ಬೆಂಗಳೂರು : ಬಡವರ ಬದುಕನ್ನು ಬಂಗಾರಗೊಳಿಸುತ್ತೇನೆಂದು ಸುಳ್ಳು ಹೇಳಿ ಅಧಿಕಾರಕ್ಕೇರಿದ ಕಾಂಗ್ರೆಸ್, ಬಡವರ ಬದುಕನ್ನು ಅಕ್ಷರಶಃ ಬೀದಿಗೆ ತಂದು ನಿಲ್ಲಿಸಿದ್ದೇ ಕಾಂಗ್ರೆಸ್ನ ಸಾಧನೆ ಎಂದು ಬಿಜೆಪಿ ಟೀಕಾಪ್ರಹಾರವನ್ನು ಮುಂದುವರೆಸಿದೆ.
ಈ ಕುರಿತು ಸಾಮಾಜಿ ಜಾಲತಾಣದಲ್ಲಿ ಸಾಲು ಸಾಲು ಪೋಸ್ಟ್ ಮಾಡಿರುವ ಬಿಜೆಪಿ, ದಕ್ಷಿಣ ಏಷ್ಯಾದಲ್ಲಿಯೇ ಅತ್ಯಂತ ದೊಡ್ಡ ಕೈಗಾರಿಕಾ ಪ್ರದೇಶವಾದ ಪೀಣ್ಯ ಕೈಗಾರಿಕಾ ಪ್ರದೇಶಕ್ಕೆ ಸರ್ಕಾರದ ನಾಲ್ಕು ತಿಂಗಳ ಆಡಳಿತ ಮರಣಶಾಸನವಾಗಿದೆ ಎಂದು ವಾಗ್ದಾಳಿ ನಡೆಸಿದೆ.
ಕೈ ಸರ್ಕಾರ ಹೇರುತ್ತಿರುವ ನಿರಂತರ ಲೋಡ್ ಶೆಡ್ಡಿಂಗ್ ಹಾಗೂ ಅವೈಜ್ಞಾನಿಕ ದರ ಏರಿಕೆಯಿಂದ ಪೀಣ್ಯ ಕೈಗಾರಿಕಾ ಪ್ರದೇಶದ ಕೈಗಾರಿಕೆಗಳಿಗೆ ಶೇ.30ಕ್ಕಿಂತಲೂ ಅಕ ನಷ್ಟವಾಗುತ್ತಿದ್ದು, ವಿಪರೀತ ಉದ್ಯೋಗ ಕಡಿತಕ್ಕೆ ಮುಂದಾಗಿದ್ದು ಮಾತ್ರವಲ್ಲದೆ, ರಾಜ್ಯದಿಂದಲೇ ವಲಸೆ ಹೋಗುವತ್ತ ಚಿಂತಿಸಿವೆ ಎಂದು ಆರೋಪಿಸಿದೆ.
ಕಾಂಗ್ರೆಸ್ ಬಂದಿದೆ ಆದರೆ ಜನರಿಗೆ ಮಾತ್ರ ಏನೂ ಬರುತ್ತಿಲ್ಲ, ಸಿಗುತ್ತಿಲ್ಲ, ಕೊಡುತ್ತಿಲ್ಲ, ತಲುಪುತ್ತಲೂ ಇಲ್ಲ, ಗೃಹ ಜ್ಯೋತಿ ಬರಲಿದೆ ಅಂದರು, ಈಗ ವಿದ್ಯುತ್ತೇ ಕೊಡುತ್ತಿಲ್ಲ.,ಗೃಹ ಲಕ್ಷ್ಮಿ ಅಂದರು, ಎರಡನೇ ತಿಂಗಳಿಂದ ಹಣವನ್ನೇ ಹಾಕಿಲ್ಲ..!
ಅನ್ನಭಾಗ್ಯ ಅಂದರು, ಮೋದಿ ಸರ್ಕಾರದ ಅಕ್ಕಿನೂ ಕಾಂಗ್ರೆಸ್ಸಿಗರೇ ತಿಂದರು. ಉಚಿತ ಬಸ್, ಶಕ್ತಿ ಯೋಜನೆ ಅಂದರು, ಈಗ ಬಸ್ಗಳನ್ನೇ ಬಿಡುತ್ತಿಲ್ಲ, ಯುವ ನಿಧಿ ಅಂದರು, ಅದು ಜನರಿಗೆ ಬರಲೇ ಇಲ್ಲ.
ಅಂಗನವಾಡಿ ಕಾರ್ಯಕರ್ತೆಯರಿಗೆ 10 ಸಾವಿರ ಅಂದರು, ಈಗ ಸಂಬಳವನ್ನೇ ಕೊಡುತ್ತಿಲ್ಲ, ಇಂದಿರಾ ಕ್ಯಾಂಟೀನ್ ಸಂಖ್ಯೆ ಹೆಚ್ಚಳ ಅಂದರು ಈಗ ಇದ್ದವೂ ಬಂದ್ ಆಗುತ್ತಿವೆ, ಅಕ್ಕಿ ಇಲ್ಲ ಜನರಿಗೆ ದುಡ್ಡು ತಿನ್ನಿ ಅಂದರು, ಈಗ ದುಡ್ಡನ್ನೂ ಕೊಡುತ್ತಿಲ್ಲ ಎಂದು ಟೀಕೆಗಳ ಸುರಿಮಳೆ ಗೈದಿದೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…