾರಿಕಾ ಪ್ರದೇಶದ ಕೈಗಾರಿಕೆಗಳಿಗೆ ಶೇ.30ಕ್ಕಿಂತಲೂ ಅಕ ನಷ್ಟವಾಗುತ್ತಿದ್ದು, ವಿಪರೀತ ಉದ್ಯೋಗ ಕಡಿತಕ್ಕೆ ಮುಂದಾಗಿದ್ದು ಮಾತ್ರವಲ್ಲದೆ, ರಾಜ್ಯದಿಂದಲೇ ವಲಸೆ ಹೋಗುವತ್ತ ಚಿಂತಿಸಿವೆ ಎಂದು ಆರೋಪಿಸಿದೆ.
ಕಾಂಗ್ರೆಸ್ ಬಂದಿದೆ ಆದರೆ ಜನರಿಗೆ ಮಾತ್ರ ಏನೂ ಬರುತ್ತಿಲ್ಲ, ಸಿಗುತ್ತಿಲ್ಲ, ಕೊಡುತ್ತಿಲ್ಲ, ತಲುಪುತ್ತಲೂ ಇಲ್ಲ, ಗೃಹ ಜ್ಯೋತಿ ಬರಲಿದೆ ಅಂದರು, ಈಗ ವಿದ್ಯುತ್ತೇ ಕೊಡುತ್ತಿಲ್ಲ.,ಗೃಹ ಲಕ್ಷ್ಮಿ ಅಂದರು, ಎರಡನೇ ತಿಂಗಳಿಂದ ಹಣವನ್ನೇ ಹಾಕಿಲ್ಲ..!
ಅನ್ನಭಾಗ್ಯ ಅಂದರು, ಮೋದಿ ಸರ್ಕಾರದ ಅಕ್ಕಿನೂ ಕಾಂಗ್ರೆಸ್ಸಿಗರೇ ತಿಂದರು. ಉಚಿತ ಬಸ್, ಶಕ್ತಿ ಯೋಜನೆ ಅಂದರು, ಈಗ ಬಸ್ಗಳನ್ನೇ ಬಿಡುತ್ತಿಲ್ಲ, ಯುವ ನಿಧಿ ಅಂದರು, ಅದು ಜನರಿಗೆ ಬರಲೇ ಇಲ್ಲ.
ಅಂಗನವಾಡಿ ಕಾರ್ಯಕರ್ತೆಯರಿಗೆ 10 ಸಾವಿರ ಅಂದರು, ಈಗ ಸಂಬಳವನ್ನೇ ಕೊಡುತ್ತಿಲ್ಲ, ಇಂದಿರಾ ಕ್ಯಾಂಟೀನ್ ಸಂಖ್ಯೆ ಹೆಚ್ಚಳ ಅಂದರು ಈಗ ಇದ್ದವೂ ಬಂದ್ ಆಗುತ್ತಿವೆ, ಅಕ್ಕಿ ಇಲ್ಲ ಜನರಿಗೆ ದುಡ್ಡು ತಿನ್ನಿ ಅಂದರು, ಈಗ ದುಡ್ಡನ್ನೂ ಕೊಡುತ್ತಿಲ್ಲ ಎಂದು ಟೀಕೆಗಳ ಸುರಿಮಳೆ ಗೈದಿದೆ.
ಮೈಸೂರು: ಕಾನೂನು ಬಾಹಿರವಾಗಿ ಸಿ.ಎ ನಿವೇಶನ ಪಡೆದಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮುಖಂಡ ರಘು ಕೌಟಿಲ್ಯ ವಿರುದ್ಧ ನಾಗೇಂದ್ರ ಎಂಬುವವರು…
ನಂಜನಗೂಡು: ವರುಣ ಕ್ಷೇತ್ರ ಹಾಗೂ ನಂಜನಗೂಡು ವಿಧಾನಸಭಾ ಕ್ಷೇತ್ರವನ್ನು ಸಂಪರ್ಕಿಸಲು ಕಪಿಲಾ ನದಿಗೆ ಮತ್ತೊಂದು ಸೇತುವೆ ಮಂಜೂರಾಗಿದೆ. ತಾಲ್ಲೂಕಿನ ನಂಜನಗೂಡು-ಹುಲ್ಲಹಳ್ಳಿ…
ಮೈಸೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ಭಾರೀ ಸಂಕಷ್ಟ ಎದುರಾಗಿದೆ ಎಂಬ ಮಾಹಿತಿ…
ಮೈಸೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಮೆಟ್ರಿಕ್ ನಂತರದ ಕೋರ್ಸ್ಗಳಾದ ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ ಮತ್ತು ವೃತ್ತಿಪರ…
ಅಮಿತ್ ಶಾ, ಅಜಿತ್ ದೋವಲ್ ಮೇಲೆಯೂ ಆರೋಪ ಡಿ.ವಿ.ರಾಜಶೇಖರ ಖಾಲಿಸ್ತಾನ್ ಉಗ್ರವಾದಿ ನಾಯಕ ಹರದೀಪ್ ಸಿಂಗ್ ನಿಜ್ಜರ್ ಹತ್ಯೆಯ ನಂತರದ…
ಮೂಲ : ಪೂಜ ಹರೀಶ್, ಮೈಸೂರು ಅನುವಾದ: ಎನ್.ನರಸಿಂಹಸ್ವಾಮಿ, ನಾಗಮಂಗಲ ಜೀವನ ಒಂದು ಸೈಕಲ್ ಸವಾರಿಯಂತೆ, ಆಯ ತಪ್ಪದಿರಲು ಮುಂದೆ…