ರಾಜ್ಯ

ಜಾತಿಗಣತಿ ಸಮೀಕ್ಷೆ ಮೂಲಕ ಗ್ಯಾರಂಟಿ ಬಂದ್‌ ಮಾಡುವ ಸಂಚು: ಆರ್.‌ಅಶೋಕ್‌ ಆರೋಪ

ಬೆಂಗಳೂರು: ಹಿಂದುಳಿದ ವರ್ಗಗಳ ಶಾಶ್ವತ ಆಯೋಗದಿಂದ ರಾಜ್ಯಾದ್ಯಂತ ನಡೆಸುತ್ತಿರುವ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಉದ್ದೇಶವೇ ಗ್ಯಾರಂಟಿಗಳನ್ನು ಕಡಿತ ಮಾಡುವ ಏಕೈಕ ಗುರಿಯಾಗಿದೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಮತ್ತೆ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾನು ಈ ಹಿಂದೆ ನೀಡಿದ ಹೇಳಿಕೆಗೆ ಬದ್ದನಾಗಿದ್ದೇನೆ. ಶೈಕ್ಷಣಿಕ, ಸಾಮಾಜಿಕ ಸಮೀಕ್ಷೆ ಮೂಲಕ ಗ್ಯಾರಂಟಿಗಳನ್ನು ಬಂದ್ ಮಾಡಲು ಸಂಚು ರೂಪಿಸಿದ್ದಾರೆ. ಮುಂದಿನ ದಿನಗಳಲ್ಲಿ ಇದು ಜನರಿಗೆ ಗೊತ್ತಾಗಲಿದೆ ಎಂದು ಎಚ್ಚರಿಸಿದರು.

ಮಾಹಿತಿ ಪಡೆಯಲು ಬಲವಂತ ಮಾಡುವಂತಿಲ್ಲ ಎಂದು ಕೋರ್ಟ್ ಹೇಳಿದೆ. ಆದರೆ ಇವರು ಜನರ ವೈಯಕ್ತಿಕ ಮಾಹಿತಿ ಸಂಗ್ರಹ ಮಾಡುತ್ತಿದ್ದಾರೆ. ನ್ಯಾಯಾಲಯ ಹೇಳಿದಂತೆ ಸಮೀಕ್ಷೆ ನಡೆಯುತ್ತಿಲ್ಲ. ಇದು ಸಿದ್ದರಾಮಯ್ಯ ಅವರ ಸಮೀಕ್ಷೆ. ಗ್ಯಾರಂಟಿಗಳನ್ನು ಕಟ್ ಮಾಡಲು ಸಮೀಕ್ಷೆ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.

ಇದನ್ನು ಓದಿ: ರಾಜಕೀಯಕ್ಕಾಗಿ ಜಾತಿಗಣತಿ ಸಮೀಕ್ಷೆ: ಸಂಸದ ಯದುವೀರ್‌ ಒಡೆಯರ್‌

ಯಾವ ಪುರುಷಾರ್ಥಕ್ಕೆ ಹದಿನೈದೇ ದಿನ ನಿಗದಿ ಮಾಡಿದ್ದೀರಿ? ತರಬೇತಿ ಕೊಡದೇ ಸಮೀಕ್ಷೆಗೆ ಗಣತಿದಾರರನ್ನು ಕಳಿಸಿದ್ದಾರೆ. ಹದಿನೈದು ದಿನಗಳಲ್ಲಿ ಪ್ರಳಯ ಆಗುತ್ತಾ? ಕೇಂದ್ರದ ಗಣತಿಯನ್ನೂ ತಪ್ಪು ದಾರಿಗೆ ಎಳೆಯಲು ಈಗಿಂದಲೇ ಪ್ರಯತ್ನ ಮಾಡುತ್ತಿದ್ದಾರೆ. ಜಾತಿ ಜಾತಿಗಳ ನಡುವೆ ಗೊಂದಲ ಸೃಷ್ಟಿಸುತ್ತಿದ್ದಾರೆ. ದುರುದ್ದೇಶ ಸ್ವಾರ್ಥ, ದುರುಳತನ ಇರುವ ಸಮೀಕ್ಷೆ ಇದು ಎಂದು ಕಿಡಿಕಾರಿದರು.

ಹಲವು ಜಾತಿ ಸಮುದಾಯಗಳು ಸಮೀಕ್ಷೆ ಅವೈಜ್ಞಾನಿಕ ಎನ್ನುತಿವೆ. ಸಮೀಕ್ಷೆಯಲ್ಲಿ ಭಾಗವಹಿಸುವುದು, ಬಿಡುವುದು ಜನರ ವಿವೇಚನೆಗೆ ಬಿಟ್ಟ ವಿಚಾರ. ಕೋರ್ಟ್ ಕೂಡ ಕಡ್ಡಾಯವಲ್ಲ ಎಂದೇ ಹೇಳಿದೆ. ಕೇಂದ್ರ ಸರ್ಕಾರ ಜಾತಿ ಗಣತಿ ಮಾಡುತ್ತಿರುವುದು ಸಂವಿಧಾನದ ಪ್ರಕಾರ. ಆದರೆ ರಾಜ್ಯ ಸರ್ಕಾರ ಮಾಡುತ್ತಿರುವುದು ಸಂವಿಧಾನ ಪ್ರಕಾರ ಅಲ್ಲ. ತೇಜಸ್ವಿ ಸೂರ್ಯ ಅವರು ತಮ ವೈಯಕ್ತಿಕ ಹೇಳಿಕೆ ನೀಡಿದ್ದಾರೆ.

ಕೋರ್ಟ್ ಪ್ರಕಾರ, ಇಷ್ಟವಿದ್ದರೆ ಮಾಹಿತಿ ಕೊಡಬಹುದು ಇಲ್ಲದಿದ್ದರೂ ಬಿಡಬಹುದು. ವೈಯಕ್ತಿಕ ಮಾಹಿತಿ ಕೊಡುವುದು, ಬಿಡುವುದು ಜನರ ತೀರ್ಮಾನ. ಎಲ್ಲ ಮಾಹಿತಿ ಕೊಟ್ಟರೆ ಸರ್ಕಾರದ ಸೌಲಭ್ಯಕ್ಕೆ ಕೊಕ್ ಬೀಳಬಹುದು.

ಸಿದ್ದರಾಮಯ್ಯನವರದ್ದು ಜಾತಿ ಒಡೆಯುವ ಬ್ರಾಂಡ್. 15 ದಿನದಲ್ಲೇ ಸರ್ವೆ ಮಾಡಬೇಕು ಎನ್ನುವ ಆತುರ ಏಕೆ ? 15 ದಿನದಲ್ಲಿ ಸಿಎಂ ಬಿಟ್ಟೋಗುತ್ತಾರಾ? ತರಬೇತಿ ಇಲ್ಲದೇ ಸರ್ವೆಗೆ ಹೋಗುತ್ತಿದ್ದಾರೆ. ನಾಯಿಯಿಂದ ಕಚ್ಚಿಸಿಕೊಂಡು ಬರಲು ಸರ್ವೆಗೆ ಹೋಗಬೇಕಾ? ಎಂದು ಪ್ರಶ್ನಿಸಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

4 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

4 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

4 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

4 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

4 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

4 hours ago