ಮೈಸೂರು: ಮೈಸೂರು ಕೊಡಗು ಕ್ಷೇತ್ರದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಂ ಸಿಂಹ ವಿರುದ್ಧದ ಅಕ್ರಮವಾಗಿ ಮರ ಕಡಿತ ಪ್ರಕರಣ ಸಂಬಂಧ ನಿರಂತರ ಟೀಕಾ ಪ್ರಹಾರ ಮಾಡುತ್ತಿರುವ ಕಾಂಗ್ರೆಸ್ ವಿರುದ್ಧ ಸಂಸದ ಪ್ರತಾಪ್ ಸಿಂಹ ಕಿಡಿಕಾರಿದ್ದಾರೆ.
ಮುಂದಿನ ಲೋಕಸಭಾ ಚುನಾವಣೆಯನ್ನು ನನ್ನನ್ನು ಸೋಲಿಸಲು ಸಾಧ್ಯವಿಲ್ಲ ಎಂದು ಮನಗಂಡಿರುವ ಕಾಂಗ್ರೆಸ್ ನನಗೆ ಟಿಕೆಟ್ ತಪ್ಪಿಸಲು ನಡೆಯುತ್ತಿರುವ ಪಿತೂರಿ ನಡೆಸುತ್ತಿದ್ದಾರೆ. ಇದೊಂದು ಸಂಪೂರ್ಣವಾಗಿ ದುರುದ್ದೇಶಪೂರಿತ ರಾಜಕಾರಣವಾಗಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.
ಈ ವಿಷಯದಲ್ಲಿ ಇದೇ ನನ್ನ ಕೊನೆಯ ಪ್ರತಿಕ್ರಿಯೆ. ಡಾ. ಪರಮೇಶ್ವರ ಸಾಹೇಬರೇ, ರಾಜಕಾರಣ ಮಾಡುತ್ತಿರುವವರು ಯಾರು? A1, A2ಗೆ ಸ್ಟೇಷನ್ ನಲ್ಲೇ ಬೈಲ್ ಕೊಡುತ್ತೀರಿ, FIRನಲ್ಲಿ ಹೆಸರೇ ಇಲ್ಲದ ನನ್ನ ತಮ್ಮನಿಗೆ ಕೋರ್ಟ್ ಬೈಲ್! ನನ್ನನ್ನು ಚುನಾವಣೆಯಲ್ಲಿ ಸೋಲಿಸಲು ಸಾಧ್ಯವಿಲ್ಲ ಎಂದು ಟಿಕೆಟ್ ತಪ್ಪಿಸಲು ನಡೆಯುತ್ತಿರುವ ಪಿತೂರಿಯಿದು. ಸಚಿವ ಮಧು ಬಂಗಾರಪ್ಪ ಅವರ ಆರೂವರೆ ಕೋಟಿ ಚೆಕ್ ಬೌನ್ಸ್ ಪ್ರಕರಣ ಸಾಭೀತಾಗುತ್ತಿದ್ದಂತೆ ಈ ವಿಷಯದಿಂದ ಮಾಧ್ಯಮ ಮತ್ತು ಜನರನ್ನು ಬೇರೆಡೆಗೆ ಸೆಳೆಯಲು ನನ್ನ ತಮ್ಮನ ಪ್ರಕರಣವನ್ನು ಮುನ್ನಲೆಗೆ ತರುತ್ತಾರೆ ಎಂದು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ವಿಡಿಯೋವೊಂದನ್ನು ಸಂಸದ ಪ್ರತಾಪ್ ಸಿಂಹ ಹಂಚಿಕೊಂಡಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…
ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…
ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು…