ಬೆಂಗಳೂರು: ಎಲ್ಲಾ ನ್ಯಾಯಾಲಯಗಳಿಗಿಂತ ಅತ್ಯುನ್ನತವಾದ ನ್ಯಾಯಾಲಯ ಆತ್ಮಸಾಕ್ಷಿ ಎಂಬ ಗಾಂಧೀಜಿ ಅವರ ಮಾತನ್ನು ಸಿಎಂ ಸಿದ್ದರಾಮಯ್ಯ ಸ್ಮರಿಸಿದರು.
ಗಾಂಧೀಜಿ ದಿನಾಚರಣೆ ಪ್ರಯುಕ್ತ ಇಂದು(ಅ.2) ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಗಾಂಧಿ ಭವನದಲ್ಲಿ ಆಯೋಜಿಸಿದ್ದ ಗಾಂಧೀಜಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈಗಿರುವ ನ್ಯಾಯಾಲಯಗಳಿಂದ ಎಲ್ಲರಿಗೂ ನ್ಯಾಯ ಸಿಗದೇ ಹೋಗಬಹುದು. ಆದರೆ ನಾವು ನಮ್ಮ ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಳ್ಳಬೇಕು. ಯಾರಾದರೂ ಹೊಗಳಲಿ, ತೆಗಳಲಿ ಅಥವಾ ಟೀಕಿಸಲಿ, ಇಲ್ಲವಾ ಬಿಡಲಿ, ಉಳಿದವರು ಗುರುತಿಸಲಿ, ಬಿಡಲಿ ನಾವು ಪ್ರತಿಯೊಬ್ಬರೂ ನಮ್ಮ ಆತ್ಮಾಸಾಕ್ಷಿಯ ನ್ಯಾಯಾಲಯದಲ್ಲಿ ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಳ್ಳಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರ ಆಶಯಗಳು ಕೇವಲ ಭಾಷಣದಿಂದ ಈಡೇರುವುದಿಲ್ಲ. ಈ ಇಬ್ಬರ ಜೀವನದ ಮೌಲ್ಯ ಹಾಗೂ ಸಂದೇಶಗಳನ್ನು ಜನ ಮಾನಸದಲ್ಲಿ ವಿಸ್ತರಿಸುತ್ತಲೇ ಸರ್ಕಾರ ಸಮ ಸಮಾಜ ನಿರ್ಮಿಸಲು ಪೂರಕವಾದ ಕಾರ್ಯಕ್ರಮಗಳನ್ನು ರೂಪಿಸಬೇಕಾಗುತ್ತದೆ. ನಾನು ಹಾಗೂ ನಮ್ಮ ಸರ್ಕಾರ ಇವರಿಬ್ಬರ ದಿಕ್ಕಿನಲ್ಲಿ ಸಾಗುತ್ತವೆ ಎಂದು ಹೇಳಿದರು.
ಗಾಂಧೀಜಿ ಅವರ ಈ ಹೋರಾಟದಿಂದಲೇ ನಾವು ಇಂದು ಸ್ವಾತಂತ್ರ್ಯವಾದ ಗಾಳಿ ಸೇವಿಸುತ್ತಿದ್ದೇವೆ. ಗಾಂಧಿ ಇಡೀ ಪ್ರಪಂಚದ ನಾಯಕ ಎನ್ನುವ ಗೌರವ ಸಿಕ್ಕಿರುವ ಭಾರತೀಯರಿಗೆ ಸಿಕ್ಕ ಹೆಗ್ಗಳಿಕೆ ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಲಾಲ್ ಬಹುದ್ದೂರ್ ಶಾಸ್ತ್ರಿ ಜಯಂತಿ ಅಂಗವಾಗಿ ಶಾಸ್ತ್ರಿಗಳ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ ಅವರು ಅತ್ಯಂತ ಪ್ರಾಮಾಣಿಕ ನಾಯಕ ಹಾಗೂ ರಾಜಕಾರಣಿ ಇವರೆಲ್ಲರ ಬದುಕಿನ ಸಂದೇಶಗಳನ್ನು ನಮಗೆ ಮಾರ್ಗದರ್ಶನವಾದರೆ, ಅವರು ಹಾಕಿಕೊಟ್ಟ ದಾರಿಯಲ್ಲೇ ನಾವು ನಡೆಯಬೇಕು. ಹಾಗಿದ್ದರೆ ಮಾತ್ರ ನಾವು ನಮ್ಮ ಮಹಾತ್ಮರಿಗೆ ಸಲ್ಲಿಸುವ ಗೌರವ ಎಂದರು.
ಕಾರ್ಯಕ್ರಮದಲ್ಲಿ ಕಾನೂನು ಸಚಿವ ಎಚ್.ಕೆ.ಪಾಟೀಲ್, ಗಾಂಧಿ ಭವನ ಕಾರ್ಯದರ್ಶಿ ವಿಶುಕುಮಾರ್ ಹಾಗೂ ಎಲ್ಲರ ಗಾಂಧಿ ಕೃತಿಯ ಲೇಖಕ ನಟರಾಜ್ ಹುಳಿಯಾರ್ ಇನ್ನಿತರ ಸಾಧಕರು ಉಪಸ್ಥಿತರಿದ್ದರು.
ಮೈಸೂರು : ನಗರದ ಎನ್ಐಇ ಕಾಲೇಜು ಹಿಂಭಾಗದ ಅರಣ್ಯ ಇಲಾಖೆಯ ಶ್ರೀಗಂಧದ ಕೋಠಿ ಆವರಣದಲ್ಲಿ ಕ್ವಾರ್ಟರ್ಸ್ ಕಟ್ಟಡ ನಿರ್ಮಾಣಕ್ಕಾಗಿ ಹತ್ತಾರು…
ಮೈಸೂರು : ಕರ್ನಾಟಕದ ಕಲಾ-ಶಿಲ್ಪ ಪರಂಪರೆಯು ಮತ್ತೊಮ್ಮೆ ರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿದೆ. ಮೈಸೂರಿನ ಖ್ಯಾತ ಕರಕುಶಲ ಶಿಲ್ಪಿ ಕೈಸರ್…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತವಾಗಿ ಗುರುವಾರದಿಂದ ಬಜೆಟ್ ತಯಾರಿಕೆಯ ಪೂರ್ವಭಾವಿ ಸಭೆಗಳನ್ನು ಆರಂಭಿಸಿದ್ದಾರೆ. ಮಾರ್ಚ್.6ರಂದು ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಅವರು ತಮ್ಮ…
ಮೈಸೂರು: ಬಿಗ್ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮೈಸೂರಿನ ಲಕ್ಷ್ಮೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ…
ಬೆಂಗಳೂರು: ಮೆಟ್ರೋ ಪ್ರಯಾಣ ದರ ಹೆಚ್ಚಳ ಮಾಡಿರುವುದನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸಮರ್ಥಿಸಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು,…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಹಸುಗಳ ಮರಣ ಮೃದಂಗ ಮುಂದುವರೆದಿದ್ದು ಸಂಬಂಧಪಟ್ಟ ಪಶುಸಂಗೋಪನಾ…