ರಾಜ್ಯ

ದಸರಾ ವೇಳೆಗೆ ಕಾವೇರಿ ಆರತಿ ಪ್ರಾರಂಭಿಸಲು ಚಿಂತನೆ: ಸಿಆರ್‌ಎಸ್

ಹರಿದ್ವಾರ: ದಸರಾ ಆರಂಭಕ್ಕೂ ಮುನ್ನ ಕಾವೇರಿ ಆರತಿ ಚಿಂತನೆ ನಡೆದಿದೆ ಎಂದು ಕೃಷಿ ಸಚಿವ ಹಾಗೂ ಕಾವೇರಿ ಆರತಿ ಅಧ್ಯಯನ ಸಮತಿ ಅಧ್ಯಕ್ಷ ಚಲುವರಾಯಸ್ವಾಮಿ ತಿಳಿಸಿದ್ದಾರೆ.

ಗಂಗಾ ಆರತಿಯ ಬಗ್ಗೆ ಅಧ್ಯಯನ ಪ್ರವಾಸದಲ್ಲಿರುವ ಅವರು, ಹರಿದ್ವಾರದಲ್ಲಿ ಮಾತನಾಡಿ, ತಲಕಾವೇರಿಯಲ್ಲಿ ಹುಟ್ಟುವ ಪವಿತ್ರಾ ಕಾವೇರಿ, ತಮಿಳುನಾಡಿನಲ್ಲಿಯೂ ಹರಿಯುತ್ತೆ. ಕಾವೇರಿ ನಮ್ಮ ಜೀವನದಿಯಾಗಿದೆ. ಹೀಗಾಗಿ ಕಾವೇರಿಗೆ ಗಂಗಾ ಆರತಿ ಮಾಡುತ್ತೇವೆ ಎಂದು ಹೇಳಿದರು.

ಕೆಆರ್‌ಎಸ್ ಗೆ ಬಾಗಿನ ಅರ್ಪಿಸುವಾಗ ಡಿಸಿಎಂ ಡಿಕೆ ಶಿವಕುಮಾರ್‌ ಕಾವೇರಿಗೆ ಗಂಗಾ ಆರತಿ ಸಲ್ಲಿಸಬೇಕು ಎಂದು ಹೇಳಿದ್ದರು. ಅದರಂತೆ ಅಧ್ಯಯನ ಪ್ರವಾಸ ಕೈಗೊಂಡಿದ್ದೇವೆ. ಈ ಬಾರಿಯ ದಸರಾ ವೇಳೆಗೆ ಕಾವೇರಿ ಆರತಿ ಪ್ರಾರಂಭಿಸುತ್ತೇವೆ ಎಂದರು.

ಹಳೆ ಮೈಸೂರು ಭಾಗದ ಎಲ್ಲ ಶಾಸಕರು ಮತ್ತು ಡಿಸಿ ಡಾ.ಕುಮಾರ್ ಸೇರಿದಂತೆ ನಮ್ಮ ನಿಯೋಗ ಇಂದು ಹರಿದ್ವಾರಕ್ಕೆ ಭೇಟಿ ನೀಡಿದೆ.  ಹರಿದ್ವಾರದ ಗಂಗಾರತಿ ಪುರಾತನವಾದುದು. ನಾಳೆ ವಾರಣಾಸಿಯಲ್ಲಿ ಗಂಗಾರತಿ ನೋಡಲಿದ್ದೇವೆ ಎಂದರು.

ಎಲ್ಲರೂ ಸೇರಿ ಚರ್ಚೆ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸುತ್ತೇವೆ. ಆದಷ್ಟು ಬೇಗ ಕಾವೇರಿ ಆರತಿ ಮಾಡುವ ಸ್ಥಳ ಗುರುತು ಮಾಡುತ್ತೇವೆ. ಪ್ರಾರಂಭವಾಗುವುದು 4 ದಿನ ತಡವಾಗಬಹುದು. ಆದ್ರೆ ಕಾವೇರಿ ಆರತಿಯನ್ನ ನಿಲ್ಲಿಸಲ್ಲ. ದಸರಾ ವೇಳೆಗೆ ಕಾವೇರಿ ಆರತಿ ಪ್ರಾರಂಭ ಮಾಡಲು ಚಿಂತಿಸಿದ್ದೇವೆ ಎಂದು ತಿಳಿಸಿದರು.

ಬಳಿಕ ಗಂಗಾರತಿ ಸಮಿತಿಯ ಜೊತೆ ಚರ್ಚಿಸಿ ಮಾಹಿತಿ ಪಡೆದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

2 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

3 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

4 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

4 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

5 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

6 hours ago