ಹರಿದ್ವಾರ: ದಸರಾ ಆರಂಭಕ್ಕೂ ಮುನ್ನ ಕಾವೇರಿ ಆರತಿ ಚಿಂತನೆ ನಡೆದಿದೆ ಎಂದು ಕೃಷಿ ಸಚಿವ ಹಾಗೂ ಕಾವೇರಿ ಆರತಿ ಅಧ್ಯಯನ ಸಮತಿ ಅಧ್ಯಕ್ಷ ಚಲುವರಾಯಸ್ವಾಮಿ ತಿಳಿಸಿದ್ದಾರೆ.
ಗಂಗಾ ಆರತಿಯ ಬಗ್ಗೆ ಅಧ್ಯಯನ ಪ್ರವಾಸದಲ್ಲಿರುವ ಅವರು, ಹರಿದ್ವಾರದಲ್ಲಿ ಮಾತನಾಡಿ, ತಲಕಾವೇರಿಯಲ್ಲಿ ಹುಟ್ಟುವ ಪವಿತ್ರಾ ಕಾವೇರಿ, ತಮಿಳುನಾಡಿನಲ್ಲಿಯೂ ಹರಿಯುತ್ತೆ. ಕಾವೇರಿ ನಮ್ಮ ಜೀವನದಿಯಾಗಿದೆ. ಹೀಗಾಗಿ ಕಾವೇರಿಗೆ ಗಂಗಾ ಆರತಿ ಮಾಡುತ್ತೇವೆ ಎಂದು ಹೇಳಿದರು.
ಕೆಆರ್ಎಸ್ ಗೆ ಬಾಗಿನ ಅರ್ಪಿಸುವಾಗ ಡಿಸಿಎಂ ಡಿಕೆ ಶಿವಕುಮಾರ್ ಕಾವೇರಿಗೆ ಗಂಗಾ ಆರತಿ ಸಲ್ಲಿಸಬೇಕು ಎಂದು ಹೇಳಿದ್ದರು. ಅದರಂತೆ ಅಧ್ಯಯನ ಪ್ರವಾಸ ಕೈಗೊಂಡಿದ್ದೇವೆ. ಈ ಬಾರಿಯ ದಸರಾ ವೇಳೆಗೆ ಕಾವೇರಿ ಆರತಿ ಪ್ರಾರಂಭಿಸುತ್ತೇವೆ ಎಂದರು.
ಹಳೆ ಮೈಸೂರು ಭಾಗದ ಎಲ್ಲ ಶಾಸಕರು ಮತ್ತು ಡಿಸಿ ಡಾ.ಕುಮಾರ್ ಸೇರಿದಂತೆ ನಮ್ಮ ನಿಯೋಗ ಇಂದು ಹರಿದ್ವಾರಕ್ಕೆ ಭೇಟಿ ನೀಡಿದೆ. ಹರಿದ್ವಾರದ ಗಂಗಾರತಿ ಪುರಾತನವಾದುದು. ನಾಳೆ ವಾರಣಾಸಿಯಲ್ಲಿ ಗಂಗಾರತಿ ನೋಡಲಿದ್ದೇವೆ ಎಂದರು.
ಎಲ್ಲರೂ ಸೇರಿ ಚರ್ಚೆ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸುತ್ತೇವೆ. ಆದಷ್ಟು ಬೇಗ ಕಾವೇರಿ ಆರತಿ ಮಾಡುವ ಸ್ಥಳ ಗುರುತು ಮಾಡುತ್ತೇವೆ. ಪ್ರಾರಂಭವಾಗುವುದು 4 ದಿನ ತಡವಾಗಬಹುದು. ಆದ್ರೆ ಕಾವೇರಿ ಆರತಿಯನ್ನ ನಿಲ್ಲಿಸಲ್ಲ. ದಸರಾ ವೇಳೆಗೆ ಕಾವೇರಿ ಆರತಿ ಪ್ರಾರಂಭ ಮಾಡಲು ಚಿಂತಿಸಿದ್ದೇವೆ ಎಂದು ತಿಳಿಸಿದರು.
ಬಳಿಕ ಗಂಗಾರತಿ ಸಮಿತಿಯ ಜೊತೆ ಚರ್ಚಿಸಿ ಮಾಹಿತಿ ಪಡೆದರು.
ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…
ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…
ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…
ಪಂಜು ಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…
ಕೇಶವ್ ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…