ರಾಜ್ಯ

ಒಮ್ಮತದ ಅಭ್ಯರ್ಥಿ ಆಯ್ಕೆ ಆಗಿದೆ ; ಅಲ್ಪಸಂಖ್ಯಾತರು ಟಿಕೆಟ್ ಕೇಳುವುದರಲ್ಲಿ ತಪ್ಪಿಲ್ಲ : ಡಿಸಿಎಂ ಡಿ.ಕೆ

ಬೆಂಗಳೂರು : ದಾವಣಗೆರೆ ಮತ್ತು ಬಾಗಲಕೋಟೆ ಉಪ ಚುನಾವಣೆಗೆ ಕಾಂಗ್ರೆಸ್‌ನಿಂದ ಒಮ್ಮತದಿಂದ ಅಭ್ಯರ್ಥಿ ಆಯ್ಕೆ ಆಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಕಾಂಗ್ರೆಸ್ ನಿಂದ ಅಭ್ಯರ್ಥಿ ಘೋಷಣೆ ಆದ ಬಳಿಕ ಅಭ್ಯರ್ಥಿಗಳಿಗೆ ಬಿ ಫಾರಂ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಗಲಕೋಟೆ ವಿಧಾನಸಭೆ ಟಿಕೆಟ್‌ನ್ನು ಹೆಚ್‌.ವೈ.ಮೇಟಿ ಅವರ 2ನೇ ಮಗ ಉಮೇಶ್ ಮೇಟಿ ಅವರಿಗೆ ಹಾಗೂ ದಾವಣಗೆರೆ ದಕ್ಷಿಣ ಟಿಕೆಟ್‌ನ್ನು ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ್ ಮಲ್ಲಿಕಾರ್ಜುನ ಅವರಿಗೆ ನೀಡಲಾಗಿದೆ ಎಂದರು.

ನಾನು ಸೇರಿದಂತೆ ಸಿಎಂ ಹಾಗೂ ಜಮೀರ್ ಅಹಮದ್, ನಾಸಿರ್‌ ಹುಸೇನ್, ಸಲೀಂ ಅಹ್ಮದ್, ಹ್ಯಾರಿಸ್, ಜಬ್ಬಾರ್ ಅವರು ಎಲ್ಲ ಅಲ್ಪಸಂಖ್ಯಾತ ನಾಯಕರು, ಎಐಸಿಸಿ ಕಾರ್ಯದರ್ಶಿಗಳ ಜೊತೆ ಮಾತನಾಡಿ ಒಮ್ಮತದ ತೀರ್ಮಾನಕ್ಕೆ ಬಂದು ಶಾಮನೂರು ಅವರ ಕುಟುಂಬಕ್ಕೆ ಅವಕಾಶ ಮಾಡಿಕೊಡಲಾಗಿದೆ. ಒಗ್ಗಟ್ಟಿನಿಂದ ಉಪ ಚುನಾವಣೆ ಮಾಡಿ ಎರಡೂ ಕ್ಷೇತ್ರಗಳನ್ನು ಗೆಲ್ಲಿಸಿಕೊಂಡು ಬರುವ ತೀರ್ಮಾನ ಮಾಡಲಾಗಿದೆ ಎಂದು ಹೇಳಿದರು.

ಶಾಸಕಾಂಗ ಪಕ್ಷದ ಸಭೆಯನ್ನು ಬುಧವಾರ ನಿಗಧಿ ಮಾಡಲಾಗಿದೆ. ಎಐಸಿಸಿ ಕಾರ್ಯದರ್ಶಿಗಳು ಸಹ ಸಭೆಯಲ್ಲಿ ಭಾಗವಹಿಸಲಿದ್ದಾರೆ ಅಂತ ಮಾಹಿತಿ ನೀಡಿದರು.

ದಾವಣಗೆರೆ ಟಿಕೆಟ್ ವಿಚಾರದಲ್ಲಿ ಅಲ್ಪಸಂಖ್ಯಾತರು ಸಮಾಧಾನಗೊಂಡಿದ್ದಾರೆಯೇ ಎಂದು ಕೇಳಿದಾಗ, ಅವರುಗಳು ಟಿಕೆಟ್ ಕೇಳುವುದರಲ್ಲಿ ತಪ್ಪಿಲ್ಲ. ಜನಸಂಖ್ಯೆ ಆಧಾರದ ಮೇಲೆ ಕೇಳುತ್ತಿದ್ದಾರೆ. ಅವರದ್ದು ತಪ್ಪಿಲ್ಲ. ದಿನಾಂಕ ಚೆನ್ನಾಗಿದೆ ಎಂದು ನಾಮಪತ್ರ ಸಲ್ಲಿಕೆ ಮಾಡಿರುವುದಾಗಿ ಮಲ್ಲಿಕಾರ್ಜುನ್ ಅವರು ಹೇಳಿದರು. ನಮಗೂ ನಂಬಿಕೆ ಇದ್ದಂತೆ ಅವರಿಗೂ ಇದೆ. ಪಕ್ಷ ಹೇಳಿದರೆ ವಾಪಸ್ ಪಡೆಯುವುದಾಗಿ ತಿಳಿಸಿದ್ದಾರೆ‌.

ಬಿಜೆಪಿ ಜೆಡಿಎಸ್ ಅವರು ಅಲ್ಪಸಂಖ್ಯಾತ ಅಭ್ಯರ್ಥಿಗಳನ್ನು ನಿಲ್ಲಿಸುತ್ತಿರುವ ಬಗ್ಗೆ ಕೇಳಿದಾಗ, ಗೊತ್ತು, ಈ ಎಲ್ಲಾ ಪ್ರಯತ್ನ ನಡೆಯುತ್ತಾ ಇದೆ. ರಾಜಕಾರಣ ಅಂದ ಮೇಲೆ ಅವರು ಡಿಫರೆನ್ಸ್ ಉಂಟು ಮಾಡುತ್ತಾರೆ, ನಾವೂ ಮಾಡುತ್ತೇವೆ. ಅವರಲ್ಲಿ ಒಮ್ಮತ ಇದೆಯೇ? ಇಬ್ಬರು ಗಲಾಟೆ ಮಾಡಿದ್ದಕ್ಕೆ ಮೂರನೆಯವರಿಗೆ ನೀಡಿದ್ದಾರೆ. ನಾನು ಏಕೆ ಅದನ್ನು ಚರ್ಚೆ ಮಾಡಲು ಹೋಗಲಿ. ಅದು ಅವರ ಪಕ್ಷದ ತೀರ್ಮಾನ ಇದು ನಮ್ಮ ಪಕ್ಷದ ತೀರ್ಮಾನ ಎಂದು ಸ್ಪಷ್ಟಪಡಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

4 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

4 hours ago

ಓದುಗರ ಪತ್ರ: ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆ: ಮನಸ್ಸುಗಳಿಗಿಲ್ಲ ‘ಕೂಲ್‌ಕೂಲ್’

ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್‌ ಫಾರ್ಮ್‌ಗಳಲ್ಲಿ  ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್‌ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…

7 hours ago

ಓದುಗರ ಪತ್ರ: ಕೆಎಸ್‌ಪಿಸಿಬಿಯನ್ನು ರಾಜಕೀಯ ಮುಕ್ತಗೊಳಿಸಿ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…

7 hours ago

ಓದುಗರ ಪತ್ರ: ಪರಸ್ಪರ ಗೌರವಕ್ಕೆ ಮತ್ತೊಮ್ಮೆ ಕನ್ನಡಿ

ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…

8 hours ago

ನಡೆಯದ ಸಂಸತ್ ಕಲಾಪ; ಕುಗ್ಗಿದ ಮೋದಿ-ಶಾ ವರ್ಚಸ್ಸು

ದೆಹಲಿ ಕಣ್ಣೋಟ ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…

8 hours ago