ಹರಿದ್ವಾರ: ದಸರಾ ಆರಂಭಕ್ಕೂ ಮುನ್ನ ಕಾವೇರಿ ಆರತಿ ಚಿಂತನೆ ನಡೆದಿದೆ ಎಂದು ಕೃಷಿ ಸಚಿವ ಹಾಗೂ ಕಾವೇರಿ ಆರತಿ ಅಧ್ಯಯನ ಸಮತಿ ಅಧ್ಯಕ್ಷ ಚಲುವರಾಯಸ್ವಾಮಿ ತಿಳಿಸಿದ್ದಾರೆ.
ಗಂಗಾ ಆರತಿಯ ಬಗ್ಗೆ ಅಧ್ಯಯನ ಪ್ರವಾಸದಲ್ಲಿರುವ ಅವರು, ಹರಿದ್ವಾರದಲ್ಲಿ ಮಾತನಾಡಿ, ತಲಕಾವೇರಿಯಲ್ಲಿ ಹುಟ್ಟುವ ಪವಿತ್ರಾ ಕಾವೇರಿ, ತಮಿಳುನಾಡಿನಲ್ಲಿಯೂ ಹರಿಯುತ್ತೆ. ಕಾವೇರಿ ನಮ್ಮ ಜೀವನದಿಯಾಗಿದೆ. ಹೀಗಾಗಿ ಕಾವೇರಿಗೆ ಗಂಗಾ ಆರತಿ ಮಾಡುತ್ತೇವೆ ಎಂದು ಹೇಳಿದರು.
ಕೆಆರ್ಎಸ್ ಗೆ ಬಾಗಿನ ಅರ್ಪಿಸುವಾಗ ಡಿಸಿಎಂ ಡಿಕೆ ಶಿವಕುಮಾರ್ ಕಾವೇರಿಗೆ ಗಂಗಾ ಆರತಿ ಸಲ್ಲಿಸಬೇಕು ಎಂದು ಹೇಳಿದ್ದರು. ಅದರಂತೆ ಅಧ್ಯಯನ ಪ್ರವಾಸ ಕೈಗೊಂಡಿದ್ದೇವೆ. ಈ ಬಾರಿಯ ದಸರಾ ವೇಳೆಗೆ ಕಾವೇರಿ ಆರತಿ ಪ್ರಾರಂಭಿಸುತ್ತೇವೆ ಎಂದರು.
ಹಳೆ ಮೈಸೂರು ಭಾಗದ ಎಲ್ಲ ಶಾಸಕರು ಮತ್ತು ಡಿಸಿ ಡಾ.ಕುಮಾರ್ ಸೇರಿದಂತೆ ನಮ್ಮ ನಿಯೋಗ ಇಂದು ಹರಿದ್ವಾರಕ್ಕೆ ಭೇಟಿ ನೀಡಿದೆ. ಹರಿದ್ವಾರದ ಗಂಗಾರತಿ ಪುರಾತನವಾದುದು. ನಾಳೆ ವಾರಣಾಸಿಯಲ್ಲಿ ಗಂಗಾರತಿ ನೋಡಲಿದ್ದೇವೆ ಎಂದರು.
ಎಲ್ಲರೂ ಸೇರಿ ಚರ್ಚೆ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸುತ್ತೇವೆ. ಆದಷ್ಟು ಬೇಗ ಕಾವೇರಿ ಆರತಿ ಮಾಡುವ ಸ್ಥಳ ಗುರುತು ಮಾಡುತ್ತೇವೆ. ಪ್ರಾರಂಭವಾಗುವುದು 4 ದಿನ ತಡವಾಗಬಹುದು. ಆದ್ರೆ ಕಾವೇರಿ ಆರತಿಯನ್ನ ನಿಲ್ಲಿಸಲ್ಲ. ದಸರಾ ವೇಳೆಗೆ ಕಾವೇರಿ ಆರತಿ ಪ್ರಾರಂಭ ಮಾಡಲು ಚಿಂತಿಸಿದ್ದೇವೆ ಎಂದು ತಿಳಿಸಿದರು.
ಬಳಿಕ ಗಂಗಾರತಿ ಸಮಿತಿಯ ಜೊತೆ ಚರ್ಚಿಸಿ ಮಾಹಿತಿ ಪಡೆದರು.
ನವೀನ್ ಡಿಸೋಜ ೩ ತಿಂಗಳಲ್ಲಿ ೧೩೮ ಎನ್ಡಿಪಿಎಸ್ ಪ್ರಕರಣ ದಾಖಲು; ೬ ಕೆ.ಜಿ. ೬೬೪ ಗ್ರಾಂ ಗಾಂಜಾ, ೩೫.೬೬ ಗ್ರಾಂ…
ಮಹಾದೇಶ್ ಎಂ.ಗೌಡ ಹನೂರು: ತಾಲ್ಲೂಕಿನ ೨೫ ಗ್ರಾಮ ಪಂಚಾಯಿತಿಗಳ ಪೈಕಿ ೨೧ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ೪೭ ಶುದ್ಧ ಕುಡಿಯುವ ನೀರಿನ…
ಎಸ್.ನಾಗಸುಂದರ್ ರೈತನಿಗೆ ಕೈಮೂಳೆ ಮುರಿತ: ಪಾಂಡವಪುರದಲ್ಲಿ ಅವಗಢ, ಸಾರ್ವಜನಿಕರ ಆಕ್ರೋಶ ಪಾಂಡವಪುರ: ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿ ಅವೈಜ್ಞಾನಿಕವಾಗಿ ಮತ್ತು…
ಎರಡನೇ ಬಾರಿ ಪ್ರಶಸ್ತಿ ಪಡೆದು ಗಮನಸೆಳೆದ ಪಂಚಾಯಿತಿ ಭೇರ್ಯ ಮಹೇಶ್ ಕೆ.ಆರ್.ನಗರ : ತಾಲೂಕಿನ ಅರ್ಜುನಹಳ್ಳಿ ಗ್ರಾಮ ಪಂಚಾಯಿತಿ ಗ್ರಾಮೀಣಾಭಿವೃದ್ಧಿ…
ನಂಜನಗೂಡಿನ ಜಾತ್ರೆ ಅಂದು ಹೇಗಿತ್ತೋ ಇಂದೂ ಹಾಗೆ ತನ್ನ ಆಚರಣೆಯ ಮುಗ್ಧತೆ ಉಳಿಸಿಕೊಂಡಿದೆ ಡಾ.ಹೆಚ್.ಸಿ.ಮಹದೇವಪ್ಪ, ಸಚಿವರು ನಂಜನಗೂಡಿನಿಂದ ಕೆಲವೇ ಮೈಲಿಗಳ…
ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರು: ಮಧ್ಯಪ್ರಾಚ್ಯ ದೇಶದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಜನಸಾಮಾನ್ಯರಿಗೆ ನಿತ್ಯ ಒಂದಲ್ಲಾ ಒಂದು ಬಿಸಿ ತಟ್ಟುತ್ತಿದೆ. ಕಟ್ಟಡ…