ರಾಜ್ಯ

ಎಲ್ಲಾ ನ್ಯಾಯಾಲಯಗಳಿಗಿಂತ ಅತ್ಯುನ್ನತವಾದ ನ್ಯಾಯಾಲಯ ಆತ್ಮಸಾಕ್ಷಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಎಲ್ಲಾ ನ್ಯಾಯಾಲಯಗಳಿಗಿಂತ ಅತ್ಯುನ್ನತವಾದ ನ್ಯಾಯಾಲಯ ಆತ್ಮಸಾಕ್ಷಿ ಎಂಬ ಗಾಂಧೀಜಿ ಅವರ ಮಾತನ್ನು ಸಿಎಂ ಸಿದ್ದರಾಮಯ್ಯ ಸ್ಮರಿಸಿದರು.

ಗಾಂಧೀಜಿ ದಿನಾಚರಣೆ ಪ್ರಯುಕ್ತ ಇಂದು(ಅ.2) ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಗಾಂಧಿ ಭವನದಲ್ಲಿ ಆಯೋಜಿಸಿದ್ದ ಗಾಂಧೀಜಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈಗಿರುವ ನ್ಯಾಯಾಲಯಗಳಿಂದ ಎಲ್ಲರಿಗೂ ನ್ಯಾಯ ಸಿಗದೇ ಹೋಗಬಹುದು. ಆದರೆ ನಾವು ನಮ್ಮ ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಳ್ಳಬೇಕು. ಯಾರಾದರೂ ಹೊಗಳಲಿ, ತೆಗಳಲಿ ಅಥವಾ ಟೀಕಿಸಲಿ, ಇಲ್ಲವಾ ಬಿಡಲಿ, ಉಳಿದವರು ಗುರುತಿಸಲಿ, ಬಿಡಲಿ ನಾವು ಪ್ರತಿಯೊಬ್ಬರೂ ನಮ್ಮ ಆತ್ಮಾಸಾಕ್ಷಿಯ ನ್ಯಾಯಾಲಯದಲ್ಲಿ ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಳ್ಳಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಆಶಯಗಳು ಕೇವಲ ಭಾಷಣದಿಂದ ಈಡೇರುವುದಿಲ್ಲ. ಈ ಇಬ್ಬರ ಜೀವನದ ಮೌಲ್ಯ ಹಾಗೂ ಸಂದೇಶಗಳನ್ನು ಜನ ಮಾನಸದಲ್ಲಿ ವಿಸ್ತರಿಸುತ್ತಲೇ ಸರ್ಕಾರ ಸಮ ಸಮಾಜ ನಿರ್ಮಿಸಲು ಪೂರಕವಾದ ಕಾರ್ಯಕ್ರಮಗಳನ್ನು ರೂಪಿಸಬೇಕಾಗುತ್ತದೆ. ನಾನು ಹಾಗೂ ನಮ್ಮ ಸರ್ಕಾರ ಇವರಿಬ್ಬರ ದಿಕ್ಕಿನಲ್ಲಿ ಸಾಗುತ್ತವೆ ಎಂದು ಹೇಳಿದರು.

ಗಾಂಧೀಜಿ ಅವರ ಈ ಹೋರಾಟದಿಂದಲೇ ನಾವು ಇಂದು ಸ್ವಾತಂತ್ರ್ಯವಾದ ಗಾಳಿ ಸೇವಿಸುತ್ತಿದ್ದೇವೆ. ಗಾಂಧಿ ಇಡೀ ಪ್ರಪಂಚದ ನಾಯಕ ಎನ್ನುವ ಗೌರವ ಸಿಕ್ಕಿರುವ ಭಾರತೀಯರಿಗೆ ಸಿಕ್ಕ ಹೆಗ್ಗಳಿಕೆ ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಲಾಲ್‌ ಬಹುದ್ದೂರ್‌ ಶಾಸ್ತ್ರಿ ಜಯಂತಿ ಅಂಗವಾಗಿ ಶಾಸ್ತ್ರಿಗಳ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ ಅವರು ಅತ್ಯಂತ ಪ್ರಾಮಾಣಿಕ ನಾಯಕ ಹಾಗೂ ರಾಜಕಾರಣಿ ಇವರೆಲ್ಲರ ಬದುಕಿನ ಸಂದೇಶಗಳನ್ನು ನಮಗೆ ಮಾರ್ಗದರ್ಶನವಾದರೆ, ಅವರು ಹಾಕಿಕೊಟ್ಟ ದಾರಿಯಲ್ಲೇ ನಾವು ನಡೆಯಬೇಕು. ಹಾಗಿದ್ದರೆ ಮಾತ್ರ ನಾವು ನಮ್ಮ ಮಹಾತ್ಮರಿಗೆ ಸಲ್ಲಿಸುವ ಗೌರವ ಎಂದರು.

ಕಾರ್ಯಕ್ರಮದಲ್ಲಿ ಕಾನೂನು ಸಚಿವ ಎಚ್‌.ಕೆ.ಪಾಟೀಲ್‌, ಗಾಂಧಿ ಭವನ ಕಾರ್ಯದರ್ಶಿ ವಿಶುಕುಮಾರ್‌ ಹಾಗೂ ಎಲ್ಲರ ಗಾಂಧಿ ಕೃತಿಯ ಲೇಖಕ ನಟರಾಜ್‌ ಹುಳಿಯಾರ್‌ ಇನ್ನಿತರ ಸಾಧಕರು ಉಪಸ್ಥಿತರಿದ್ದರು.

ಅರ್ಚನ ಎಸ್‌ ಎಸ್

Recent Posts

ಮೈಸೂರು | ಪೊಲೀಸರ ಬಲೆಗೆ ಬಿದ್ದ ಸುಪಾರಿ ಗ್ಯಾಂಗ್‌

ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…

1 hour ago

ಗ್ರಾಹಕರಿಕೆ ಶಾಕ್‌ : ಪೆಟ್ರೋಲ್‌, ಡಿಸೇಲ್‌ ಬೆಲೆ ಮತ್ತೆ ಏರಿಕೆ

ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್‍ಗೆ…

3 hours ago

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ:ಈಶ್ವರ ಖಂಡ್ರೆ

ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…

4 hours ago

ಪಶ್ಚಿಮ ಬಂಗಾಳ : ಒಬಿಸಿ ಪಟ್ಟಿ ಮರುಸಂರಚನೆ

ಆರ್‌ಎಸ್‌ಎಸ್‌ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್‌ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…

5 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ | ಆಳುವ ಸರ್ಕಾರ ಎಚ್ಚರ ತಪ್ಪಿದರೆ ಪ್ರತಿರೋಧ ಖಚಿತ

ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…

5 hours ago

ಆಂದೋಲನ ಸಂಪಾದಕೀಯ | ಇಂಧನ ದರ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಮುಂದಾಗಲಿ

ಕೇವಲ ಹತ್ತು ದಿನಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಮೂರು ಬಾರಿ ಹೆಚ್ಚಳವಾಗಿದೆ. ಇದು ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ…

6 hours ago