ಬೆಂಗಳೂರು : ಬಡವರ ಬದುಕನ್ನು ಬಂಗಾರಗೊಳಿಸುತ್ತೇನೆಂದು ಸುಳ್ಳು ಹೇಳಿ ಅಧಿಕಾರಕ್ಕೇರಿದ ಕಾಂಗ್ರೆಸ್, ಬಡವರ ಬದುಕನ್ನು ಅಕ್ಷರಶಃ ಬೀದಿಗೆ ತಂದು ನಿಲ್ಲಿಸಿದ್ದೇ ಕಾಂಗ್ರೆಸ್ನ ಸಾಧನೆ ಎಂದು ಬಿಜೆಪಿ ಟೀಕಾಪ್ರಹಾರವನ್ನು ಮುಂದುವರೆಸಿದೆ.
ಈ ಕುರಿತು ಸಾಮಾಜಿ ಜಾಲತಾಣದಲ್ಲಿ ಸಾಲು ಸಾಲು ಪೋಸ್ಟ್ ಮಾಡಿರುವ ಬಿಜೆಪಿ, ದಕ್ಷಿಣ ಏಷ್ಯಾದಲ್ಲಿಯೇ ಅತ್ಯಂತ ದೊಡ್ಡ ಕೈಗಾರಿಕಾ ಪ್ರದೇಶವಾದ ಪೀಣ್ಯ ಕೈಗಾರಿಕಾ ಪ್ರದೇಶಕ್ಕೆ ಸರ್ಕಾರದ ನಾಲ್ಕು ತಿಂಗಳ ಆಡಳಿತ ಮರಣಶಾಸನವಾಗಿದೆ ಎಂದು ವಾಗ್ದಾಳಿ ನಡೆಸಿದೆ.
ಕೈ ಸರ್ಕಾರ ಹೇರುತ್ತಿರುವ ನಿರಂತರ ಲೋಡ್ ಶೆಡ್ಡಿಂಗ್ ಹಾಗೂ ಅವೈಜ್ಞಾನಿಕ ದರ ಏರಿಕೆಯಿಂದ ಪೀಣ್ಯ ಕೈಗಾರಿಕಾ ಪ್ರದೇಶದ ಕೈಗಾರಿಕೆಗಳಿಗೆ ಶೇ.30ಕ್ಕಿಂತಲೂ ಅಕ ನಷ್ಟವಾಗುತ್ತಿದ್ದು, ವಿಪರೀತ ಉದ್ಯೋಗ ಕಡಿತಕ್ಕೆ ಮುಂದಾಗಿದ್ದು ಮಾತ್ರವಲ್ಲದೆ, ರಾಜ್ಯದಿಂದಲೇ ವಲಸೆ ಹೋಗುವತ್ತ ಚಿಂತಿಸಿವೆ ಎಂದು ಆರೋಪಿಸಿದೆ.
ಕಾಂಗ್ರೆಸ್ ಬಂದಿದೆ ಆದರೆ ಜನರಿಗೆ ಮಾತ್ರ ಏನೂ ಬರುತ್ತಿಲ್ಲ, ಸಿಗುತ್ತಿಲ್ಲ, ಕೊಡುತ್ತಿಲ್ಲ, ತಲುಪುತ್ತಲೂ ಇಲ್ಲ, ಗೃಹ ಜ್ಯೋತಿ ಬರಲಿದೆ ಅಂದರು, ಈಗ ವಿದ್ಯುತ್ತೇ ಕೊಡುತ್ತಿಲ್ಲ.,ಗೃಹ ಲಕ್ಷ್ಮಿ ಅಂದರು, ಎರಡನೇ ತಿಂಗಳಿಂದ ಹಣವನ್ನೇ ಹಾಕಿಲ್ಲ..!
ಅನ್ನಭಾಗ್ಯ ಅಂದರು, ಮೋದಿ ಸರ್ಕಾರದ ಅಕ್ಕಿನೂ ಕಾಂಗ್ರೆಸ್ಸಿಗರೇ ತಿಂದರು. ಉಚಿತ ಬಸ್, ಶಕ್ತಿ ಯೋಜನೆ ಅಂದರು, ಈಗ ಬಸ್ಗಳನ್ನೇ ಬಿಡುತ್ತಿಲ್ಲ, ಯುವ ನಿಧಿ ಅಂದರು, ಅದು ಜನರಿಗೆ ಬರಲೇ ಇಲ್ಲ.
ಅಂಗನವಾಡಿ ಕಾರ್ಯಕರ್ತೆಯರಿಗೆ 10 ಸಾವಿರ ಅಂದರು, ಈಗ ಸಂಬಳವನ್ನೇ ಕೊಡುತ್ತಿಲ್ಲ, ಇಂದಿರಾ ಕ್ಯಾಂಟೀನ್ ಸಂಖ್ಯೆ ಹೆಚ್ಚಳ ಅಂದರು ಈಗ ಇದ್ದವೂ ಬಂದ್ ಆಗುತ್ತಿವೆ, ಅಕ್ಕಿ ಇಲ್ಲ ಜನರಿಗೆ ದುಡ್ಡು ತಿನ್ನಿ ಅಂದರು, ಈಗ ದುಡ್ಡನ್ನೂ ಕೊಡುತ್ತಿಲ್ಲ ಎಂದು ಟೀಕೆಗಳ ಸುರಿಮಳೆ ಗೈದಿದೆ.
ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ ಸಿದ್ದರಾಮಯ್ಯ ಅವರು ತಮ್ಮ ವಿದಾಯದ ಕೊನೇ ಕ್ಷಣದಲ್ಲೂ ಮಹತ್ವದ ಕ್ರಮ ಕೈಗೊಂಡಿದ್ದು,…
ಬೆಂಗಳೂರು : ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸಿಎಂ…
ಬೆಂಗಳೂರು : ಹೈಕಮಾಂಡ್ ಸೂಚನೆಯಂತೆ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ…
ಕೊಪ್ಪಳ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ…
ಮೈಸೂರು: ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್ ನಿರ್ಧಾರ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ…
ಬೆಂಗಳೂರು: ಬ್ರೇಕ್ಫಾಸ್ಟ್ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ…