ರಾಜ್ಯ

ಬಡವರ ಬದುಕನ್ನು ಬೀದಿಗೆ ತಂದು ನಿಲ್ಲಿಸಿದ್ದೇ ಕಾಂಗ್ರೆಸ್‍ನ ಸಾಧನೆ : ಬಿಜೆಪಿ

ಬೆಂಗಳೂರು : ಬಡವರ ಬದುಕನ್ನು ಬಂಗಾರಗೊಳಿಸುತ್ತೇನೆಂದು ಸುಳ್ಳು ಹೇಳಿ ಅಧಿಕಾರಕ್ಕೇರಿದ ಕಾಂಗ್ರೆಸ್, ಬಡವರ ಬದುಕನ್ನು ಅಕ್ಷರಶಃ ಬೀದಿಗೆ ತಂದು ನಿಲ್ಲಿಸಿದ್ದೇ ಕಾಂಗ್ರೆಸ್‍ನ ಸಾಧನೆ ಎಂದು ಬಿಜೆಪಿ ಟೀಕಾಪ್ರಹಾರವನ್ನು ಮುಂದುವರೆಸಿದೆ.

ಈ ಕುರಿತು ಸಾಮಾಜಿ ಜಾಲತಾಣದಲ್ಲಿ ಸಾಲು ಸಾಲು ಪೋಸ್ಟ್ ಮಾಡಿರುವ ಬಿಜೆಪಿ, ದಕ್ಷಿಣ ಏಷ್ಯಾದಲ್ಲಿಯೇ ಅತ್ಯಂತ ದೊಡ್ಡ ಕೈಗಾರಿಕಾ ಪ್ರದೇಶವಾದ ಪೀಣ್ಯ ಕೈಗಾರಿಕಾ ಪ್ರದೇಶಕ್ಕೆ ಸರ್ಕಾರದ ನಾಲ್ಕು ತಿಂಗಳ ಆಡಳಿತ ಮರಣಶಾಸನವಾಗಿದೆ ಎಂದು ವಾಗ್ದಾಳಿ ನಡೆಸಿದೆ.

ಕೈ ಸರ್ಕಾರ ಹೇರುತ್ತಿರುವ ನಿರಂತರ ಲೋಡ್ ಶೆಡ್ಡಿಂಗ್ ಹಾಗೂ ಅವೈಜ್ಞಾನಿಕ ದರ ಏರಿಕೆಯಿಂದ ಪೀಣ್ಯ ಕೈಗಾರಿಕಾ ಪ್ರದೇಶದ ಕೈಗಾರಿಕೆಗಳಿಗೆ ಶೇ.30ಕ್ಕಿಂತಲೂ ಅಕ ನಷ್ಟವಾಗುತ್ತಿದ್ದು, ವಿಪರೀತ ಉದ್ಯೋಗ ಕಡಿತಕ್ಕೆ ಮುಂದಾಗಿದ್ದು ಮಾತ್ರವಲ್ಲದೆ, ರಾಜ್ಯದಿಂದಲೇ ವಲಸೆ ಹೋಗುವತ್ತ ಚಿಂತಿಸಿವೆ ಎಂದು ಆರೋಪಿಸಿದೆ.
ಕಾಂಗ್ರೆಸ್ ಬಂದಿದೆ ಆದರೆ ಜನರಿಗೆ ಮಾತ್ರ ಏನೂ ಬರುತ್ತಿಲ್ಲ, ಸಿಗುತ್ತಿಲ್ಲ, ಕೊಡುತ್ತಿಲ್ಲ, ತಲುಪುತ್ತಲೂ ಇಲ್ಲ, ಗೃಹ ಜ್ಯೋತಿ ಬರಲಿದೆ ಅಂದರು, ಈಗ ವಿದ್ಯುತ್ತೇ ಕೊಡುತ್ತಿಲ್ಲ.,ಗೃಹ ಲಕ್ಷ್ಮಿ ಅಂದರು, ಎರಡನೇ ತಿಂಗಳಿಂದ ಹಣವನ್ನೇ ಹಾಕಿಲ್ಲ..!

ಅನ್ನಭಾಗ್ಯ ಅಂದರು, ಮೋದಿ ಸರ್ಕಾರದ ಅಕ್ಕಿನೂ ಕಾಂಗ್ರೆಸ್ಸಿಗರೇ ತಿಂದರು. ಉಚಿತ ಬಸ್, ಶಕ್ತಿ ಯೋಜನೆ ಅಂದರು, ಈಗ ಬಸ್‍ಗಳನ್ನೇ ಬಿಡುತ್ತಿಲ್ಲ, ಯುವ ನಿಧಿ ಅಂದರು, ಅದು ಜನರಿಗೆ ಬರಲೇ ಇಲ್ಲ.
ಅಂಗನವಾಡಿ ಕಾರ್ಯಕರ್ತೆಯರಿಗೆ 10 ಸಾವಿರ ಅಂದರು, ಈಗ ಸಂಬಳವನ್ನೇ ಕೊಡುತ್ತಿಲ್ಲ, ಇಂದಿರಾ ಕ್ಯಾಂಟೀನ್ ಸಂಖ್ಯೆ ಹೆಚ್ಚಳ ಅಂದರು ಈಗ ಇದ್ದವೂ ಬಂದ್ ಆಗುತ್ತಿವೆ, ಅಕ್ಕಿ ಇಲ್ಲ ಜನರಿಗೆ ದುಡ್ಡು ತಿನ್ನಿ ಅಂದರು, ಈಗ ದುಡ್ಡನ್ನೂ ಕೊಡುತ್ತಿಲ್ಲ ಎಂದು ಟೀಕೆಗಳ ಸುರಿಮಳೆ ಗೈದಿದೆ.

lokesh

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

12 hours ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

14 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

14 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

19 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

23 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

24 hours ago