ಮೈಸೂರು: ಮೈಸೂರು ಕೊಡಗು ಕ್ಷೇತ್ರದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಂ ಸಿಂಹ ವಿರುದ್ಧದ ಅಕ್ರಮವಾಗಿ ಮರ ಕಡಿತ ಪ್ರಕರಣ ಸಂಬಂಧ ನಿರಂತರ ಟೀಕಾ ಪ್ರಹಾರ ಮಾಡುತ್ತಿರುವ ಕಾಂಗ್ರೆಸ್ ವಿರುದ್ಧ ಸಂಸದ ಪ್ರತಾಪ್ ಸಿಂಹ ಕಿಡಿಕಾರಿದ್ದಾರೆ.
ಮುಂದಿನ ಲೋಕಸಭಾ ಚುನಾವಣೆಯನ್ನು ನನ್ನನ್ನು ಸೋಲಿಸಲು ಸಾಧ್ಯವಿಲ್ಲ ಎಂದು ಮನಗಂಡಿರುವ ಕಾಂಗ್ರೆಸ್ ನನಗೆ ಟಿಕೆಟ್ ತಪ್ಪಿಸಲು ನಡೆಯುತ್ತಿರುವ ಪಿತೂರಿ ನಡೆಸುತ್ತಿದ್ದಾರೆ. ಇದೊಂದು ಸಂಪೂರ್ಣವಾಗಿ ದುರುದ್ದೇಶಪೂರಿತ ರಾಜಕಾರಣವಾಗಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.
ಈ ವಿಷಯದಲ್ಲಿ ಇದೇ ನನ್ನ ಕೊನೆಯ ಪ್ರತಿಕ್ರಿಯೆ. ಡಾ. ಪರಮೇಶ್ವರ ಸಾಹೇಬರೇ, ರಾಜಕಾರಣ ಮಾಡುತ್ತಿರುವವರು ಯಾರು? A1, A2ಗೆ ಸ್ಟೇಷನ್ ನಲ್ಲೇ ಬೈಲ್ ಕೊಡುತ್ತೀರಿ, FIRನಲ್ಲಿ ಹೆಸರೇ ಇಲ್ಲದ ನನ್ನ ತಮ್ಮನಿಗೆ ಕೋರ್ಟ್ ಬೈಲ್! ನನ್ನನ್ನು ಚುನಾವಣೆಯಲ್ಲಿ ಸೋಲಿಸಲು ಸಾಧ್ಯವಿಲ್ಲ ಎಂದು ಟಿಕೆಟ್ ತಪ್ಪಿಸಲು ನಡೆಯುತ್ತಿರುವ ಪಿತೂರಿಯಿದು. ಸಚಿವ ಮಧು ಬಂಗಾರಪ್ಪ ಅವರ ಆರೂವರೆ ಕೋಟಿ ಚೆಕ್ ಬೌನ್ಸ್ ಪ್ರಕರಣ ಸಾಭೀತಾಗುತ್ತಿದ್ದಂತೆ ಈ ವಿಷಯದಿಂದ ಮಾಧ್ಯಮ ಮತ್ತು ಜನರನ್ನು ಬೇರೆಡೆಗೆ ಸೆಳೆಯಲು ನನ್ನ ತಮ್ಮನ ಪ್ರಕರಣವನ್ನು ಮುನ್ನಲೆಗೆ ತರುತ್ತಾರೆ ಎಂದು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ವಿಡಿಯೋವೊಂದನ್ನು ಸಂಸದ ಪ್ರತಾಪ್ ಸಿಂಹ ಹಂಚಿಕೊಂಡಿದ್ದಾರೆ.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…