ರಾಜ್ಯ

ಸೂಪರ್ ಸ್ಪೆಷಾಲಿಟಿ ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳಕ್ಕೆ ಚಿಂತನೆ: ಡಾ. ಶರಣ್‌ ಪ್ರಕಾಶ್‌ ಪಾಟೀಲ್‌

ಜಯದೇವ ಆಸ್ಪತ್ರೆಯಲ್ಲಿ ನವೀಕರಣಕ್ಕೆ ಆದ್ಯತೆ, ಸಿಬ್ಬಂದಿ ವೇತನ ಏರಿಕೆಗೆ ಕ್ರಮ

ಬೆಂಗಳೂರು: ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರ ನಿವೃತ್ತಿ ವಯಸ್ಸನ್ನು ಪ್ರಸ್ತುತ 60 ವರ್ಷದಿಂದ 65 ವರ್ಷಕ್ಕೆ ಹೆಚ್ಚಿಸುವ ಬಗ್ಗೆ ಚಿಂತನೆ ನಡೆದಿದೆ.

ಜಯದೇವ ಹೃದಯ ರಕ್ತನಾಳ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ವೈದ್ಯರೊಂದಿಗೆ ಗುರುವಾರ ನಡೆದ ಸಂವಾದದ ವೇಳೆ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ಈ ವಿಷಯ ತಿಳಿಸಿದರು.

ಸಂವಾದದ ವೇಳೆ ಜಯದೇವದ ಹಿರಿಯ ವೈದ್ಯರು ಕೆಲವು ವಿಷಯ ಪ್ರಸ್ತಾಪಿಸಿದರು. ವೈದ್ಯಕೀಯ ಶಿಕ್ಷಣ ಮತ್ತು ತರಬೇತಿ ಪಡೆದ ನಂತರ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ವೈದ್ಯರಾಗಿ ಕಾರ್ಯ ನಿರ್ವಹಿಸಲು ಅತಿ ಹೆಚ್ಚು ವರ್ಷಗಳನ್ನು ವ್ಯಯಿಸಿರಲಾಗಿರುತ್ತದೆ. 60 ನೇ ವಯಸ್ಸಿನಲ್ಲಿ ನಿವೃತ್ತರಾಗುವ ಮೊದಲು ನಮಗೆ 20-25 ವರ್ಷಗಳ ಕಾಲ ಮಾತ್ರ ಸೇವೆ ಸಲ್ಲಿಸಲು ಅವಕಾಶ ಲಭ್ಯವಾಗಿರುತ್ತದೆ ಎಂದು ವೈದ್ಯರು ಗಮನ ಸೆಳೆದರು.

ಆಗ ಸಚಿವರು ಮಾತನಾಡಿ, ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಅನುಭವಿ ವೈದ್ಯರನ್ನು ಉಳಿಸಿಕೊಳ್ಳಲು ನಿವೃತ್ತಿ ವಯಸ್ಸನ್ನು ವಿಸ್ತರಿಸಲು ಸರ್ಕಾರ ಉತ್ಸುಕವಾಗಿದೆ ಎಂದು ವೈದ್ಯಕೀಯ ವೃತ್ತಿಪರರಿಗೆ ಭರವಸೆ ನೀಡಿದರು.

“ಉತ್ತಮ ಆರೋಗ್ಯ ಸೇವೆಗಳನ್ನು ಖಚಿತಪಡಿಸಿಕೊಳ್ಳಲು ಮತ್ತು ನಮ್ಮ ಅನುಭವಿ ವೈದ್ಯರ ಸೇವೆಯನ್ನು ಸದುಪಯೋಗಪಡಿಸಿಕೊಳ್ಳಲು, ನಾನು ಶೀಘ್ರದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಈ ವಿಷಯವನ್ನು ಚರ್ಚಿಸುತ್ತೇನೆ ಮತ್ತು ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿನ ವೈದ್ಯರ ನಿವೃತ್ತಿ ವಯಸ್ಸನ್ನು ಹೆಚ್ಚಿಸಲು ಪ್ರಸ್ತಾಪಿಸುತ್ತೇನೆ” ಎಂದು ಡಾ. ಪಾಟೀಲ್ ಹೇಳಿದರು.

ವಿಮೆ ಸೇವೆ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು

ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಕೆಲಸ ಮಾಡುವ ವೈದ್ಯರಿಗೆ ಗಮನಾರ್ಹ ಸೌಲಭ್ಯಗಳನ್ನು ಸಚಿವರು ಇದೇ ಸಂದರ್ಭದಲ್ಲಿ ಘೋಷಿಸಿದರು.

ಪ್ರಸ್ತುತ, ಈ ವೈದ್ಯರು ಯಾವುದೇ ಸರ್ಕಾರಿ ವಿಮಾ ಯೋಜನೆಯಡಿಯಲ್ಲಿ ಒಳಗೊಳ್ಳುವುದಿಲ್ಲ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಡಿಯಲ್ಲಿ ಈಗಾಗಲೇ ಲಭ್ಯವಿರುವ ಜೀವನ ಸಂಜೀವಿನಿ ಎಂಬ ಯೋಜನೆಯನ್ನು ಜಾರಿಗೆ ತರಲು ಯೋಜಿಸುತ್ತಿದೆ ಎಂದು ತಿಳಿಸಿದರು.

ವೈದ್ಯಕೀಯ ಮೂಲಸೌಕರ್ಯವನ್ನು ಮತ್ತಷ್ಟು ಬಲಪಡಿಸಲು, ಜಯದೇವ ಆಸ್ಪತ್ರೆಗೆ ರೋಬೋಟಿಕ್ ಶಸ್ತ್ರಚಿಕಿತ್ಸಾ ಸೌಲಭ್ಯಗಳನ್ನು ಪರಿಚಯಿಸಲು ಸರ್ಕಾರ ಹೆಚ್ಚುವರಿ ಹಣವನ್ನು ಮಂಜೂರು ಮಾಡುತ್ತಿದೆ ಎಂದು ಸಚಿವರು ಘೋಷಿಸಿದರು.

“ವೈದ್ಯಕೀಯ ಕ್ಷೇತ್ರದಲ್ಲಿ ನಾವೀನ್ಯತೆ ಮತ್ತು ಮುಂಚೂಣಿ ತಂತ್ರಜ್ಞಾನ ತರಲು, ಜಯದೇವ ಸಂಸ್ಥೆಯಲ್ಲಿ ಆಧುನಿಕ ಸಾಧನಗಳನ್ನು ಅಳವಡಿಸಲು ಮತ್ತು ಮೂಲಸೌಕರ್ಯ ಅಭಿವೃದ್ಧಿಪಡಿಸಲು ನಾವು ಬದ್ಧರಾಗಿದ್ದೇವೆ ಎಂದರು.

ಇತರ ಪ್ರಮುಖ ಘೋಷಣೆಗಳು

*ಮಕ್ಕಳ ಹೃದಯ ಶಸ್ತ್ರಚಿಕಿತ್ಸಾ ವಿಭಾಗಕ್ಕೆ ಐದು ಹೆಚ್ಚುವರಿ ಆಪರೇಷನ್ ಥಿಯೇಟರ್‌ ಮಂಜೂರು.

*ಆಸ್ಪತ್ರೆಯಲ್ಲಿ ಮೀಸಲಾದ ಸಂಶೋಧನಾ ವಿಭಾಗದ ಸ್ಥಾಪನೆ.

*ವೈದ್ಯರಿಗೆ ಡಿಜಿಟಲೀಕೃತ ವೈದ್ಯಕೀಯ ದಾಖಲೆಗಳಿಗಾಗಿ ಇ-ಆಸ್ಪತ್ರೆ ಮತ್ತು ಕೇಂದ್ರೀಯ ಮೇಲ್ವಿಚಾರಣಾ ವ್ಯವಸ್ಥೆ.

*ಒಪ್ಪಂದ ಮತ್ತು ಹೊರಗುತ್ತಿಗೆ ವೈದ್ಯಕೀಯ ಮತ್ತು ವೈದ್ಯಕೀಯೇತರ ಸಿಬ್ಬಂದಿಗೆ ಸಂಬಳ ಹೆಚ್ಚಳ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹೆಣ್ಣು ಮಗು ಮಾರಾಟ ; ಐವರ ಬಂಧನ

ಚಾಮರಾಜನಗರ : ಆರು ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ನಗರದಲ್ಲಿ ನಡೆದಿದ್ದು, ಈ ಸಂಬಂಧ ಪೋಷಕರು ಸೇರಿದಂತೆ…

9 hours ago

ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ : ಗಡಿ ಜಿಲ್ಲೆಯಲ್ಲಿ ಅಮಾನವೀಯ ಘಟನೆ

ಹನೂರು : ಜಮೀನಿನಲ್ಲಿ ಹುರುಳಿ ಫಸಲನ್ನು ಹಸು ಮೇಯ್ದಿದ್ದದನ್ನು ಪ್ರಶ್ನೆಸಿದ್ದಕ್ಕೆ ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ…

10 hours ago

ಹಾಸನದಲ್ಲಿ ಜಾ.ದಳ ಶಕ್ತಿ ಪ್ರದರ್ಶನ : ಚುನಾವಣೆಗೆ ತಯಾರಾಗುವಂತೆ ಕಾರ್ಯಕರ್ತರಿಕೆ ಎಚ್‌ಡಿಕೆ ಕರೆ

ಹಾಸನ : ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಗುರಿಯೊಂದಿಗೆ ನಗರದಲ್ಲಿ ಆಯೋಜಿಸಿದ್ದ…

11 hours ago

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ; 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…

11 hours ago

ನಂಜನಗೂಡು | ಶ್ರೀಕಂಠೇಶ್ವರ ದೇವಾಲಯದ ಮುಂದಿನ ಅನಧಿಕೃತ ಅಂಗಡಿ ತೆರವು

ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು. ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ…

11 hours ago

ಚಿನ್ನ ಕಳ್ಳ ಸಾಗಾಣಿಕೆ ಪತ್ತೆ : 2.89 ಕೋಟಿ ರೂ. ಮೌಲ್ಯದ ಚಿನ್ನ ವಶ

ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್‌ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್‌ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…

12 hours ago