ಬೆಂಗಳೂರು : ವಿದ್ಯಾರ್ಥಿಗಳಿಗೆ ಹಿಂದಿ ಪಾಸ್ ಕಡ್ಡಾಯ ಮಾಡದಂತೆ ಕನ್ನಡಪರ ಸಂಘಟನೆಗಳಿಂದ ಒತ್ತಾಯ ಕೇಳಿಬಂದ ಬೆನ್ನಲ್ಲೇ ರಾಜ್ಯದಲ್ಲಿ ದ್ವಿಭಾಷಾ ಸೂತ್ರ ಜಾರಿಗೆ ಚಿಂತನೆ ನಡೆದಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಈ ಹಿಂದೆಯೂ ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳನ್ನ ಮಾತ್ರ ಒಳಗೊಂಡ ‘ದ್ವಿಭಾಷಾ ನೀತಿ’ಯನ್ನು ಜಾರಿಗೆ ತರಲು ಪ್ರೊ.ಸುಖದೇವ್ ಥೋರಟ್ ನೇತೃತ್ವದ ರಾಜ್ಯ ಶಿಕ್ಷಣ ನೀತಿ ಆಯೋಗ ಶಿಫಾರಸು ಮಾಡಿತ್ತು. ಈ ನೀತಿಯು ಮಾತೃಭಾಷೆ/ಕನ್ನಡಕ್ಕೆ ಆದ್ಯತೆ ನೀಡುತ್ತಿದ್ದು, ಹಿಂದಿ ಭಾಷೆಯ ಕಡ್ಡಾಯ ಕಲಿಕೆಯನ್ನು ಕೈಬಿಡುವ ಗುರಿ ಹೊಂದಿತ್ತು.
ಕನ್ನಡ ಪದ ಸಂಘಟನೆಗಳ ಮನವಿ ಏನು?
ಕರವೇ ಶಿವರಾಮೇಗೌಡ, ಸಾರಾ ಗೋವಿಂದ್ ನೇತೃತ್ವದಲ್ಲಿ ಇಂದು(ಮಾರ್ಚ್.27) ಬೆಂಗಳೂರಿನ ಸದಾಶಿವನಗರದಲ್ಲಿರುವ ಸಚಿವ ಮಧು ಬಂಗಾರಪ್ಪ ಅವರನ್ನ ಭೇಟಿಯಾದ ಕನ್ನಡ ಪರ ಸಂಘಟನೆಗಳು ವಿದ್ಯಾರ್ಥಿಗಳಿಗೆ ಹಿಂದಿ ಪಾಸ್ ಕಡ್ಡಾಯ ಮಾಡದಂತೆ ಮನವಿ ಮಾಡಿವೆ. ಶಿಕ್ಷಣದಲ್ಲಿ ತ್ರಿಭಾಷ ಸೂತ್ರ ರದ್ದು ಮಾಡಿ, ದ್ವಿಭಾಷಾ ಸೂತ್ರ ಜಾರಿ ಮಾಡುವಂತೆ ಮನವಿ ಮಾಡಿವೆ.
ಸಚಿವ ಮಧು ಬಂಗಾರಪ್ಪ ಹೇಳಿದ್ದೇನು?
ಕನ್ನಡ ಪರ ಸಂಘಟನೆಗಳ ಮನವಿ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಹಿಂದಿ ಅವಶ್ಯಕತೆ ಇಲ್ಲ ಅಂತ ಕನ್ನಡಪರ ಸಂಘಟನೆಗಳು ಹೇಳ್ತಿವೆ. ಸಿಎಂ ಕೂಡ ದ್ವಿಭಾಷಾ ಸೂತ್ರ ತಂದರೆ ಒಳ್ಳೆಯದು ಅಂತ ಹೇಳಿದ್ದಾರೆ. ದ್ವಿಭಾಷಾ ಸೂತ್ರ ಬಂದರೆ ಒಳ್ಳೆಯದು. ಈಗ ತ್ರಿಭಾಷಾ ಸೂತ್ರ ಇದೆ. ಇದು ಬದಲಾವಣೆ ಆಗಬೇಕಾದ್ರೆ ಚರ್ಚೆ ಆಗಬೇಕು. ಶಿಕ್ಷಕರ ಜೊತೆಯೂ ಮಾತಾಡ್ತೀವಿ, ಸಿಎಂ ಜೊತೆ ನಾವು ಮಾತಾಡಬೇಕು. ಎಲ್ಲಾ ಆಯಾಮಗಳಲ್ಲಿ ಚರ್ಚಿಸಿದ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ. ಹಾಗಾಗಿ ಯಾರೂ ಪರೀಕ್ಷಾ ಕೇಂದ್ರಗಳಿಗೆ ಮುತ್ತಿಗೆ ಹಾಕೋದು ಬೇಡ. ಸಿಎಂ ಜೊತೆ ಮಾತಾಡಿ ಇಂದೇ ಈ ಬಗ್ಗೆ ನಿರ್ಧಾರ ಮಾಡ್ತೀವಿ ಎಂದು ಹೇಳಿದ್ದಾರೆ.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…